ಹೊರ ರಾಜ್ಯದಿಂದ ಬಂದು ದರೋಡೆ ಮಾಡುತ್ತಿದ್ದ ಮಹಿಳೆ ಬಂಧನ: ₹30 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಚಿಕ್ಕಬಳ್ಳಾಪುರ: ಅಂತರರಾಜ್ಯ ಮಟ್ಟದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಕುಖ್ಯಾತ ಕಳ್ಳಿಯನ್ನು ಬಂಧಿಸುವಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಪ್ರಕರಣವು 2025ರ ಸೆಪ್ಟೆಂಬರ್ 19ರಂದು ದಾಖಲಾಗಿತ್ತು. ಈ ಕಾರ್ಯಾಚರಣೆಯಲ್ಲಿ ಸುಮಾರು 240 ಗ್ರಾಂ ತೂಕದ ಹಾಗೂ ₹30 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ದೇವಾಲಯದ ಉತ್ಸವದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ತಮ್ಮ ಪೋಷಕರ ಮನೆಗೆ ತೆರಳುವ ವೇಳೆ, ಚಿನ್ನಾಭರಣಗಳನ್ನು ತಮ್ಮ ವ್ಯಾನಿಟಿ ಬ್ಯಾಗ್ನೊಳಗಿನ ಡಬ್ಬಿಯಲ್ಲಿ ಇಟ್ಟುಕೊಂಡಿದ್ದರು. ತಮ್ಮ ಗ್ರಾಮಕ್ಕೆ ಹೋಗುವ ಸಲುವಾಗಿ ಜಂಗಮಕೋಟೆ ಕ್ರಾಸ್ ಬಳಿ ಬಸ್ ಬದಲಿಸುವಾಗ ಈ ಕಳ್ಳತನ ನಡೆದಿತ್ತು ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದರು.

ಪೊಲೀಸರ ಪ್ರಕಾರ, ಸೂಲಿಬೆಲೆ ಕಡೆಗೆ ಮಾರ್ಗದ ತುಂಬಿ ತುಳುಕುತ್ತಿದ್ದ ಬಸ್ಗೆ ಏರುವಾಗ ಮಹಿಳೆಯನ್ನು ಹಿಂದಿನಿಂದ ಮತ್ತೊಬ್ಬ ಮಹಿಳೆ ತಳ್ಳಿದ್ದಾಳೆ. ಬಳಿಕ ನೀರಿನ ಬಾಟಲ್ ತೆಗೆದುಕೊಳ್ಳಲು ಬ್ಯಾಗ್ ತೆರೆಯುತ್ತಿದ್ದಂತೆ ಜಿಪ್ ತೆರೆಯಲ್ಪಟ್ಟಿದ್ದು, ಅದರೊಳಗಿದ್ದ ಚಿನ್ನಾಭರಣದ ಡಬ್ಬಿ ಕಳವಾಗಿರುವುದು ಗೊತ್ತಾಗಿದೆ ಎಂದಿದ್ದಾರೆ.
ಈ ಕುರಿತು ಶಿಡ್ಲಘಟ್ಟ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 303(1) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ಗಂಭೀರತೆಯನ್ನು ಗಮನಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ನಿಖರ ಮಾಹಿತಿ ಹಾಗೂ ತಾಂತ್ರಿಕ ಸಾಕ್ಷ್ಯಾಧಾರಗಳ ಆಧಾರದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾದರು ಎಂದು ತಿಳಿಸಿದ್ದಾರೆ.
ಬಸ್ಗಳು, ಜನಸಂದಣಿ, ಉತ್ಸವಗಳಲ್ಲಿ ಕಳ್ಳತನ
ಬಂಧಿತ ಆರೋಪಿಯನ್ನು 50 ವರ್ಷದ ಮೀನಾ (ಅಲಿಯಾಸ್ ಮೀನಾಕ್ಷಿ) ಎಂದು ಗುರುತಿಸಲಾಗಿದೆ. ಈಕೆ ಮೂಲತಃ ತಮಿಳುನಾಡಿನ ಜೋಲಾರ್ಪೇಟೆ ನಿವಾಸಿಯಾಗಿದ್ದು, ಪ್ರಸ್ತುತ ಆಂಧ್ರಪ್ರದೇಶದ ಕುಪ್ಪಂನಲ್ಲಿ ವಾಸವಾಗಿದ್ದಾಳೆ. ಪೊಲೀಸರ ತನಿಖೆಯಲ್ಲಿ ಆರೋಪಿಯ ವಿರುದ್ಧ ವಿವಿಧ ರಾಜ್ಯಗಳಲ್ಲಿ ಈಗಾಗಲೇ ಐದಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ. ಈಕೆ ಬಸ್ಗಳು, ಜನಸಂದಣಿ ಇರುವ ಹಾಗೂ ಉತ್ಸವಗಳ ಸಂದರ್ಭವನ್ನು ಆಯ್ಕೆ ಮಾಡಿಕೊಂಡು ಚಿನ್ನಾಭರಣ ಕಳ್ಳತನ ಮಾಡುವುದರಲ್ಲಿ ಪರಿಣತಿ ಹೊಂದಿದ್ದಾಳೆ ಎಂದು ತಿಳಿದುಬಂದಿದೆ.
ಪೊಲೀಸರು ವಶಪಡಿಸಿಕೊಂಡ ಎಲ್ಲ ಚಿನ್ನಾಭರಣಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಯಶಸ್ವಿ ಕಾರ್ಯಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರ ಕಾರ್ಯಕ್ಷಮತೆ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜನಸಂದಣಿ ಇರುವ ಸ್ಥಳಗಳಲ್ಲಿ, ವಿಶೇಷವಾಗಿ ಬಸ್ಗಳಲ್ಲಿ ಪ್ರಯಾಣಿಸುವ ವೇಳೆ ಸಾರ್ವಜನಿಕರು ತಮ್ಮ ಚಿನ್ನಾಭರಣಗಳ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.
ಪೊಲೀಸರಿಂದ ಸಲಹೆ
ಚಿಕ್ಕಬಳ್ಳಾಪುರದಲ್ಲಿ ನಡೆದ ಅಂತರರಾಜ್ಯ ಕಳ್ಳತನ ಪ್ರಕರಣವು ಸಾರ್ವಜನಿಕರಿಗೆ ಮಹತ್ವದ ಎಚ್ಚರಿಕೆ ಸಂದೇಶ ನೀಡಿದೆ. ವಿಶೇಷವಾಗಿ ಬಸ್ಗಳು, ಜಾತ್ರೆ-ಉತ್ಸವಗಳು ಹಾಗೂ ಜನಸಂದಣಿ ಇರುವ ಸ್ಥಳಗಳಲ್ಲಿ ಪ್ರಯಾಣಿಸುವವರು ಚಿನ್ನಾಭರಣಗಳನ್ನು ಅಗತ್ಯವಿದ್ದರೆ ಮಾತ್ರ ಕೊಂಡೊಯ್ಯಿರಿ, ಉತ್ಸವಗಳು ಅಥವಾ ದೂರ ಪ್ರಯಾಣದ ವೇಳೆ ಹೆಚ್ಚಿನ ಮೌಲ್ಯದ ಆಭರಣಗಳನ್ನು ತರುವುದನ್ನು ಸಾಧ್ಯವಾದಷ್ಟು ತಪ್ಪಿಸಬೇಕು ಎಂದು ಇಂತಹ ಕಳ್ಳತನಗಳ ತಡೆಗೆ ಪೊಲೀಸರು ಸಲಹೆ ನೀಡಿದ್ದಾರೆ.
ಬಸ್ ಏರು-ಇಳಿಯುವ ವೇಳೆ ಬ್ಯಾಗ್ಗಳನ್ನು ಬೆನ್ನಿಗೆ ಹಾಕದೇ, ಮುಂದೆ ಇಟ್ಟುಕೊಳ್ಳಿ. ಜನಸಂದಣಿಯಲ್ಲಿ ಯಾರಾದರೂ ಅಸಹಜವಾಗಿ ತಳ್ಳಿದರೆ ಅಥವಾ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸಿದರೆ ತಕ್ಷಣ ಎಚ್ಚೆತ್ತುಕೊಳ್ಳಬೇಕು. ಬಸ್ಗಳಲ್ಲಿ ಪ್ರಯಾಣಿಸುವಾಗ ತುಂಬಿ ತುಳುಕುವ ಬಸ್ಗಳಲ್ಲಿ ಕಳ್ಳತನಕ್ಕೆ ಹೆಚ್ಚು ಅವಕಾಶ ಇರುತ್ತದೆ. ಅನುಮಾನಾಸ್ಪದ ವರ್ತನೆ ಕಂಡುಬಂದರೆ ತಕ್ಷಣ ಕಂಡಕ್ಟರ್ ಅಥವಾ ಚಾಲಕರ ಗಮನಕ್ಕೆ ತನ್ನಿ. ಕಳ್ಳರು ಸಾಮಾನ್ಯವಾಗಿ ಮಹಿಳೆಯರು, ವೃದ್ಧರು ಮತ್ತು ಒಂಟಿ ಪ್ರಯಾಣಿಕರನ್ನು ಗುರಿಯಾಗಿಸುತ್ತಾರೆ ಎಂದು ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು












Click it and Unblock the Notifications