Karnataka Next CM: ಸಿದ್ದರಾಮಯ್ಯ ಅಭಿಮಾನಿಗಳಿಂದ ಈಡುಗಾಯಿ ಒಡೆದು ಪೂಜೆ! ಡಿಕೆಶಿ ಪರ ನಂಜಾವಧೂತ ಶ್ರೀ..
ಬೆಂಗಳೂರು, ನವೆಂಬರ್ 28: ಕರ್ನಾಟಕದ ಸಿಎಂ ಸ್ಥಾನ ಬದಲಾವಣೆ ವಿಚಾರವಾಗಿ ನಡೆಯುತ್ತಿರುವ ಬೆಳವಣಿಗೆಯಿಂದ ದೇಶವೇ ರಾಜ್ಯ ರಾಜಕಾರಣದತ್ತ ತಿರುಗಿ ನೋಡುವಂತಾಗಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರ ಸ್ವಾಮೀಜಿಗಳು ನಿಂತಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯಬೇಕೆಂದು ರಾಜ್ಯದ ವಿವಿಧ ಕಡೆಗಳಲ್ಲಿ ದೇವಸ್ಥಾನಗಳಲ್ಲಿ ಸಿದ್ದರಾಮಯ್ಯನವರ ಅಭಿಮಾನಿಗಳು ಈಡುಗಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಿದ್ದು ಕಂಡು ಬಂತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಈ ಬಾರಿ ಪೂರ್ಣಾವಧಿವರೆಗೂ ಸಿಎಂ ಸ್ಥಾನದಲ್ಲಿ ಮುಂದವರಿಯಬೇಕು. ಆ ಸ್ಥಾನಕ್ಕೆ ಅವರೇ ಸೂಕ್ತ. ನಾಯಕತ್ವ ಬದಲಾವಣೆ ಬೇಡ ಎಂದು ರಾಜ್ಯ ಕಲಬುರಗಿ, ಚಿಕ್ಕಮಗಳೂರು ಸೇರಿದಂತೆ ವಿವಿಧೆಡೆ ದೇವಸ್ಥಾನದಲ್ಲಿ ಅಭಿಮಾನಿಗಳು ಪೂಜೆ ನೆರವೇರಿಸಿದ್ದಾರೆ. ಅವರ ಭಾವಚಿತ್ರ ಹಿಡಿದು ಪೂಜೆ ಸಲ್ಲಿಸಿ ಘೋಷಣೆ ಕೂಗಿದ್ದಾರೆ.

ಚಿಕ್ಕಮಗಳೂರಿನ ಗಣಪತಿ ದೇವಸ್ಥಾನ ಹಾಗೂ ಕಲ್ಯಾಣ ಕರ್ನಾಟಕದ ಕಲಬುರಗಿಯ ಪ್ರಮುಖ ಶ್ರಿ ಶರಣಬಸವೇಶ್ವರ ದೇವಸ್ಥಾನದಲ್ಲಿ ಅಭಿಮಾನಿಗಳು, ಸಿದ್ದರಾಮಯ್ಯ ಬೆಂಬಲಿಗರು ಈಡುಗಾಯಿ ಒಡೆದು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರಿಯುವಂತೆ ಬೇಡಿಕೊಂಡಿದ್ದಾರೆ. ಈ ಪೂಜೆ ಅಭಿಯಾನ ರಾಜ್ಯದ ಇತರ ಭಾಗಗಳಿಗೆ ವಿಸ್ತರಿಸಿದರೂ ಅಚ್ಚರಿ ಇಲ್ಲ.
ಡಿಕೆ ಶಿವಕುಮಾರ್ ಸಿಎಂ ಆಗಲಿ: ನಂಜಾವಧೂತ ಸ್ವಾಮೀಜಿ
ನೆನ್ನೆಯಷ್ಟೇ ಒಕ್ಕಲಿಗ ಶ್ರೀಗಳು ಆದಿಚುಂಚನಗಿರಿ ಮಠದ ಮಠಾಧೀಶರಾದ ನಿರ್ಮಲಾನಂದನಾಥ ಸ್ವಾಮೀಜಿಗಳು ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನದ ಅವಕಾಶ ಸಿಗಬೇಕು. ಪಕ್ಷಕ್ಕಾಗಿ ಅವರು ಸಾಕಷ್ಟು ಹೋರಾಟ ಮಾಡಿದ್ದಾರೆ. ಹುಟ್ಟು ಹೋರಾಟಗಾರ. ಪಕ್ಷ ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿದ್ದಾರೆ. ಮುಂದಿನ 2.5 ವರ್ಷಗಳ ಅವಧಿಗೆ ಹೈಕಮಾಂಡ್ ಡಿಕೆ ಶಿವಕುಮಾರ್ ಅವರನ್ನೇ ಸಿಎಂ ಮಾಡಬೇಕು. ಈ ಮೂಲಕ ಗೊಂದಲ ಬಗೆಹರಿಸಬೇಕು ಎಂದು ಹೈಕಮಾಂಡ್ಗೆ ಆಗ್ರಹಿಸಿದ್ದರು.
ಇದರ ಬೆನ್ನಲ್ಲೆ ಇಂದು ಡಿಕೆ ಶಿವಕುಮಾರ್ ಅವರನ್ನು ಶಿರಾದ ಪಟ್ಟನಾಯಕನಹಳ್ಳಿ ಗುರುಗುಂಡ ಬ್ರಹ್ಮೇಶ್ವರ ಮಠದ ನಂಜಾವಧೂತ ಸ್ವಾಮೀಜಿ ಭೇಟಿ ಮಾಡಿದರು. ರಾಜ್ಯದ ಮುಖ್ಯಮಂತ್ರಿ ಸ್ಥಾನ ಡಿಕೆ ಶಿವಕುಮಾರ್ ಅವರಿಗೆ ಸಿಗಬೇಕು. ಅವರು ಪಕ್ಷಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಸಾಕಷ್ಟು ಕಷ್ಟಗಳು ಎದುರಾದರೂ ಎದೆಗುಂದದೆ ಪಕ್ಷ ಕಟ್ಟಿದ್ದಾರೆ. ಅವರ ಪಟ್ಟ ನೋವು ಅಷ್ಟಿಷ್ಟಲ್ಲ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಕುಟುಂಬಕ್ಕೆ ನಿಷ್ಠೆ ಮೆರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಸಹಯೋಗದಲ್ಲಿ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ತರುವಲ್ಲಿ ಅವರ ನೀಡಿದ ಕೊಡುಗೆ ಮರೆಯಲಾಗುವುದಿಲ್ಲ. ಮೊದಲ ಅವಧಿಯಲ್ಲೇ ಡಿಕೆಶಿ ಅವರು ಸಿಎಂ ಆಗುತ್ತಾರೆ ಎನ್ನಲಾಗಿತ್ತು. ಆದರೆ ಹಿರಿಯರಾದ ಸಿದ್ದರಾಮಯ್ಯ ಅವರಿಗೆ ಬಿಟ್ಟು ಕೊಡಲಾಯಿತು. ಆ ವೇಳೆ ಹೈಕಮಾಂಡ್ ನೀಡದ್ದ ಮಾತಿನಂತೆ ನಡೆದುಕೊಳ್ಳಬೇಕು. ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಕಲ್ಪಿಸಿಕೊಡಬೇಕೆಂದು ಅವರು ತಿಳಿಸಿದರು.
-
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications