ಕರ್ನಾಟಕದ ಕೊರೊನಾವೈರಸ್ ಸ್ಥಿತಿಗತಿ ಬಗ್ಗೆ ರಾಜ್ಯಪಾಲರಿಗೆ ವರದಿ
ಬೆಂಗಳೂರು, ಏಪ್ರಿಲ್ 12: ಕರ್ನಾಟಕದಲ್ಲಿ ಕೊರೊನಾವೈರಸ್ ಎರಡನೇ ಅಲೆ ನಿಯಂತ್ರಣಕ್ಕೆ ಯಾವ ರೀತಿ ಕ್ರಮ ತೆಗೆದುಕೊಳ್ಳಲಾಗಿದೆ ಎಂಬುದರ ಬಗ್ಗೆ ವರದಿ ಸಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲ ವಜೂಭಾಯ್ ವಾಲಾ ಸೂಚನೆ ನೀಡಿದ್ದಾರೆ.
ಸೋಮವಾರ ರಾಜ್ಯಪಾಲರ ಸೂಚನೆ ಮೇರೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವಿದ್ ಅಖ್ತರ್ ಅವರು ರಾಜಭವನಕ್ಕೆ ತೆರಳಿ ಕೊವಿಡ್-19 ಸ್ಥಿತಿಗತಿಯ ಬಗ್ಗೆ ಮಾಹಿತಿ ನೀಡಿದರು.
ರಾಜ್ಯದಲ್ಲಿ ಪ್ರಸ್ತುತ ಕೊರೊನಾವೈರಸ್ ಸೋಂಕಿನ ಹರಡುವಿಕೆ ಪ್ರಮಾಣ ಮತ್ತು ಅಂಕಿ-ಸಂಖ್ಯೆಗಳು ಎಷ್ಟಿದೆ ಎನ್ನುವುದರ ಕುರಿತು ರಾಜ್ಯಪಾಲರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ವರದಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಕರ್ನಾಟಕದಲ್ಲಿ ಕೊರೊನಾವೈರಸ್ ಕಂಡೀಷನ್:
ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದೇ ದಿನದಲ್ಲೇ 10 ಸಾವಿರದ ಗಡಿ ದಾಟಿದೆ. ರಾಜ್ಯದಲ್ಲಿ ಒಂದೇ ದಿನ 10250 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1065290ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 40 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 12889ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ 2638 ಸೋಂಕಿತರು ಗುಣಮುಖರಾಗಿದ್ದು, ರಾಜ್ಯದಲ್ಲಿ ಈವರೆಗೂ 983157 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ 69225 ಸಕ್ರಿಯ ಪ್ರಕರಣಗಳಿವೆ.
Recommended Video
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications