ಸ್ಫೋಟಕದೊಂದಿಗೆ ಭಟ್ಕಳ, ಬೆಂಗಳೂರಲ್ಲಿ ಮೂವರ ಬಂಧನ
ಬೆಂಗಳೂರು, ಜ. 8: ನಗರದ ಚರ್ಚ್ ಸ್ಟ್ರೀಟ್ನಲ್ಲಿ ಬಾಂಬ್ ಸ್ಫೋಟ ಪ್ರಕರಣದ ಹಿಂದೆ ಬಿದ್ದಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮತ್ತು ಇಂಟೆಲಿಜೆನ್ಸ್ ಬ್ಯೂರೊ (ಐಬಿ) ತನಿಖಾಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಭಟ್ಕಳದಲ್ಲಿ ಇಬ್ಬರು ಹಾಗೂ ಬೆಂಗಳೂರಿನ ಕಾಕ್ಸ್ ಟೌನ್ ಪ್ರದೇಶದಲ್ಲಿ ಓರ್ವನನ್ನು ಬಂಧಿಸಿದ್ದಾರೆ. ಆದರೆ, ಇವರು ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟ ಪ್ರಕರಣದೊಂದಿಗೆ ಸಂಬಂಧ ಹೊಂದಿದ್ದಾರೆಯೇ ಎಂಬುದು ದೃಢಪಟ್ಟಿಲ್ಲ.
ಸದ್ದಾಂ ಹುಸೇನ್ (35) ಹಾಗೂ ಸೈಯದ್ ಇಸ್ಮಾಯಿಲ್ ಅಫಾಕ್ (34) ಹಾಗೂ ಎಂಬಿಎ ವಿದ್ಯಾರ್ಥಿ ಅಬ್ದುಸ್ ಸುಬುರ್ (24) ಪೊಲೀಸರಿಗೆ ಸಿಕ್ಕಿಬಿದ್ದವರು. ಈ ಮೂವರನ್ನೂ ತನಿಖೆಗಾಗಿ ಸಿಸಿಬಿ (City Crime Branch) ಪೊಲೀಸರಿಗೆ ಒಪ್ಪಿಸಲಾಗಿದೆ. [ಚರ್ಚ್ ಸ್ಟ್ರೀಟ್ ನಲ್ಲಿ ಬಾಂಬ್ ಇಟ್ಟವ ಬಿಹಾರದಲ್ಲಿ ಸೆರೆ?]

ಸ್ಫೋಟಕಗಳ ವಶ : ಪೊಲೀಸರು ವಶಕ್ಕೆ ಪಡೆದಿರುವ ಶಂಕಿತರಿಗೆ ಸಂಬಂಧಪಟ್ಟ ಸ್ಥಳದಲ್ಲಿ ಹಲವು ಸ್ಫೋಟಕಗಳು ಪತ್ತೆಯಾಗಿವೆ. ಅಮೋನಿಯಂ ನೈಟ್ರೇಟ್, ಡಿಟೋನೇಟರ್ಗಳು ಹಾಗೂ ಟೈಮರ್ಗಳು ಸಿಕ್ಕಿವೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಎಂ.ಎನ್. ರೆಡ್ಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. [ಚರ್ಚ್ ಸ್ಟ್ರೀಟ್ ಸ್ಫೋಟ : ಶಂಕಿತರ ರೇಖಾ ಚಿತ್ರ ಸಿದ್ಧ]
ಬಂಧಿತ ಮೂವರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಇವರು ಅನ್ಸರ್-ಉಲ್-ತವಹಿದ್ ಎಂಬ ಸಂಘಟನೆಯ ಮುಖ್ಯಸ್ಥ ಸುಲ್ತಾನ್ ಅಹಮದ್ ಅರ್ಮರ್ ಎಂಬಾತನ ಸೂಚನೆಯಂತೆ ಕೆಲಸ ಮಾಡುತ್ತಿದ್ದರು. ಅನ್ಸರ್-ಉಲ್-ತವಹಿದ್ ಸಂಘಟನೆಯು ಇಂಡಿಯನ್ ಮುಜಾಹಿದೀನ್, ತೆಹ್ರೀಕ್-ಇ-ತಾಲಿಬಾನ್ ಮತ್ತು ಐಎಸ್ಐಎಸ್ ಸಂಘಟನೆಗಳ ಜೊತೆಗೆ ಸಂಬಂಧ ಹೊಂದಿದೆ ಎಂದು ತಿಳಿಸಿದ್ದಾರೆ. [ಕೊನೆಗೂ ಬೆಂಗಳೂರಿಗೆ ಸಿಕ್ಕಿತು ಎನ್ಎಸ್ ಜಿ]
ಆದರೆ, ಬಂಧಿತರು ಬೆಂಗಳೂರಿನ ಚರ್ಚ್ ಸ್ಟ್ರೀಟ್ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟದೊಂದಿಗೆ ಸಂಬಂಧ ಹೊಂದಿದ್ದಾರೆಯೇ ಎಂಬುದು ಇನ್ನೂ ಪತ್ತೆಯಾಗಿಲ್ಲ ಎಂದು ಎಂ.ಎನ್. ರೆಡ್ಡಿ ವಿವರಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications