ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿಕ್ಕಮಗಳೂರು: ಕೊಪ್ಪದಲ್ಲಿ 'ಕಾನ್ಮನೆಯ ಕತೆಗಳು' ಮರುಬಿಡುಗಡೆ

|
Google Oneindia Kannada News

ಕೊಪ್ಪ,ಜುಲೈ, 19: ಪರಿಸರ ಚಿಂತಕ ಶಿವಾನಂದ ಕಳವೆಯವರ "ಕಾನ್ಮನೆಯ ಕತೆಗಳು" ಪುಸ್ತಕ ಮರು ಬಿಡುಗಡೆಯಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪದ ಕಾರ್ಯನಿರತ ಪತ್ರಕರ್ತರ ಸಂಘ ಜುಲೈ 24 ರಂದು ಆಯೋಜಿಸಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪುಸ್ತಕವನ್ನು ಮತ್ತೊಮ್ಮೆ ಲೋಕಾರ್ಪಣೆ ಮಾಡಲಾಗುತ್ತಿದೆ.

ಕಾರ್ಯಕ್ರಮದಲ್ಲಿ ಶಿವಾನಂದ ಕಳವೆ ಭಾಗವಹಿಸಲಿದ್ದು ಉಪನ್ಯಾಸ ನೀಡಲಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿವಾನಂದ ಕಳವೆ ಪರಿಸರ ಪತ್ರಕರ್ತರಾಗಿ ಹೆಸರು ಮಾಡಿದವರು.[ನಾವು ಎಲ್ಲಿ ಹೋಗಿ ಬಿದ್ದು ಸಾಯಬೇಕು ? ದಯವಿಟ್ಟು ತಿಳಿಸಿ]

Chikkamagaluru: Koppa taluk Patrika Dinacharane on 24th July

ಶಿರಸಿ ಸಮೀಪದ ತಮ್ಮ ಸ್ವಂತ ಊರು ಕಳವೆಯಲ್ಲಿ ಶಿವಾನಂದ ಅವರು ಹಮ್ಮಿಕೊಳ್ಳುತ್ತಿರುವ ಪರಿಸರ ಜಾಗೃತಿ, ಕೆರೆ ಸಂರಕ್ಷಣೆ ಅಭಿಯಾನಗಳು ಸರ್ಕಾರಕ್ಕೆ ಮಾದರಿಯಾಗಿವೆ. ವಿದೇಶಗಳಿಂದ ಆಗಮಿಸಿ ಸಂಶೋಧಕರು ಮಾಹಿತಿ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ಕಳವೆಯವರು ಪರಿಸರ ಸಂರಕ್ಷಣೆ ಜಾಗೃತಿಯನ್ನು ನಿರಂತರವಾಗಿ ಮೂಡಿಸುತ್ತ ಬಂದಿದ್ದಾರೆ.[15 ವರ್ಷಗಳ ಹಿಂದೆ ಹಸಿರು ಬೆಂಗಳೂರು ಹೇಗಿತ್ತು?]

ಕೊಪ್ಪದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶಾಸಕ ಜೀವರಾಜ್, ಮುಖಂಡರಾದ ಟಿ ಡಿ ರಾಜೇಗೌಡ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎನ್ ರಾಜು, ಕೊಪ್ಪ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜೀನೇಶ್ ಇರ್ವತ್ತೂರು ಸೇರಿದಂತೆ ವಿವಿಧ ಮುಖಂಡರು ಭಾಗವಹಿಸಲಿದ್ದಾರೆ.

English summary
Koppa: Chikkamagaluru District Koppa Taluk working Journalist association will conducting Patrika dinacharane on 24th July, 2016.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X