ಕಾರ್ಗಿಲ್ ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನಮನ!
ಬೆಂಗಳೂರು, ಜು. 26: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಇಂದು ಮಹತ್ವದ ದಿನ. ಒಂದೆಡೆ ಹೈಕಮಾಂಡ್ ಸೂಚನೆ ಕಾಯುತ್ತಿರುವುದಾಗಿ ಹೇಳಿಕೆ ನೀಡಿರುವ ಅವರು, ರಾಜಕೀಯ ಹೋಯ್ದಾಟದ ಮಧ್ಯೆ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಯಡಿಯೂರಪ್ಪ ಅವರು ನಮನ ಸಲ್ಲಿಸಿದರು. ಬೆಂಗಳೂರಿನ ನೆಹರು ತಾರಾಲಯದ ಎದುರಿನ ಇಂದಿರಾ ಗಾಂಧಿ ಸಂಗೀತ ಕಾರಂಜಿ ಉದ್ಯಾನವನದ ರಾಷ್ಟ್ರೀಯ ಮಿಲಿಟರಿ ಸ್ಮಾರಕದಲ್ಲಿ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಗಿಲ್ ಹುತಾತ್ಮ ಸೈನಿಕರಿಗೆ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, "ರಾಷ್ಟ್ರೀಯ ಸೈನಿಕ ಸ್ಮಾರಕ ಆಯೋಜಿಸಿದ ಕಾರ್ಗಿಲ್ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಹುತಾತ್ಮ ಸೈನಿಕರಿಗೆ ನಮನ ಸಲ್ಲಿಸಿದ್ದೇನೆ. ದೇಶಕ್ಕಾಗಿ ಮಡಿದ ಸೈನಿಕರಿಗೆ ನಮನ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ. ದೇಶದ ಸಮಗ್ರತೆ ಕಾಪಾಡುವ ಯೋಧರ ಹಿಂದೆ ಇಡೀ ರಾಜ್ಯವೇ ಇದೆ. ಯುದ್ಧ ಸಂತ್ರಸ್ಥ ಕುಟುಂಬಕ್ಕೆ ಸಿಗುವ ಎಲ್ಲಾ ಸೌಲಭ್ಯವನ್ನು ಸರ್ಕಾರ ಬದ್ಧತೆಯಿಂದ ಕೊಡುತ್ತದೆ. ಕಾರ್ಗಿಲ್ ಹುತಾತ್ಮರ ಯೋಧರ ಕುಟುಂಬದ ಜೊತೆ ನಾವು ಎಂದೆದಿಗೂ ಇರುತ್ತೆವೆ. ಅಜಿತ್ ಬಂಡಾರ್ಕಲ್ ಪ್ರತಿಮೆ ಶೌರ್ಯದ ಪ್ರತೀಕ. ನಾಡಿನ ಯೋಧರ ಕಲ್ಯಾಣಕ್ಕೆ ನಾವು ಯಾವತ್ತೂ ಬದ್ಧ" ಎಂದು ಹೇಳಿದರು.

ಇದೆ ಸಂದರ್ಭದಲ್ಲಿ ಶೌರ್ಯ ಚಕ್ರ ಪುರಸ್ಕೃತ ಲೆ. ಕರ್ನಲ್ ಅಜಿತ್ ವಿ. ಭಂಡಾರ್ಕರ್ ಅವರ ಆತ್ಮಚರಿತ್ರೆ 'Saga of a Braveheart' ಪುಸ್ತಕವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಬಿಡುಗಡೆ ಮಾಡಿದರು.

Recommended Video
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಉಪಸ್ಥಿತರಿದ್ದರು.
-
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications