ಕಾರ್ಮಿಕ ದಿನಾಚರಣೆಯಂದು ಯಡಿಯೂರಪ್ಪ ಟ್ವೀಟ್: ನೆಟ್ಟಿಗರಿಂದ ವಿರೋಧ!
ಬೆಂಗಳೂರು, ಮೇ 01: ಕೊರೊನಾ ವೈರಸ್ ಹರಡುವುದನ್ನು ತಡೆಯುವ ಹಿನ್ನೆಲೆಯಲ್ಲಿ ಕಳೆದ 38 ದಿನಗಳಿಂದ ಇಡೀ ದೇಶಾದ್ಯಂತ ಲಾಕ್ಡೌನ್ ಜಾರಿಯಲ್ಲಿದೆ. ಈ ಲಾಕ್ಡೌನ್ ಜಾರಿ ಆದಾಗಿನಿಂದ ಬೀದಿಗೆ ಬಿದ್ದವರು ದೇಶದ ಶ್ರಮಿಕರು ಹಾಗೂ ಕಾರ್ಮಿಕರು. ಹಳ್ಳಿಗಳಿಂದ ನಗರಗಳಿಗೆ ಬಂದಿದ್ದ ಕೋಟ್ಯಂತರ ಕಾರ್ಮಿಕರು ಆ ಕಡೆ ಕೆಲಸವೂ ಇಲ್ಲದೆ, ಈ ಕಡೆ ತಮ್ಮ ಮನೆಗೂ ಹೋಗಲಾಗದೇ ಬೀದಿಯಲ್ಲಿ ಜೀವನ ಕಳೆಯುವಂತಾಗಿದೆ. ಈ ಮಧ್ಯೆ ಕಾರ್ಮಿಕ ದಿನಾಚರಣೆಯು ಮುಗಿದಿದೆ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾಡಿರುವ ಟ್ವೀಟ್ಗೆ ಭಾರಿ ಟೀಕೆ, ವಿರೋಧ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧದ ಚರ್ಚೆ ನಡೆದಿದೆ.
ಲಾಕ್ಡೌನ್ನಿಂದ ದುಡಿದು ತಿನ್ನುವ ಕಾರ್ಮಿಕ ಬಂಧುಗಳು ಹೆಚ್ಚಿನ ತೊಂದರೆ ಅನುಭವಿಸುವಂತಾಗಿದೆ. ಇಂತಹ ಕಠಿಣ ಸಂದರ್ಭದಲ್ಲಿ ಸರ್ಕಾರ ನಿಮ್ಮ ಬೆನ್ನಿಗೆ ನಿಂತಿದೆ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಜೊತೆಗೆ ದೇಶದಲ್ಲಿ ಕೊರೊನಾ ವೈರಸ್ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಹೀಗಾಗಿ ಶೀಘ್ರವೇ ಆರ್ಥಿಕ ಚಟುವಟಿಕೆಗಳು ಪ್ರಾರಂಭವಾಗುವ ನಿರೀಕ್ಷೆಯಿದೆ. ಈ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ವಾಣಿಜ್ಯೋದ್ಯಮಿಗಳೊಂದಿಗೆ ಸಭೆ ನಡೆಸಿದ್ದು, ಕಾರ್ಮಿಕರ ಹಿತ ಕಾಯುವ ಹಾಗೂ ವೇತನ ಪಾವತಿ ಮಾಡುವಂತೆ ಮನವಿ ಮಾಡಿದೆ. ಹೀಗಾಗಿ ವಲಸೆ ಕಾರ್ಮಿಕರು ಆತಂಕಕ್ಕೆ ಒಳಗಾಗದೆ ಕೇಂದ್ರ ಸರ್ಕಾರದ ಸೂಚನೆ ಬಂದೊಡನೆ ಕೈಗಾರಿಕೆ ಹಾಗೂ ವಾಣಿಜ್ಯ ಚಟುವಟಿಕೆ ಪುನರಾರಂಭ ಮಾಡಲು ಸಹಕರಿಸುವಂತೆ ಮನವಿ ಮಾಡುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.
ಹಿಂದಿ ಭಾಷೆಯಲ್ಲಿ ಸಿಎಂ ಟ್ವೀಟ್, ನೆಟ್ಟಿಗರಿಂದ ವಿರೋಧ: ಕಾರ್ಮಿಕ ದಿನಾಚರಣೆ ಹಿನ್ನೆಲೆಯಲ್ಲಿ ಶ್ರಮಿಕರಲ್ಲಿ ಭರವಸೆ ತುಂಬಲು ಮುಖ್ಯಮಂತ್ರಿ ಮುಖ್ಯಮಂತ್ರಿ ಯಡಿಯೂಪ್ಪ ಟ್ವೀಟ್ ಮಾಡಿದ್ದಾರೆ. ಆದರೆ ಹಿಂದಿ ಭಾಷೆಯಲ್ಲಿ ಟ್ವೀಟ್ ಮಾಡಿದ್ದನ್ನು ಹಲವು ಕನ್ನಡಿಗರು ಪ್ರಶ್ನೆ ಮಾಡಿದ್ದಾರೆ. ಕನ್ನಡಿಗರ ಮೇಲೆ ಹಿಂದಿ ಹೇರಿಕೆ ಮಾಡಲಾಗಿದೆ ಎಂದು ಟ್ವಿಟ್ಟಿಗರು ಪರ-ವಿರೋಧದ ಚರ್ಚೆ ನಡೆಸಿದ್ದಾರೆ. ನೆಟ್ಟಿಗರು ಮಾಡಿರುವ ಟ್ವೀಟ್ಗಳು ಹೀಗಿವೆ:

ಯಡಿಯೂರಪ್ಪನವರೇ, ನಿಮ್ಮ ಈ ಮಾಹಿತಿ ಹಿಂದಿಯಲ್ಲಿ ಏಕಿದೆ?
ಮೊದಲು ತುಳು, ಕೊಂಕಣಿ, ಕೊಡವ ಟಕ್ ಬಾಶೆ ಬಳಸಿ.
ನಂತರ ತೆಲುಗು, ತಮಿಳು, ಮಲಯಾಳಂ, ಹಿಂದಿ ಬಳಸಿ.
ಈ ಹಿಂದಿ ಒಂದೇ ರೀತಿ ಯಾರನ್ನ ಮೆಚ್ಚಿಸೋಕೆ?
ಹಿಂದಿ ಬೆಲ್ಟ್ ರಾಜ್ಯಗಳಾದ MP,UP,Bihar ಇತ್ಯಾದಿ ಜಾಗದಲ್ಲಿ ಕನ್ನಡದಲ್ಲಿ ಮಾಹಿತಿ ಕೊಡ್ತಾರ?
3 language policy is our own grave that v have digged @nimmasuresh
ಮೊದಲು ಪೋಸ್ಟ್ ಆಫೀಸು ಇತ್ಯಾದಿಯಲ್ಲಿ ಹೀಗೆ ನುಗ್ಗಿದ ಹಿಂದಿ, ಇಂದು ಕನ್ನಡವನ್ ಹೊರ ದಬ್ಬಿದೆ.
ನಮಗೆ ಗುಲಾಮಗಿರಿ ಬೇಕಿಲ್ಲ, ಪರಿಸ್ಥಿತಿ ನೋಡಿ ಹಿಂದಿ ತೂರಬೇಡಿ

ಉತ್ತರಪ್ರದೇಶ ಮುಖ್ಯಮಂತ್ರಿಗಳ ಟ್ವಿಟ್ ನೀವು ಮಾಡಿದ ಹಾಗಿದೆ ಯಡಿಯೂರಪ್ಪನವರೇ
ಕರ್ನಾಟಕದಲ್ಲಿ ಕನ್ನಡ ಹಾಗೂ ಕರ್ನಾಟಕದ ನುಡಿಗಳು ಮಾತ್ರ ಬೇಕಾದ್ರೆ ಅಗತ್ಯವಿದ್ದಲ್ಲಿ ಇಂಗ್ಲಿಷ್.
@Karnataka_DIPR @Karmika_Sahaya @mani1972ias ಮುಖ್ಯಮಂತ್ರಿಗಳ ಟ್ವಿಟ್ ಸರಿ ಮಾಡಿಸಿ ಸ್ವಾಮಿ
ಹಿಂದಿ ಗುಲಾಮಗಿರಿ ಕನ್ನಡಿಗರಿಗೆ ಒಗ್ಗಲ್ಲ!
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications