ಮೋದಿ ಅಫಿಡವಿಟ್: ಸಿದ್ದರಾಮಯ್ಯಗೆ ಕಾಡುತ್ತಿರುವ ಪ್ರಶ್ನೆ ಏನು?
ಬೆಂಗಳೂರು, ಏ 10: ಗುಜರಾತಿನ ವಡೋದರ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರದ ಜೊತೆ ನರೇಂದ್ರ ಮೋದಿ ಸಲ್ಲಿಸಿರುವ ಅಫಿಡವಿಟ್ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಹೋದ ವಿಧಾನಸಭಾ ಚುನಾವಣೆಯಲ್ಲಿ ಇಲ್ಲದ ಪತ್ನಿಯ ಹೆಸರು ಈಗಿನ ಚುನಾವಣೆಯಲ್ಲಿ ಹೇಗೆ ಬಂತು, ಇದರಿಂದಲೇ ತಿಳಿಯುತ್ತದೆ ನರೇಂದ್ರ ಮೋದಿ ಎಂತಹಾ ಮಹಾನ್ ಸುಳ್ಳುಗಾರ ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ.
ಕಳೆದ ಗುಜರಾತಿನ ವಿಧಾನಸಭಾ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುವಾಗ ಮೋದಿ ಬ್ರಹ್ಮಚಾರಿ ಎಂದು ಅಫಿಡವಿಟ್ ಸಲ್ಲಿಸಿದ್ದರು. ಈಗ ಜಶೋದಾಬೆನ್ ನನ್ನ ಪತ್ನಿ ಎಂದು ಅಫಿಡವಿಟ್ ನಲ್ಲಿ ನಮೂದಿಸುತ್ತಾರೆ. ಹೋದ ಚುನಾವಣೆಯಲ್ಲಿ ಇಲ್ಲದ ಪತ್ನಿ ಈಗ ಎಲ್ಲಿಂದ ಬಂದರು ಎನ್ನುವುದೇ ನನ್ನ ಪ್ರಶ್ನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. (ಜಶೋದಾಬೆನ್ ನನ್ನ ಹೆಂಡ್ತಿ: ನರೇಂದ್ರ ಮೋದಿ)

ಅವರ ಬಳಿ ಇರುವ ಆಸ್ತಿಯ ಬಗ್ಗೆ ನನಗೆ ತಿಳಿದಿಲ್ಲ ಎಂದು ನಮೂದಿಸುತ್ತಾರೆ. ಸುಳ್ಳನ್ನು ಸತ್ಯ ಮಾಡುವ ಕಲೆಯನ್ನು ನರೇಂದ್ರ ಮೋದಿ ಚೆನ್ನಾಗಿ ಕರಗತ ಮಾಡಿಕೊಂಡಿದ್ದಾರೆಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ನಗರದಲ್ಲಿ ಗುರುವಾರ (ಏ 10) ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಿದ್ದರಾಮಯ್ಯ, ಗುಜರಾತಿನಲ್ಲಿ ಅಭಿವೃದ್ದಿ ಮಾಡಿದ್ದೇನೆಂದು ಹೋದಲೆಲ್ಲಾ ಡಂಗುರ ಸಾರಿಕೊಂಡು ಬರುತ್ತಿದ್ದಾರೆ. ಅಭಿವೃದ್ದಿ ವಿಚಾರವನ್ನು ಮುಂದಿಟ್ಟು ಕೊಂಡು ರಾಜ್ಯದ ಜನತೆಗೆ ಮಂಕುಬೂದಿ ಎರಚಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ನಾನು ಮೋದಿಯವರನ್ನು ನರಹಂತಕ ಎಂದಿಲ್ಲ. ಮೋದಿ ಸರಕಾರ ನರಹಂತಕ ಸರಕಾರ ಎಂದಿದ್ದೇನೆ. ಮಾಧ್ಯಮದವರು ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ವರದಿಮಾಡಿವೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನ ಆಶೀರ್ವಾದ ಮಾಡಲಿದ್ದಾರೆ. ಇಪ್ಪತ್ತು ಸೀಟು ಗೆಲ್ಲುತ್ತೇವೆ ಎನ್ನುವ ಹಗಲುಕನಸು ಕಾಣುವುದನ್ನು ಬಿಜೆಪಿಯವರು ಬಿಡಲಿ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Anupama Gowda: ನನ್ನ ಮದುವೆಗೆ ನನ್ನನ್ನೂ ಕರೆಯಿರಿ: ಎಂಗೇಜ್ಮೆಂಟ್ ಸುದ್ದಿ ಹಬ್ಬಿಸಿದವರಿಗೆ ನಿರೂಪಕಿ ಅನುಪಮಾ ಗೌಡ ಕ್ಲಾರಿಟಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications