ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 28 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು. ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಕುಮಾರಸ್ವಾಮಿ ಅವರು ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಗುರುವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅಪೊಲೋ ಆಸ್ಪತ್ರೆಗೆ ಭೇಟಿ ನೀಡಿದರು. ಸಚಿವರಾದ ಡಿ.ಕೆ.ಶಿವಕುಮಾರ್, ಎಚ್.ಆಂಜನೇಯ ಮುಂತಾದವರು ಈ ಸಂದರ್ಭದಲ್ಲಿ ಜೊತೆಗಿದ್ದರು.

ಎಚ್ ಡಿ ಕುಮಾರಸ್ವಾಮಿಗೆ ಆಪರೇಷನ್ ಸಕ್ಸಸ್ : ಡಾ.ಮಂಜುನಾಥಎಚ್ ಡಿ ಕುಮಾರಸ್ವಾಮಿಗೆ ಆಪರೇಷನ್ ಸಕ್ಸಸ್ : ಡಾ.ಮಂಜುನಾಥ

Chief Minister Siddaramaiah meets HD Kumaraswamy

ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಶೀಘ್ರ ಗುಣಮುಖರಾಗುವಂತೆ ಮುಖ್ಯಮಂತ್ರಿಗಳು ಹಾರೈಸಿದರು. ಅನಿತಾ ಕುಮಾರಸ್ವಾಮಿ ಅವರೊಂದಿಗೂ ಮಾತುಕತೆ ನಡೆಸಿದರು. ವೈದ್ಯರ ಜೊತೆ ಮಾತುಕತೆ ನಡೆಸಿ, ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು.

ಶೀಘ್ರ ಗುಣಮುಖವಾಗಲೆಂದು ಎಚ್ಡಿಕೆಗೆ ಶುಭ ಹಾರೈಸಿದ ಜಮೀರ್ಶೀಘ್ರ ಗುಣಮುಖವಾಗಲೆಂದು ಎಚ್ಡಿಕೆಗೆ ಶುಭ ಹಾರೈಸಿದ ಜಮೀರ್

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, 'ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಲು ಬಂದಿದ್ದೆ. ಅವರು ಆರೋಗ್ಯವಾಗಿದ್ದಾರೆ, ದಿನನಿತ್ಯದಂತೆ ಊಟ, ತಿಂಡಿ ಮಾಡುತ್ತಿದ್ದಾರೆ' ಎಂದರು.

'ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ, ಇನ್ನೂ ನಾಲ್ಕೈದು ದಿನಗಳ ಕಾಲ ಆಸ್ಪತ್ರೆಯಲ್ಲಿ ಇರಲಿದ್ದಾರೆ. ನಂತರ ಸುಮಾರು 1 ತಿಂಗಳು ವಿಶ್ರಾಂತಿ ಪಡೆಯಲಿದ್ದಾರೆ' ಎಂದು ಸಿದ್ದರಾಮಯ್ಯ ಹೇಳಿದರು.

'ರಾಜಕಾರಣ ಎಂದೂ ಇದ್ದಿದ್ದೆ, ಮೊದಲು ವಿಶ್ರಾಂತಿ ಪಡೆಯಿರಿ, ಸಂಚಾರ ನಡೆಸುವುದು ಬೇಡ ಎಂದು ಹೇಳಿದ್ದೇನೆ' ಎಂದು ಸಿದ್ದರಾಮಯ್ಯ ತಿಳಿಸಿದರು.

English summary
Karnataka Chief Minister Siddaramaiah visited Apollo hospital Bannerghatta road, Bengaluru and met JDS state president HD Kumaraswamy on September 28, 2017. H.D. Kumaraswamy underwent open-heart surgery and recovering in hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X