ಕಂದಾಯ ಇಲಾಖೆ ಈ ಸೇವಾ ಶುಲ್ಕಗಳ ಬಗ್ಗೆ ಸ್ಪಷ್ಟನೆ, ವಿವರ
ಬೆಂಗಳೂರು, ಜನವರಿ 02: ಕರ್ನಾಟಕದ ಕಂದಾಯ ಇಲಾಖೆ ವಿವಿಧ ಸೇವೆಗಳ ಶುಲ್ಕಗಳನ್ನು ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ. ಈ ಆದೇಶವು 1/1/2024ರಿಂದಲೇ ಜಾರಿಗೆ ಬಂದಿದ್ದು, ಇಲಾಖೆ ಸೇವೆಗಳನ್ನು ಪಡೆಯುವಾಗ ಪರಿಷ್ಕೃತ ಶುಲ್ಕಗಳನ್ನು ಜನರು ಪಾವತಿ ಮಾಡಬೇಕಿದೆ.
ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಎಸ್. ಗುರುಮೂರ್ತಿ ಸರ್ಕಾರದ ಅಧೀನ ಕಾರ್ಯದರ್ಶಿ ಕಂದಾಯ ಇಲಾಖೆ (ಭೂಮಾಪನ) ಆದೇಶ ಹೊರಡಿಸಿದ್ದಾರೆ. ಆದೇಶವು ಸಾರ್ವಜನಿಕರಿಂದ 11ಇ, ಅಲಿನೇಷನ್ ಪೂರ್ವ ನಕ್ಷೆ ಮತ್ತು ತತ್ಕಾಲ್ ಪೋಡಿ, ಹದ್ದುಬಸ್ತು ಹಾಗೂ ಸ್ವಾವಲಂಬಿ ಯೋಜನೆಯನ್ವಯ ಸ್ವೀಕರಿಸುವ ಶುಲ್ಕವನ್ನು ಪಾವತಿಸಿಕೊಳ್ಳುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ. ಸರ್ಕಾರದ ವಿವಿಧ ಆದೇಶಗಳನ್ನು ಉಲ್ಲೇಖ ಮಾಡಲಾಗಿದೆ.

ಆದೇಶದ ವಿವರಗಳು; ಆದೇಶದ ಪ್ರಸ್ತಾವನೆಯಲ್ಲಿ ಮೋಜಿಣಿ ವ್ಯವಸ್ಥೆ ಅಡಿ ಸಾರ್ವಜನಿಕರು ಅಳತೆ ಕೋರಿ ಸಲ್ಲಿಸುವ ಅರ್ಜಿಗಳ ಅಳತೆ ಶುಲ್ಕವನ್ನು ಕೆಳಕಂಡಂತೆ ನಿಗದಿಪಡಿಸಲಾಗಿತ್ತು ಎಂದು ಹೇಳಿದೆ.
11ಇ, ಅಲಿನೇಷನ್ ಪೂರ್ವ ನಕ್ಷೆ ಮತ್ತು ತತ್ಕಾಲ್ ಪೋಡಿ ನಗರ ಪ್ರದೇಶ ರೂ. 2500 (2 ಎಕರೆ ವರೆಗೆ), 1000 (2 ಎಕರೆಗಿಂತ ಹೆಚ್ಚಿದ್ದಲ್ಲಿ ಭಾಗಶಃ ಎಕರೆಗೆ) ಗರಿಷ್ಠ 5 ಸಾವಿರ ರೂ.ಗಳು. ಗ್ರಾಮೀಣ ಪ್ರದೇಶದಲ್ಲಿ 2000 ರೂ. (2 ಎಕರೆ ವರೆಗೆ), ರೂ. 400 (ಎರಡು ಎಕರೆಗಿಂತ ಹೆಚ್ಚಿದ್ದಲ್ಲಿ ಭಾಗಶಃ ಎಕರೆಗೆ) 400 ರೂ. ಮತ್ತು ಗರಿಷ್ಠ 4000 ರೂ.ಗಳು.
ಹದ್ದುಬಸ್ತು ಶುಲ್ಕ ನಗರ ಪ್ರದೇಶ ರೂ. 2000 (2 ಎಕರೆ ವರೆಗೆ), 400 ರೂ. (2 ಎಕರೆಗಿಂತ ಹೆಚ್ಚಿದ್ದಲ್ಲಿ ಭಾಗಶಃ ಎಕರೆಗೆ) ಗರಿಷ್ಠ 4 ಸಾವಿರ ರೂ.ಗಳು. ಗರಿಷ್ಠ 4 ಸಾವಿರ ರೂ.ಗಳು. ಗ್ರಾಮೀಣ ಪ್ರದೇಶ ರೂ. 1500 (2 ಎಕರೆ ವರೆಗೆ), 300 (2 ಎಕರೆಗಿಂತ ಹೆಚ್ಚಿದ್ದಲ್ಲಿ ಭಾಗಶಃ ಎಕರೆಗೆ) ಗರಿಷ್ಠ 3 ಸಾವಿರ ರೂ.ಗಳು.
ಸರ್ಕಾರದ ಆದೇಶದಲ್ಲಿ ಪರವಾನಗಿ ಭೂಮಾಪಕರಿಗೆ ಪ್ರತಿ ಅರ್ಜಿಗೆ ಪಾವತಿಸುತ್ತಿರುವ ಸೇವಾ ಶುಲ್ಕವನ್ನು 800 ರಿಂದ 1200 ರೂ. ಗಳಿಗೆ ಹಾಗೂ ಬಹುಮಾಲೀಕತ್ವದ ಪ್ರತಿ ಹೆಚ್ಚುವರಿ ಬ್ಲಾಕಿಗೆ ರೂ 150 ರಿಂದ 200 ರೂ.ಗಳಿಗೆ ಪರಿಷ್ಕರಿಸಿ ಆದೇಶಿಸಲಾಗಿದೆ. ನಂತರ ಮೋಜಿಣಿ ವ್ಯವಸ್ಥೆಯಡಿ ಸಲ್ಲಿಸುವ ಅರ್ಜಿಗಳ ಅಳತೆ ಶುಲ್ಕವನ್ನು ಪುನರ್ ಪರಿಷ್ಕರಣೆ ಮಾಡಿ ಈ ಕೆಳಗಿನಂತೆ ನಿಗದಿ ಮಾಡಲಾಗಿದೆ.
11ಇ, ಅಲಿನೇಷನ್ ಪೂರ್ವ ನಕ್ಷೆ ಮತ್ತು ತತ್ಕಾಲ್ ಪೋಡಿ ನಗರ ಪ್ರದೇಶ ರೂ. 2500 (2 ಎಕರೆ ವರೆಗೆ), 1000 (2 ಎಕರೆಗಿಂತ ಹೆಚ್ಚಿದ್ದಲ್ಲಿ ಭಾಗಶಃ ಎಕರೆಗೆ). ಗ್ರಾಮೀಣ ಪ್ರದೇಶದಲ್ಲಿ 1500 ರೂ. (2 ಎಕರೆ ವರೆಗೆ), ರೂ. 400 (ಎರಡು ಎಕರೆಗಿಂತ ಹೆಚ್ಚಿದ್ದಲ್ಲಿ ಭಾಗಶಃ ಎಕರೆಗೆ). ಹದ್ದುಬಸ್ತು ನಗರ ಪ್ರದೇಶ ರೂ. 2000 (2 ಎಕರೆ ವರೆಗೆ), 400 ರೂ. (2 ಎಕರೆಗಿಂತ ಹೆಚ್ಚಿದ್ದಲ್ಲಿ ಭಾಗಶಃ ಎಕರೆಗೆ). ಗ್ರಾಮೀಣ ಪ್ರದೇಶ ರೂ. 500 (2 ಎಕರೆ ವರೆಗೆ), 300 (2 ಎಕರೆಗಿಂತ ಹೆಚ್ಚಿದ್ದಲ್ಲಿ ಭಾಗಶಃ ಎಕರೆಗೆ). ನೋಟಿಸ್ ಶುಲ್ಕ ಗ್ರಾಮೀಣ ಮತ್ತು ನಗರ ಪ್ರದೇಶದ ಪ್ರತಿ ಬಾಜುದಾರರಿಗೆ ರೂ. 25.
ಸಾರ್ವಜನಿಕರು ತಮ್ಮ ಸ್ವಂತ ಖಾಸಗಿ ಜಮೀನಿನಲ್ಲಿ 'ಸ್ವಾವಲಂಬಿ ಆಪ್' ಮೂಲಕ ಸ್ವಯಂ ಸರ್ವ ಮಾಡಿಕೊಳ್ಳುವ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ ಸ್ವಇಚ್ಛೆಯಿಂದ ಸ್ಕೆಚ್ ತಯಾರಿಸುವ ಅರ್ಜಿಗಳಿಗೆ ಸಂಬಂಧಿಸಿದಂತೆ ಪ್ರತಿ ಅರ್ಜಿಗೆ ರೂ.1000 ಮೊತ್ತವನ್ನು ಅರ್ಜಿ ಶುಲ್ಕವನ್ನಾಗಿ ನಿಗದಿಪಡಿಸಿ ಆದೇಶಿಸಲಾಗಿದೆ.
ಅರ್ಜಿ ಶುಲ್ಕವನ್ನು ನಿರ್ದಿಷ್ಟವಾಗಿ ಪಹಣಿ ಕಾಲಂ-3 ಅಥವಾ ಕಾಲಂ-9 ವಿಸ್ತೀರ್ಣಕ್ಕೆ ಅನುಗುಣವಾಗಿ ಪಾವತಿಸಿಕೊಳ್ಳಬೇಕೆ ಎಂಬುದರ ಬಗ್ಗೆ ಸ್ಪಷ್ಟ ನಿರ್ದೇಶನ ಇಲ್ಲದ ಕಾರಣ ಸ್ವಾವಲಂಬಿ ಯೋಜನೆಯಡಿಯಲ್ಲಿ ಸಲ್ಲಿಸುವ ಅರ್ಜಿಗಳಿಗೆ ಪಹಣಿಯ ಕಾಲಂ-3 ರಲ್ಲಿನ ಪೂರ್ಣ ವಿಸ್ತೀರ್ಣಕ್ಕೆ ಅರ್ಜಿ ಶುಲ್ಕವನ್ನು ಲೆಕ್ಕ ಹಾಕಿ ಪಾವತಿಸಿಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ ಎಂದು ಪ್ರಸ್ತಾವನೆ ಹೇಳಿದೆ.
ಅದೇ ರೀತಿಯಲ್ಲಿ, ನಾಗರಿಕರು ಅಳತೆ ಕೋರಿ ಸಲ್ಲಿಸುವ ವಿವಿಧ ಅರ್ಜಿಗಳಿಗೆ ಪಹಣಿ ಕಾಲಂ-9ರ ವಿಸ್ತೀರ್ಣಕ್ಕೆ ಶುಲ್ಕ ಪಾವತಿಸಿಕೊಳ್ಳುವ ಬದಲಾಗಿ ಏಕರೂಪ ಶುಲ್ಕ ಪದ್ಧತಿಯನ್ನು ಅನುಸರಿಸುವ ಸಲುವಾಗಿ ಪಹಣಿಯ ಕಾಲಂ-3 ರ ವಿಸ್ತೀರ್ಣಕ್ಕೆ ಅರ್ಜಿ ಶುಲ್ಕವನ್ನು ಲೆಕ್ಕ ಹಾಕಿ ಪಾವತಿಸಿಕೊಳ್ಳಲು ಮೋಜಿಣಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಲಾಗಿದೆ.
ಆದರೆ ಪಹಣಿಯ ಕಾಲಂ-3 ರ ವಿಸ್ತೀರ್ಣ ಹೆಚ್ಚಿಗೆ ಇದ್ದು ಸಾರ್ವಜನಿಕರ ಹಕ್ಕಿನ ವಿಸ್ತೀರ್ಣ ಕಡಿಮೆ ಇದ್ದು, ಪೂರ್ಣ ವಿಸ್ತೀರ್ಣಕ್ಕೆ ಅರ್ಜಿ ಶುಲ್ಕವನ್ನು ಪಾವತಿಸಿಕೊಳ್ಳುತ್ತಿರುವ ಕಾರಣ ಸಾರ್ವಜನಿಕರಿಗೆ ಹೊರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಅಲ್ಲದೆ, 2023ರ ಡಿಸೆಂಬರ್ ಮಾಹೆಯಲ್ಲಿ ಬೆಳಗಾವಿಯಲ್ಲಿ ನಡೆದ ವಿಧಾನ ಮಂಡಲದ ಅಧಿವೇಶನದಲ್ಲಿ ಅರ್ಜಿ ಶುಲ್ಕ ಹೆಚ್ಚಾಗಿರುವ ಕುರಿತು ಮಾನ್ಯ ಸದಸ್ಯರುಗಳು ಸದನದಲ್ಲಿ ಪ್ರಸ್ತಾಪಿಸಿರುತ್ತಾರೆ.
ಜೊತೆಗೆ, ಅರ್ಜಿದಾರರು/ ಜನಪ್ರತಿನಿಧಿಗಳಿಂದಲೂ ಸಹ ಪೋಡಿ ಶುಲ್ಕ ಹೆಚ್ಚುವರಿಯಾಗಿ ಪಾವತಿಸಿಕೊಳ್ಳುತ್ತಿರುವ ಬಗ್ಗೆ ದೂರುಗಳು ಸಹ ಸ್ವೀಕೃತವಾಗಿರುತ್ತವೆ. ಎಲ್ಲಾ ಸೇವೆಗಳನ್ನು ಸರ್ಕಾರಕ್ಕೆ ಹೊರೆಯಾಗದಂತೆ ಸಾರ್ವಜನಿಕರಿಗೆ ಸೇವೆಗಳನ್ನು ತ್ವರಿತವಾಗಿ ಒದಗಿಸಲು ಅನುವಾಗುವಂತೆ ಸರ್ಕಾರಿ ಭೂಮಾಪಕರ ಜೊತೆಗೆ ಪರವಾನಗಿ ಭೂಮಾಪಕರನ್ನು ಸಹ ಆಯ್ಕೆ ಮಾಡಿಕೊಳ್ಳಲಾಗಿದೆ. ಪರವಾನಗಿ ಭೂಮಾಪಕರು ನೀಡುವ ಸೇವೆಗೆ ಸಾರ್ವಜನಿಕರು ಪಾವತಿಸುವ ಶುಲ್ಕದಿಂದಲೇ ನಿಗದಿತ ಸೇವಾ ಶುಲ್ಕವನ್ನು ಪಾವತಿಸಲಾಗುತ್ತಿದೆ.
ಪ್ರಸ್ತುತ ಪೋಡಿ ಮುಕ್ತ ಗ್ರಾಮ ಅಭಿಯಾನ ಯೋಜನೆಯಡಿಯಲ್ಲಿ ಬಹುಮಾಲೀಕತ್ವ, ಪಹಣಿಯಲ್ಲಿರುವ ಹಕ್ಕುದಾರರಿಗೆ ಶುಲ್ಕ ರಹಿತವಾಗಿ ಪೋಡಿ ಮಾಡಿಕೊಡುವ ಯೋಜನೆ ಜಾರಿಯಲ್ಲಿರುತ್ತದೆ. ಇದಲ್ಲದೆ ಅಲಿನೇಷನ್, ದರಖಾಸ್ತು ಪೋಡಿಗೆ ಸಂಬಂಧಿಸಿದಂತೆ ಮಂಜೂರಿ ಸಮಯದಲ್ಲಿಯೇ ಅರ್ಜಿದಾರರಿಂದ ಪೋಡಿ ಶುಲ್ಕ ಭರಿಸಿಕೊಳ್ಳಲಾಗುತ್ತಿದೆ.
ಆದೇಶದಲ್ಲಿ ಏನಿದೆ?; 29/12/2023ರ ಆದೇಶದಲ್ಲಿ ಸರ್ಕಾರ ಮೋಜಿಣಿ ವ್ಯವಸ್ಥೆಯಡಿ ಸ್ವೀಕೃತವಾಗುವ ವಿವಿಧ ರೀತಿಯ ಅರ್ಜಿಗಳಿಗೆ ಸಂಬಂಧಿಸಿದಂತೆ ನಿಗದಿಪಡಿಸಿದ ಅರ್ಜಿ ಶುಲ್ಕವನ್ನು ಪಹಣಿಯ ಕಾಲಂ-9ರಲ್ಲಿನ ಅರ್ಜಿದಾರರ ಹಕ್ಕಿನ ವಿಸ್ತೀರ್ಣಕ್ಕೆ ಮಾತ್ರ ಪಾವತಿಸಿಕೊಳ್ಳಲು ಆದೇಶಿಸಿದೆ.
11ಇ, ಅಲಿನೇಷನ್ ಪೂರ್ವ ನಕ್ಷೆ ಮತ್ತು ತತ್ಕಾಲ್ ಪೋಡಿ ನಗರ ಪ್ರದೇಶ ರೂ. 2500 (2 ಎಕರೆ ವರೆಗೆ), 1000 (2 ಎಕರೆಗಿಂತ ಹೆಚ್ಚಿದ್ದಲ್ಲಿ ಭಾಗಶಃ ಎಕರೆಗೆ). ಗ್ರಾಮೀಣ ಪ್ರದೇಶದಲ್ಲಿ 1500 ರೂ. (2 ಎಕರೆ ವರೆಗೆ), ರೂ. 400 (ಎರಡು ಎಕರೆಗಿಂತ ಹೆಚ್ಚಿದ್ದಲ್ಲಿ ಭಾಗಶಃ ಎಕರೆಗೆ).
ಹದ್ದುಬಸ್ತು ನಗರ ಪ್ರದೇಶ ರೂ. 2000 (2 ಎಕರೆ ವರೆಗೆ), 400 ರೂ. (2 ಎಕರೆಗಿಂತ ಹೆಚ್ಚಿದ್ದಲ್ಲಿ ಭಾಗಶಃ ಎಕರೆಗೆ). ಗ್ರಾಮೀಣ ಪ್ರದೇಶ ರೂ. 500 (2 ಎಕರೆ ವರೆಗೆ), 300 (2 ಎಕರೆಗಿಂತ ಹೆಚ್ಚಿದ್ದಲ್ಲಿ ಭಾಗಶಃ ಎಕರೆಗೆ). ನೋಟಿಸ್ ಶುಲ್ಕ ಗ್ರಾಮೀಣ ಮತ್ತು ನಗರ ಪ್ರದೇಶದ ಪ್ರತಿ ಬಾಜುದಾರರಿಗೆ ರೂ. 25. ಎಂದು ನಿಗದಿ ಮಾಡಲಾಗಿದೆ.
'ಸ್ವಾವಲಂಬಿ' ಯೋಜನೆಯಡಿ ಸ್ವಇಚ್ಛೆಯಿಂದ ಸ್ಕೆಚ್ ತಯಾರಿಸಲು ಸಲ್ಲಿಸುವ ಪ್ರತಿ ಅರ್ಜಿಗೆ ರೂ.1000 ಮೊತ್ತವನ್ನು ಅರ್ಜಿ ಶುಲ್ಕವನ್ನಾಗಿ ನಿಗದಿಪಡಿಸಿ ಆದೇಶಿಸಿರುವುದನ್ನು ಮುಂದುವರೆಸಿದೆ.
-
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
LPG: ಬೆಂಗಳೂರಿಗೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಪೂರೈಕೆ ತಕ್ಷಣವೇ ಆರಂಭಿಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ -
Bengaluru : ಬಾಲ ಭವನ ಬೇಸಿಗೆ ಶಿಬಿರ 2026 ; ಕೇವಲ 1000 ರೂ.ಗೆ 10 ಬಗೆಯ ಕೌಶಲ್ಯ ತರಬೇತಿ, ಇಂದೇ ಅರ್ಜಿ ಸಲ್ಲಿಸಿ -
ವಾಹನ ಸವಾರರಿಗೆ ಗುಡ್ನ್ಯೂಸ್: ಕರ್ನಾಟಕದ 66 RTOಗಳಲ್ಲಿ Geo-Fencing ಆಧಾರಿತ mVahan ಅಪ್ಲಿಕೇಷನ್ ಆರಂಭ -
ವರ್ಷಾಂತ್ಯದೊಳಗೆ ಮಾಜಿ ಸೈನಿಕರಿಗೆ ಸರ್ಕಾರದಿಂದ ನಿವೇಶನ: ಕೃಷ್ಣ ಬೈರೇಗೌಡ ಭರವಸೆ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ












Click it and Unblock the Notifications