ಚಿತ್ರದುರ್ಗ ಬಸ್ ಅಗ್ನಿ ದುರಂತ ಪ್ರಕರಣ: ಪ್ರಯಾಣಿಕರ ಲಗೇಜ್ ಕುರಿತು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ
Chitradurga Bus Accident: ಚಿತ್ರದುರ್ಗದ ಬಳಿ ಸಂಭವಿಸಿದ ಖಾಸಗಿ ಬಸ್ ಅಗ್ನಿ ದುರಂತ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಈ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ರಾಶಿ ರಾಶಿ ಆಯಿಲ್ ಬಾಟಲಿಗಳ ಬಾಕ್ಸ್ಗಳು ಇದ್ದ ಕಾರಣ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಶಂಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಪ್ರಯಾಣಿಕರ ಲಗೇಜ್ ವಿಚಾರವಾಗಿ ಮಹತ್ವದ ಆದೇಶ ಹೊರಡಿಸಿದೆ.
ಅದರಲ್ಲೂ ಕರ್ನೂಲ್ನಲ್ಲಿ ಖಾಸಗಿ ಬಸ್ನ ಬೆಂಕಿ ದುರಂತದ ಬಳಿಕ ರಾಜ್ಯದಲ್ಲಿಯೂ ಬಸ್ಸುಗಳಲ್ಲಿ ಪ್ರಯಾಣಿಕರ ಲಗೇಜ್, ವಸ್ತುಗಳನ್ನು ಹೊರತುಪಡಿಸಿ ಬೇರೆ ಯಾವುದೇ ಸಾಮಾನುಗಳ ಸಾಗಾಟಕ್ಕೆ ಅವಕಾಶ ಇಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ. ಹಾಗಾದ್ರೆ ಸಂಪೂರ್ಣ ಮಾಹಿತಿ ಇಲ್ಲಿದೆ ಗಮನಿಸಿ.

ಚಿತ್ರದುರ್ಗದಲ್ಲಿ ದುರಂತಕ್ಕೆ ಒಳಗಾದ ಬಸ್ಗಳಲ್ಲಿ ಹೆಚ್ಚು ಲಗೇಜ್ ಇದ್ದ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ರಾಜ್ಯ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಇದೆ. 2013ರಲ್ಲಿ ನಾನು ಸಾರಿಗೆ ಸಚಿವನಾಗುದ್ದಾಗ ಹಾವೇರಿಯಲ್ಲೂ ಇದೇ ರೀತಿ ಅಪಘಾತ ಆಗಿತ್ತು. ಆಗ ಎಮರ್ಜೆನ್ಸಿ ಎಕ್ಸಿಟ್ ಇರಲಿಲ್ಲ, ಲಕ್ಷುರಿ ಬಸ್ಸುಗಳಲ್ಲೂ ಗ್ಲಾಸ್ ಒಡೆದು ಹೊರಗಡೆ ಬರಬೇಕಾದ ಪರಿಸ್ಥಿತಿ ಇತ್ತು. ಈಗ ಸಾರಿಗೆ ಇಲಾಖೆಯ 25,000 ಬಸ್ಸುಗಳು ಸೇರಿ ಎಲ್ಲಾ ಖಾಸಗಿ ಮತ್ತು ಶಾಲಾ ಬಸ್ಸುಗಳಿಗೆ ಎಮರ್ಜೆನ್ಸಿ ಎಕ್ಸಿಟ್ ಇದೆ ಎಂದು ಹೇಳಿದರು.
ಸಾರ್ವಜನಿಕ ಸಾರಿಗೆಗಳಲ್ಲಿ ತುರ್ತು ನಿರ್ಗಮದ ಬಾಗಿಲುಗಳಿಲ್ಲದಿದ್ದರೆ ಭೌತಿಕ ಕ್ಷಮತೆ ದೃಢೀಕರಣ ಪತ್ರ - ಎಫ್ಸಿ ಮಾಡದಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ. ಬಸ್ಗಳಲ್ಲಿ ಯಾವುದೇ ರೀತಿಯ ಸ್ಫೋಟಕಗಳನ್ನು ಸಾಗಿಸಬಾರದು. ಪ್ರಯಾಣಿಕರನ್ನು ಹೊರತುಪಡಿಸಿ ಅನಗತ್ಯ ಲಗೇಜ್ಗಳನ್ನು ಸಾಗಣೆ ಮಾಡದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.
ಐವರ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ: ಇನ್ನೂ ಹಿರಿಯೂರು ಬಳಿ ನಡೆದ ಸೀಬರ್ಡ್ ಬಸ್ ದುರಂತದಲ್ಲಿ ಮೃತಪಟ್ಟ ಐವರ ಮೃತದೇಹದ ಗುರುತು ಡಿಎನ್ಎ ವರದಿಯಿಂದ ಪತ್ತೆಯಾಗಿದ್ದು, ಶವಗಳನ್ನು ಪೊಲೀಸರು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನಿಂದ ಸೀಬರ್ಡ್ ಬಸ್ನಲ್ಲಿ ಗೋಕರ್ಣ ಶಿವಮೊಗ್ಗ ಹಾಗೂ ಕುಮಟಕ್ಕೆ ತೆರಳಲು ಒಟ್ಟು 32 ಜನ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಈ ಬಸ್ಗೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಗೊರ್ಲಡಕು ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಲಾರಿ ಡಿಕ್ಕಿ ಹೊಡೆದಿತ್ತು. ದುರಂತದಲ್ಲಿ ಬಸ್ನಲ್ಲಿದ್ದ ಐವರು ಪ್ರಯಾಣಿಕರು ಸುಟ್ಟು ಕರಕಲಾಗಿದ್ದರು. ಮೃತದೇಹ ಕರಕಲಾಗಿದ್ದ ಕಾರಣ ಗುರುತು ಪತ್ತೆ ಆಗಿರಲಿಲ್ಲ. ಈ ಹಿನ್ನೆಲೆ ಡಿಎನ್ಎ ಪರೀಕ್ಷೆ ನಡೆಸಲಾಗಿತ್ತು. ಇದೀಗ ವರದಿ ಬಂದಿದ್ದು, ಕುಟುಂಬಸ್ಥರಿಗೆ ಮೃತದೇಹಗಳನ್ನು ಹಸ್ತಾಂತರ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications