ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್
ಬೆಂಗಳೂರು, ಜುಲೈ 07 : ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದ ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್ ಕೆ ಇದೀಗ ಯುಟರ್ನ್ ಹೊಡೆದಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪದಚ್ಯುತಿಗೆ ನಿರ್ಧರಿಸಿದ್ದರಿಂದ ಅಸಮಾಧನಗೊಂಡು ಡಾ. ಸುಧಾಕರ್ ರಾಜೀನಾಮೆ ನೀಡುವ ಬಗ್ಗೆ ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಕೆಪಿಸಿಸಿ, ರಾಜೀನಾಮೆ ನೀಡದಂತೆ ಶಾಸಕ ಸುಧಾಕರ್ ಅವರನ್ನು ಮನವೋಲಿಸಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಸಂಧಾನ ಸಫಲಗೊಂಡ ಹಿನ್ನಲೆಯಲ್ಲಿ ಶಾಸಕ ಡಾ. ಸುಧಾಕರ್ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.












Click it and Unblock the Notifications