ಚಿಂತಾಮಣಿಯಲ್ಲಿ ಯಮರೂಪಿ ಪೊಲೀಸಪ್ಪ, 75ರ ವೃದ್ಧರಿಗೆ ಹೊಡೆದ್ರಪ್ಪೊ..
ಚಿಂತಾಮಣಿಯಲ್ಲಿ ಸಬ್ ಇನ್ಸ್ ಸ್ಪೆಕ್ಟರ್ ನರಸಿಂಹಮೂರ್ತಿ 75 ವರ್ಷದ ನಾರಾಯಣಪ್ಪ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಏಕೆ ಹೊಡೆದರು ಅಂತ ಗೊತ್ತಾಗಬೇಕು, ಈಗ ನಾರಾಯಣಪ್ಪ ಅವರ ಸ್ಥಿತಿ ಹೇಗಿದೆ ಅಂತ ತಿಳಿಯುವುದಕ್ಕೆ ಈ ವರದಿ ಓದಿ
ಚಿಂತಾಮಣಿ, ಮೇ 4: 75 ವರ್ಷದ ವೃದ್ಧರ ಮೇಲೆ ಇಲ್ಲಿನ ನಗರ ಠಾಣೆ ಸಬ್ ಇನ್ ಸ್ಪೆಕ್ಟರ್ ನರಸಿಂಹಮೂರ್ತಿ ಎಂಬುವರು ಗುರುವಾರ ಹಲ್ಲೆ ನಡೆಸಿದ್ದಾರೆ. ಅದಕ್ಕೆ ಇರುವ ಕಾರಣ ಗೊತ್ತಾದರೆ ಇದೆಂತಹ ಪೊಲೀಸಪ್ಪ ಅಂತ ಖಂಡಿತಾ ಅನ್ನಿಸುತ್ತದೆ. ಇಲಿನ ಚೇಳೂರು ವೃತ್ತದಲ್ಲಿ ಗುರುವಾರ ಶಂಕರ್ ಎಂಬಾತ ಕೆಂಪು ದೀಪ ಇರುವಾಗಲೇ ದಾಟಿ ಹೋದರಂತೆ.
ಅಲ್ಲಿದ್ದ ಕಾನ್ ಸ್ಟೇಬಲ್ ಕೃಷ್ಣಪ್ಪ ಇದನ್ನು ಗಮನಿಸಿದವರೇ ದಂಡ ಹಾಕಿ, ಜತೆಗೆ ನಾಲ್ಕು ಬುದ್ಧಿ ಮಾತು ಹೇಳಿ ಕಳಿಸಿದ್ದರೆ ಆಗಿರೋದು. ಆದರೆ ಆತ ಜಗಳಕ್ಕೆ ನಿಂತಿದ್ದಾರೆ, ಬಾಯಿಗೆ ಸಿಕ್ಕಂತೆ ಮಾತನಾಡಿದ್ದಾರೆ. ಇದನ್ನು ಕಂಡು ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ. ಶಂಕರ್ ಬೆಂಬಲಕ್ಕೆ ನಿಂತಿದ್ದಾರೆ.[ಚಿಂತಾಮಣಿಯಲ್ಲಿ 900 ಸಿಲಿಂಡರ್ ಸ್ಫೋಟ, 2 ಲಾರಿ ಭಸ್ಮ]

ಆ ವೇಳೆಗೆ ನಗರ ಠಾಣೆ ಸಬ್ ಇನ್ ಸ್ಪೆಕ್ಟರ್ ನರಸಿಂಹಮೂರ್ತಿ ಸ್ಥಳಕ್ಕೆ ಬಂದಿದ್ದಾರೆ. ಶಂಕರ್ ಅವರ ತಂದೆ 75 ವರ್ಷದ ನಾರಾಯಣಪ್ಪನವರೂ ಅಲ್ಲಿಗೆ ಬಂದಿದ್ದಾರೆ. ಈ ಸಂದರ್ಭದಲ್ಲಿ, ಟ್ರಾಫಿಕ್ ಸಿಗ್ನಲ್ ಜಂಪ್ ಮಾಡಿದ್ದರೆ ದಂಡ ವಸೂಲಿ ಮಾಡಿ, ಕಾನೂನು ಏನು ಹೇಳುತ್ತದೆ ಹಾಗೆ ಮಾಡಿ. ಅದು ಬಿಟ್ಟು ಬಯ್ಯೋದು, ಹೊಡೆಯುವುದಕ್ಕೆ ನಿಮಗೇನು ಅಧಿಕಾರ ಇದೆ ಎಂದು ಪ್ರಶ್ನಿಸಿದ್ದಾರೆ.
ಇಷ್ಟು ಮಾತಿಗೆ ನಖಶಿಖಾಂತ ಉರಿದ ಸಬ್ ಇನ್ ಸ್ಪೆಕ್ಟರ್ ನರಸಿಂಹಮೂರ್ತಿ, ವಯಸ್ಸಾದವರು ಎಂದು ಲೆಕ್ಕಿಸದೆ ಅವರ ಕಪಾಳಕ್ಕೆ ಹೊಡೆದಿದ್ದಾರೆ. ಮೊದಲೇ ಆರೋಗ್ಯ ಸಮಸ್ಯೆ ಇದ್ದ ನಾರಾಯಣಪ್ಪ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.[ಮರಳು ಕಳ್ಳರನ್ನು ದಿಟ್ಟತನದಿಂದ ಹಿಡಿದ ಯುವಕರು]
ಈ ನಿರ್ದಿಷ್ಟ ಘಟನೆಗೆ ಗೃಹಸಚಿವ ಜಿ.ಪರಮೇಶ್ವರ ಹೇಗೆ ಪ್ರತಿಕ್ರಿಯಿಸುತ್ತಾರೋ? ಮೈಸೂರಿನಲ್ಲಿ ಜನಸ್ನೇಹಿ ಪೊಲೀಸ್ ಅಭಿಯಾನ ಮಾಡ್ತಾರಂತೆ ಅನ್ನೋದು ಸುದ್ದಿ. ಚಿಂತಾಮಣಿಯಲ್ಲಿ ನಡೆದಿರುವ ಈ ಘಟನೆ ನೋಡಿದರೆ, ವರ್ಷವಿಡೀ ಪೊಲೀಸರಿಗೆ ಜನಸ್ನೇಹಿಯಾಗಿ ಹೇಗಿರಬೇಕು ಅಂತ ಹೇಳಿಕೊಡುವ ಕೆಲಸವಾಗಬೇಕು ಅನ್ನಿಸುತ್ತದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು












Click it and Unblock the Notifications