ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ಪಾಠದ ಧಾಟಿಯಲ್ಲಿ ವಾರ್ನಿಂಗ್
Recommended Video

ಚಿಕ್ಕಮಗಳೂರು, ಜನವರಿ 11: ಮಾಧ್ಯಮದವರು ಕೆಲಸ ಮಾಡುವುದಕ್ಕೆ ಒಂದು ಚೌಕಟ್ಟಿದೆ. ಅದರೊಳಗೆ ಕೆಲಸ ಮಾಡಿ ಅನ್ನೋದು ನನ್ನ ವೈಯಕ್ತಿಕ ಮನವಿ. ಧನ್ಯಶ್ರೀ ಆತ್ಮಹತ್ಯೆ ಪ್ರಕರಣದಲ್ಲಿ ಮಾಧ್ಯಮಗಳು ಅದರಲ್ಲೂ ಕೆಲ ಮಾಧ್ಯಮಗಳು ಸಂಬಂಧ ಇಲ್ಲದ ಫೋಟೋಗಳನ್ನು ಪ್ರಸಾರ ಮಾಡುತ್ತಿವೆ ಎಂಬ ದೂರು ಬಂದಿದೆ ಎಂದು ಇಲ್ಲಿನ ಎಸ್ ಪಿ ಅಣ್ಣಾಮಲೈ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣವೊಂದು ವಿಚಾರಣೆ ಹಂತದಲ್ಲಿರುವಾಗ ಲವ್ ಜಿಹಾದ್ ಎಂಬ ವರದಿ ಪ್ರಸಾರ ಮಾಡುವುದು ಸರಿಯಲ್ಲ. ಇನ್ನು ವಾಟ್ಸ್ ಅಪ್ ಸಂಭಾಷಣೆಗಳನ್ನು ಬಯಲು ಮಾಡುವುದು ಕೂಡ ಸರಿಯಲ್ಲ. ಜತೆಗೆ ಈ ಪ್ರಕರಣದಲ್ಲಿ ಇಂಥವರ ಹೆಸರುಗಳಿವೆ ಎಂದು ವರದಿ ಮಾಡುವುದೆಲ್ಲ ತಪ್ಪಾಗುತ್ತದೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರಿನ ಕೆಲವು ಬಹುರಾಷ್ಟ್ರೀಯ ಕಂಪೆನಿಗಳಲ್ಲಿ ಉನ್ನತ ಮಟ್ಟದಲ್ಲಿ ಕೆಲಸ ನಿರ್ವಹಿಸುತ್ತಿರುವವರು ಪಬ್ ಗಳಲ್ಲಿ ಇರುವ ಫೋಟೋಗಳನ್ನು ಹಾಕಿ, ಲವ್ ಜಿಹಾದ್ ಸುದ್ದಿ ಎಂದೆಲ್ಲ ಪ್ರಸಾರ ಮಾಡಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ವ್ಯಕ್ತಿಗಳು ಇಮೇಲ್ ಮೂಲಕ ದೂರು ನೀಡಿದ್ದಾರೆ. ಒಬ್ಬರು ಸ್ವತಃ ಬಂದು ದೂರು ನೀಡಿದ್ದಾರೆ ಎಂಬ ಮಾಹಿತಿ ನೀಡಿದರು.

ಮತ್ತೊಬ್ಬರ ಫೋನ್ ರೆಕಾರ್ಡ್ ಮಾಡಿಕೊಳ್ಳುವುದು ವೈಯಕ್ತಿಕ ವಿಚಾರದಲ್ಲಿ ನಾವು ತಲೆದೂರಿಸಿದಂತೆ ಆಗುತ್ತದೆ. ಹಾಗೆ ಮತ್ತೊಬ್ಬರಿಗೆ ಅರಿವಿಲ್ಲದೆ ಕರೆ ರೆಕಾರ್ಡ್ ಮಾಡಿಕೊಳ್ಳಬಾರದು ಹಾಗೂ ಇಂಥಿಂಥವರ ಹೆಸರಿದೆ ಎಂದು ಕೂಡ ವರದಿ ಮಾಡಬಾರದು. ಮಾಧ್ಯಮಗಳು ತಮಗಿರುವ ಹೊಣೆ, ಜವಾಬ್ದಾರಿ ಹಾಗೂ ಮಿತಿಯನ್ನು ತಿಳಿದುಕೊಳ್ಳಬೇಕು ಎಂದಿದ್ದಾರೆ.
ನೀವು (ಮಾಧ್ಯಮದವರು) ಅಟ್ಯಾಕ್ ಮಾಡುವಂತಿದ್ದರೆ ನನ್ನ ಮೇಲೆ ಮಾಡಿ. ನನ್ನ ಸೂಚನೆ ಮೇರೆಗೆ ಕೆಲಸ ಮಾಡುವ ಅಧಿಕಾರಿಗಳ ಮೇಲಲ್ಲ. ಧನ್ಯಶ್ರೀ ಪ್ರಕರಣದಲ್ಲಿ ಜನರನ್ನು ಪ್ರಚೋದಿಸಬೇಡಿ. ಈ ಪ್ರಕರಣದ ಆರೋಪಿ ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ನಾನಂತೂ ಬಿಡೋದಿಲ್ಲ ಅಂತ ಮಾತು ಕೊಡ್ತಿದೀನಿ ಎಂದು ಅಣ್ಣಾಮಲೈ ಹೇಳಿದ್ದಾರೆ.
-
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
ಪತಿ ವಿಜಯ್ ದೇವರಕೊಂಡ ಜೊತೆ ಮೊದಲ ಬಾರಿಗೆ ತವರಿಗೆ ಬಂದ ರಶ್ಮಿಕಾ: ತಂದೆಯಿಂದ ಐಷಾರಾಮಿ ಬಂಗಲೆ ಉಡುಗೊರೆ -
Bengaluru Sambar: ಬೆಂಗಳೂರು ಹೋಟೆಲ್ಗಳಲ್ಲಿ ಸಾಂಬಾರ್ ಸ್ವೀಟ್ ಯಾಕೆ, ಇಲ್ಲಿದೆ ಕನ್ನಡಿಗರ ಯಕ್ಷ ಪ್ರಶ್ನೆಗೆ ಉತ್ತರ -
Dhurandhar 2: ಧುರಂಧರ್ 2 ಸಿನಿಮಾ ನೋಡಿ; ರಿವ್ಯೂ ಕೊಟ್ಟ ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾ -
Manju Warrier: ನಟಿ ಮಂಜು ವಾರಿಯರ್ಗೆ ವೇದಿಕೆಯಲ್ಲೇ ಮುತ್ತಿಟ್ಟ ಹುಚ್ಚು ಅಭಿಮಾನಿ, ವೈರಲ್ ವಿಡಿಯೋ ಇಲ್ಲಿದೆ -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು -
Content Creator: ಇನ್ಸ್ಟಾಗ್ರಾಂನಿಂದ ತಿಂಗಳಿಗೆ 70 ಲಕ್ಷ ರೂಪಾಯಿ ಗಳಿಕೆ: ಎಲ್ಲರ ಹುಬ್ಬೇರಿಸಿದ ಕೇರಳ ಕಂಟೆಂಟ್ ಕ್ರಿಯೇಟರ್












Click it and Unblock the Notifications