ಮಕ್ಕಳ ಸುಪರ್ದಿಗೆ ಮಗು ನೆಲೆಸಿದ ವ್ಯಾಪ್ತಿ ಕೋರ್ಟ್ನಲ್ಲೇ ಅರ್ಜಿ ಹಾಕಿ
ಬೆಂಗಳೂರು, ಮೇ 18: ಮಕ್ಕಳ ಸುಪರ್ದಿಗೆ ಕೋರುವ ಅರ್ಜಿಗಳನ್ನು ಮಗು ನೆಲೆಸಿಸುವ ಪ್ರದೇಶದ ವ್ಯಾಪ್ತಿಯ ನ್ಯಾಯಾಲಯದಲ್ಲಿ ಮಾತ್ರ ಸಲ್ಲಿಸಬೇಕೆಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ನ್ಯಾಯಮೂರ್ತಿ ಎಂ. ನಾಗಪ್ರಸ್ನ ಅವರ ಏಕಸದಸ್ಯಪೀಠ ಚಾಮರಾಜನಗರ ಜಿಲ್ಲೆ ನಿವಾಸಿಗಳಾದ ಸಮೀವುಲ್ಲಾ ಮತ್ತು ಮುಬೀನ್ ತಾಜ್ ದಂಪತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಈ ಆದೇಶ ಮಾಡಿದೆ. ಹೈಕೋರ್ಟ್, ಮಗು ಚಾಮರಾಜನಗರ ಜಿಲ್ಲೆಯಲ್ಲಿ ನೆಲೆಸಿರುವ ಕಾರಣ, ಸಂಬಂಧಪಟ್ಟ ಸ್ಥಳೀಯ ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸಬೇಕಿದೆ.
ಮೈಸೂರಿನ ಕೌಟುಂಬಿಕ ನ್ಯಾಯಾಲಯವು ಮಗುವಿನ ತಂದೆಯ ಅರ್ಜಿಯನ್ನು ವಿಚಾರಣೆ ನಡೆಸಲು ಪ್ರಾದೇಶಿಕ ವ್ಯಾಪ್ತಿ ಹೊಂದಿಲ್ಲ ಎಂದು ನ್ಯಾಯಪೀಠ ತೀರ್ಮಾನಿಸಿದೆ. ಅಂತಿಮವಾಗಿ ಮೈಸೂರು ನ್ಯಾಯಾಲಯದ ಆದೇಶ ರದ್ದುಪಡಿಸಿ, ಮಗು ನೆಲೆಸಿರುವ ಪ್ರದೇಶ ವ್ಯಾಪ್ತಿಯ ನ್ಯಾಯಾಲಯಕ್ಕೆ ತಂದೆ ಅರ್ಜಿ ಸಲ್ಲಿಸಬೇಕು ಎಂದು ನಿರ್ದೇಶಿಸಿದೆ.

ಪ್ರಕರಣದಲ್ಲಿ ಅರ್ಜಿದಾರರ ಮೊಮ್ಮಗು ಚಾಮರಾಜನಗರದಲ್ಲಿ ನೆಲೆಸಿದೆ. ಮಗುವಿನ ಸುಪರ್ದಿ ಕೋರಿ ತಂದೆ ಮೈಸೂರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಸುಪ್ರಿಂಕೋರ್ಟ್ ತೀರ್ಪು ಪ್ರಕಾರ ಮಗುವಿನ ಸುಪರ್ದಿಗೆ ಕೋರಿ ಎಲ್ಲೆಂದರಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಮಗು ನೆಲೆಸಿರುವ ವ್ಯಾಪ್ತಿಯ ಸ್ಥಳೀಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬೇಕು. ಅದರಂತೆ ತಂದೆಯು ಚಾಮರಾಮನಗರದ ಸಂಬಂಧಪಟ್ಟ ನ್ಯಾಯಾಲಯಲ್ಲಿಯೇ ಮಗುವಿನ ಸುಪರ್ದಿಗೆ ಅರ್ಜಿ ಸಲ್ಲಿಸಬೇಕು ಎಂದು ನ್ಯಾಯಪೀಠ ಆದೇಶಿಸಿದೆ.
ಮಗುವಿನ ಅಜ್ಜಿ-ತಾತನ ಪರ ವಕೀಲರು, ಅರ್ಜಿದಾರರೊಂದಿಗೆ ಮಗು ಚಾಮರಾಜನಗರ ಜಿಲ್ಲೆಯ ಯಳಂದೂರಿನಲ್ಲಿ ನೆಲೆಸಿದೆ. ಮಗುವಿನ ತಂದೆ ಮೈಸೂರಿನ ನಿವಾಸಿ. ಮಗುವಿನ ಸುಪರ್ದಿಗೆ ಕೋರುವ ಅರ್ಜಿಯನ್ನು ಮಗು ನೆಲೆಸಿರುವ ಪ್ರದೇಶ ವ್ಯಾಪ್ತಿಯ ನ್ಯಾಯಾಲಯಕ್ಕೆ ಸಲ್ಲಿಸಬೇಕಿದೆ. ಅದು ಬಿಟ್ಟು ಸಂಬಂಧಿಗಳು, ತಂದೆ ಅಥವಾ ತಾಯಿ ನೆಲೆಸಿರುವ ವ್ಯಾಪ್ತಿಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವಂತಿಲ್ಲಎಂದು ವಾದ ಮಂಡಿಸಿದರು.
ಈ ವಾದ ಆಕ್ಷೇಪಿಸಿದ ಪ್ರತಿವಾದಿಯಾದ ಮಗುವಿನ ತಂದೆ ಪರ ವಕೀಲರು, ಪ್ರತಿವಾದಿ ಮೈಸೂರಿನ ನಿವಾಸಿ. ಅವರ ಪತ್ನಿ ಸಾವನ್ನಪ್ಪಿದ ನಂತರ ಮಗು ಅರ್ಜಿದಾರರ ಸುಪರ್ದಿಯಲ್ಲಿದೆ. ಹಾಗಾಗಿ ಮಗುವಿನ ಸುಪರ್ದಿಗಾಗಿ ಮೈಸೂರಿನ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿರುವುದು ಸೂಕ್ತವಾಗಿದೆ. ಚಾಮರಾಜನಗರ ಕೋರ್ಟ್ಗೆ ವರ್ಗಾಯಿಸಬೇಕು ಎಂಬ ಅರ್ಜಿದಾರರ ವಾದ ತಿರಸ್ಕರಿಸಿದ ಅಧೀನ ನ್ಯಾಯಾಲಯದ ನ್ಯಾಯೋಚಿತವಾಗಿದೆ ಎಂದು ಪ್ರತಿವಾದಿಸಿದ್ದರು.
ಪ್ರಕರಣದ ಹಿನ್ನೆಲೆ: ಅರ್ಜಿದಾರರ ಪುತ್ರಿ ಮೊಹಮ್ಮದ್ ಸಮೀರ್ (ಮಗುವಿನ ತಂದೆ) ಎಂಬುವವರನ್ನು ಮದುವೆಯಾಗಿದ್ದರು. ಅವರಿಗೆ ಮಗು ಜನಿಸಿತ್ತು. ಅರ್ಜಿದಾರರ ಪುತ್ರಿ 2021 ಮೇ 6ರಂದು ನಿಧನರಾಗಿದ್ದರು. ಇದರಿಂದ ಮೊಮ್ಮಗುವನ್ನು ತಮ್ಮ ಬಳಿಯೇ ಅರ್ಜಿದಾರರು ಇರಿಸಿಕೊಂಡಿದ್ದರು. ಮಗು ಮತ್ತು ಅರ್ಜಿದಾರರು ಚಾಮರಾಜನಗರದಲ್ಲಿ ನೆಲೆಸಿದ್ದಾರೆ.
ಈ ನಡುವೆ ಮಗುವಿನ ಸುಪರ್ದಿಯನ್ನು ತನಗೆ ಒಪ್ಪಿಸಲು ಆದೇಶಿಸಬೇಕು ಎಂದು ಕೋರಿ ತಂದೆ, 2021ರ ಡಿ.21ರಂದು ಮೈಸೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಚಾಮರಾಜನಗರ ಕೌಟುಂಬಿಕ ನ್ಯಾಯಾಲಯಕ್ಕೆ ವರ್ಗಾಯಿಸಬೇಕು ಎಂದು ಕೋರಿ ಅರ್ಜಿದಾರರು ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಅದನ್ನು ತಿರಸ್ಕರಿಸಿ ಮೈಸೂರಿನ 3ನೇ ಹೆಚ್ಚುವರಿ ಪ್ರಧಾನ ಕೌಟುಂಬಿಕ ನ್ಯಾಯಾಲಯ 2023ರ ಫೆ.3ರಂದು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications