ಚಿಕ್ಕಬಳ್ಳಾಪುರ: ಬರ ಪ್ರದೇಶದಲ್ಲಿ ವಲಸೆ ಹಕ್ಕಿಗಳ ಕಲರವ
ಚಿಕ್ಕಬಳ್ಳಾಪುರ, ಏ.2: ಅಳೆದು ಸುರಿದು ಸಾಕಷ್ಟು ಕಣ್ಣಾಮುಚ್ಚಾಲೆ ನಂತರ ಕೊನೆಗೂ ರಾಮನಗರ ಶಾಸಕ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಕಣಕ್ಕಿಳಿದ ಬಳಿಕ ಚಿಕ್ಕಬಳ್ಳಾಪುರ ಮಹಾತ್ಮೆ ಇದೀಗ ಲೋಕಪ್ರಿಯವಾಗಿದೆ.
ಅವರ ಎದುರಾಳಿಯಾಗಿ ವೀರಪ್ಪ ಮೊಯ್ಲಿ ಸಹ ವಲಸೆ ಹಕ್ಕಿ ಅನ್ನಿಸಿದ್ದರಾದರೂ ಬರದ ನಾಡಿನಲ್ಲಿ ಗೂಡು ಕಟ್ಟಿಕೊಂಡು ಸಾಕಷ್ಟು ಕಾಲವಾಗಿದೆ. ಇನ್ನು 'ಸ್ಥಳೀಯ' ಎನಿಸಿರುವ ಬಿಜೆಪಿಯ ಕೆಎನ್ ಬಚ್ಚೇಗೌಡರು ಈ ಇಬ್ಬರೂ ಮಾಜಿ ಮುಖ್ಯಮಂತ್ರಿಗಳಿಗೆ ಬೆವರು ಇಳಿಸುತ್ತಿದ್ದಾರೆ. (ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಮಹಿಮೆ)

ಹಾಗೆ ನೋಡಿದರೆ ಕಳೆದ (2009) ಚುನಾವಣೆಯಲ್ಲಿ ಬಿಜೆಪಿಯ ಸಿ ಅಶ್ವತ್ಥನಾರಾಯಣ, ಮೊಯ್ಲಿಗೆ ಸುಲಭದ ತುತ್ತಾಗಿದ್ದರು. ಆದರೂ ಕೇವಲ 51 ಸಾವಿರ ಮತಗಳ ಅಂತರದಿಂದ ಜಯ ಗಳಿಸುವಲ್ಲಿ ಯಶಸ್ವಿಯಾಗಿದ್ದರು. ಈ ಬಾರಿ ಘಟಾನುಘಟಿಗಳ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿರುವುದು ನೋಡಿದರೆ ಜಯದ ಅಂತರ ಇದಕ್ಕಿಂತ ಕಡಿಮೆಯಾಗುವ ಅಂದಾಜಿದೆ.[ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]
ಕ್ಷೇತ್ರದಲ್ಲಿ ಇಬ್ಬರು ಮಾತ್ರ ಜೆಡಿಎಸ್ ಶಾಸಕರಿದ್ದರೂ 16 ಲಕ್ಷ ಮತದಾರರ ಪೈಕಿ 2 ಲಕ್ಷದಷ್ಟಿರುವ ಒಕ್ಕಲಿಗರನ್ನು ನೆಚ್ಚಿಕೊಂಡು ಕಣಕ್ಕಿಳಿದಿದ್ದಾರೆ. ಅತ್ತ ಮೊಯ್ಲಿಗೆ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಅವರು ತೀರಾ ಚುನಾವಣೆ ಸಮಯದಲ್ಲಿ ಕ್ಷೇತ್ರದಲ್ಲಿ ಅಡ್ಡಾಡಿ 'ಮೊಯ್ಲಿ ಕಡು ಭ್ರಷ್ಟ' ಎಂದು ಬೆಂಕಿಗೆ ತುಪ್ಪ ಸುರಿದಿದ್ದಾರೆ.
ಗಮನಾರ್ಹವೆಂದರೆ 1977 ರಿಂದ ಕ್ಷೇತ್ರವು ಕಾಂಗ್ರೆಸ್ ಹಿಡಿತದಲ್ಲಿದೆ (1996ರಲ್ಲಿ ಒಮ್ಮೆ ಮಾತ್ರವೇ ಅಪಜಯ ಅನುಭವಿಸಿತ್ತು). ಕ್ಷೇತ್ರದ ಹಳ್ಳಿಗಳಲ್ಲಿ ಇಂದಿಗೂ ಕಾಂಗ್ರೆಸ್ ಅಂದರೆ ಇಂದಿರಮ್ಮ ಕಣ್ಮುಂದೆ ಬರುತ್ತಾರೆ. ಅಷ್ಟರ ಮಟ್ಟಿಗೆ ಮೊಯ್ಲಿ ಸೇಫ್. ಜತೆಗೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ (2009ರ ನಂತರ 2013ರ ವೇಳೆಗೆ) ಕಾಂಗ್ರೆಸ್ ಪಕ್ಷವು ಇನ್ನೂ ನಾಲ್ಕು ವಿಧಾನಸಭಾ ಕ್ಷೇತ್ರಗಳನ್ನು ತನ್ನ ಬಗಲಿಗೆ ಹಾಕಿಕೊಂಡಿದೆ. ಲೆಕ್ಕದಲ್ಲಿ ಹೆಚ್ಚಲಿ ಎಂದು ಪಕ್ಷೇತರ ಶಾಸಕ ಸುಬ್ಬಾ ರೆಡ್ಡಿ ಕಾಂಗ್ರೆಸ್ ಕೈಹಿಡಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications