ಇ-ಕೆವೈಸಿ ಮಾಡಿಸಿದರೆ ಮಾತ್ರ ಸಿಲಿಂಡರ್ ಸಬ್ಸಿಡಿ, ಸ್ಪಷ್ಟನೆಗಳು
ಬೆಂಗಳೂರು, ಡಿಸೆಂಬರ್ 31; ಬ್ಯಾಂಕುಗಳ ಖಾತೆಯಂತೆ ಅಡುಗೆ ಅನಿಲ ಸಂಪರ್ಕ ಹೊಂದಿರುವವರು ಆಧಾರ್ ಇ-ಕೆವೈಸಿ ಮಾಡಿಸಬೇಕಿದೆ. ಇದಕ್ಕೆ ಅಂತಿಮ ದಿನಾಂಕ ನಿಗದಿ ಮಾಡಲಾಗಿದೆ, ಇಲ್ಲವಾದಲ್ಲಿ ಸಬ್ಸಿಡಿ ದೊರೆಯುವುದಿಲ್ಲ ಎಂಬ ಸುದ್ದಿಗಳು ಜನರಲ್ಲಿ ಗೊಂದಲ ಉಂಟು ಮಾಡಿವೆ.
ಅಡುಗೆ ಅನಿಲ ಸಂಪರ್ಕ ಹೊಂದಿರುವ ಫಲಾನುಭವಿಗಳು ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಎಂಬ ವದಂತಿಗೆ ಕಿವಿಗೊಡದಿರಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಕರೆ ನೀಡಿದೆ. ಈ ಮೂಲಕ ಗೊಂದಲವನ್ನು ದೂರ ಮಾಡಿದೆ.

ಡಿಸೆಂಬರ್ 31ರೊಳಗೆ ಗ್ಯಾಸ್ ಏಜೆನ್ಸಿಗಳಿಗೆ ಹೋಗಿ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಸಿಗುತ್ತದೆ ಹಾಗೂ ಸಿಲಿಂಡರ್ ಸರಬರಾಜು ಮಾಡಲಾಗುತ್ತದೆ ಎನ್ನುವ ವದಂತಿ ಮತ್ತು ಇ-ಕೆವೈಸಿ ಕಾರ್ಯಕ್ಕೆ ಹಣ ನೀಡಬೇಕೆಂಬ ವದಂತಿ ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಠಿಗೆ ಕಾರಣವಾಗಿರುತ್ತದೆ.
ಇಲಾಖೆಯ ಸ್ಪಷ್ಟನೆಗಳು; ಅಡುಗೆ ಅನಿಲ ಸಂಪರ್ಕ ಹೊಂದಿರುವವರು ಆಧಾರ್ ಬಯೋಮೆಟ್ರಿಕ್ ನೀಡಲು ಕೇಂದ್ರ ಸರ್ಕಾರವು ಯಾವುದೇ ರೀತಿಯ ಕೊನೆಯ ದಿನಾಂಕ ನಿಗದಿಪಡಿಸಿರುವುದಿಲ್ಲ. ಸಾರ್ವಜನಿಕರು ತಮ್ಮ ಬಿಡುವಿನ ವೇಳೆಯಲ್ಲಿ ಗ್ಯಾಸ್ ಏಜೆನ್ಸಿಗಳಿಗೆ ತೆರಳಿ ಆಧಾರ್ ಬಯೋಮೆಟ್ರಿಕ್ ನೀಡಬಹುದಾಗಿದೆ.
ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರು ಅನಾವಶ್ಯಕ ಗೊಂದಲ ಅಥವಾ ತಪ್ಪು ಮಾಹಿತಿಯಿಂದ ಗ್ಯಾಸ್ ಏಜೆನ್ಸಿಗಳ ಬಳಿ ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇರುವುದಿಲ್ಲ. ಉಜ್ವಲ ಯೋಜನೆಯಡಿ ಗ್ಯಾಸ್ ಸಂಪರ್ಕ ಹೊಂದಿರುವವರು ಆಧಾರ್ ಸಂಖ್ಯೆ ದಾಖಲಾತಿಯೊಂದಿಗೆ ಸಂಬಂಧಿಸಿದ ಗ್ಯಾಸ್ ಏಜೆನ್ಸಿಗೆ ತೆರಳಿ ಇ-ಕೆವೈಸಿ ನೀಡಬಹುದಾಗಿದೆ.
ಅಲ್ಲದೇ ಇ-ಕೆವೈಸಿ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಯಾವುದೇ ಶುಲ್ಕ ನಿಗದಿಪಡಿಸಿಲ್ಲ. ಅಡುಗೆ ಅನಿಲ ಗ್ಯಾಸ್ ಬಳಕೆದಾರರು ಇದರ ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಮನವಿ ಮಾಡಲಾಗಿದೆ.
ಜನರು ತಮ್ಮ ಬಿಡುವಿನ ವೇಳೆಯಲ್ಲಿ ಗ್ಯಾಸ್ ಏಜೆನ್ಸಿಗಳಿಗೆ ತೆರಳಿ ಆಧಾರ್ ಇ-ಕೆವೈಸಿ ಮಾಡಿಸಬಹುದಾದೆ. ಆತಂಕದಿಂದ ಗ್ಯಾಸ್ ಏಜೆನ್ಸಿಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇಲ್ಲ. ಸಿಲಿಂಡರ್ ಮನೆಗೆ ಡೆಲಿವರಿ ಪಡೆಯುವ ವೇಳೆಯಲ್ಲಿ ಕೂಡ ಇ-ಕೆವೈಸಿ ಮಾಡಿಸಲು ಅವಕಾಶವಿದೆ.
ತೈಲ ಕಂಪನಿಗಳು ಹೆಲೋ ಬಿಪಿಸಿಎಲ್, ಇಂಡಿಯನ್ ಆಯ್ಲ್ ಒನ್ ಮತ್ತು ವಿಟ್ರನ್ ಹೆಚ್ಪಿ ಗ್ಯಾಸ್ ಈ ಮೊಬೈಲ್ ಅಪ್ಲಿಕೇಶನ್ಗಳ ಮೂಲಕ ಸಹ ಇ-ಕೆವೈಸಿ ಮಾಡಿಸಲು ಅವಕಾಶ ನೀಡಿವೆ. ಆದ್ದರಿಂದ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ.
ಒಬ್ಬ ಗ್ರಾಹಕ ಒಂದಕ್ಕಿಂತ ಹೆಚ್ಚು ಅಡುಗೆ ಅನಿಲ ಸಂಪರ್ಕ ಹೊಂದಿದ್ದರೆ ಅದನ್ನು ಪತ್ತೆ ಹಚ್ಚುವ ಸಲುವಾಗಿ ಗ್ಯಾಸ್ ಏಜೆನ್ಸಿಗಳು ಇ-ಕೆವೈಸಿ ಮಾಡಿಸಬೇಕು ಎಂದು ಹೇಳಿವೆ. ಗೃಹ ಬಳಕೆ ಸಿಲಿಂಡರ್ಗಳ ದುರ್ಬಳಕೆ ತಡೆಯಲು ತೈಲ ಕಂಪನಿಗಳು ಏಜೆನ್ಸಿಗಳಿಗೆ ಗ್ರಾಹಕರ ಇ-ಕೆವೈಸಿ ಮಾಡಿಸಲು ಆದೇಶಿಸಿವೆ.
ಆದರೆ ಇದಕ್ಕೆ ಅಂತಿಮ ದಿನಾಂಕ ನಿಗದಿಗೊಳಿಸಿಲ್ಲ. ಅಂತಿಮ ದಿನಾಂಕ ನಿಗದಿ ಮಾಡಲಾಗಿದೆ ಎಂಬ ವದಂತಿ ಹಿನ್ನಲೆಯಲ್ಲಿ ಜನರು ಏಜೆನ್ಸಿಗಳ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ. ಅಲ್ಲದೇ ಇ-ಕೆವೈಸಿ ಮಾಡಿಸದಿದ್ದರೆ ಸಿಲಿಂಡರ್ ಸಬ್ಸಿಡಿ ಸಹ ಕಡಿತವಾಗಲಿದೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣದ ಮೂಲಕ ಹರಿದಾಡುತ್ತಿವೆ. ಆದ್ದರಿಂದ ಇಲಾಖೆ ಮೂಲಕ ಸ್ಪಷ್ಟನೆಗಳನ್ನು ನೀಡಲಾಗುತ್ತಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications