ಬಸ್ನಲ್ಲಿ ಕೋಳಿ ಜಗಳ; ಕೋಳಿಗೆ ಟಿಕೆಟ್ ಕೇಳಿದ ಕಂಡಕ್ಟರ್: ಕೋಳಿಗೂ ಸೀಟ್ ಬಿಡಿಸಿಕೊಂಡ ಮಹಿಳೆ
ವಿಜಯನಗರ, ಫೆಬ್ರವರಿ 13: ಇತ್ತಿಚ್ಚಿನ ದಿನಗಳಲ್ಲಿ ಸಾರಿಗೆ ಬಸ್ ಗಳಲ್ಲಿ ಕಂಡಕ್ಟರ್ ಹಾಗೂ ಪ್ರಯಾಣಿಕರ ನಡುವೆ ಜಗಳದ ಪ್ರಸಂಗಗಳು ಸಾಕಷ್ಟು ವರದಿಯಾಗುತ್ತಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಕಂಡಕ್ಟರ್ ಮತ್ತು ಮಹಿಳೆ ನಡುವೆ ಭಾನುವಾರ ರಾತ್ರಿ ಕೋಳಿ ಜಗಳ ನಡೆದಿದೆ.
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಹಗರಿಬೊಮ್ಮನಹಳ್ಳಿ ಘಟಕದ ಸಾರಿಗೆ ಬಸ್ ಹೊಸಪೇಟೆ ಮಾರ್ಗವಾಗಿ ಕೂಡ್ಲಿಗಿ ಪಟ್ಟಣಕ್ಕೆ ಬಂದಾಗ ಜಗಳೂರು ಕಡೆಗೆ ಹೋಗಲು ಮಹಿಳೆಯೊಬ್ಬರು ಬಸ್ ಹತ್ತಿದ್ದಾರೆ. ಈ ವೇಳೆ ಜನರಿಗೆ ಕಾಣದಂತೆ ರಟ್ಟಿನ ಬಾಕ್ಸ್ ನಲ್ಲಿ ಇಟ್ಟಿದ್ದ ಕೋಳಿ ಕೂಗಿದೆ. ಇದಕ್ಕೆ ಕಂಡಕ್ಟರ್ ಕೋಳಿ ಯಾರದೆಂದು ಕೇಳಿ ಟಿಕೆಟ್ ಪಡೆಯಲು ಹೇಳಿದ್ದಾರೆ. ಇದಕ್ಕೆ ಮಹಿಳೆ ಟಿಕೆಟ್ ತೆಗೆದುಕೊಳ್ಳುವೆ, ಕೋಳಿಗೂ ಸೀಟ್ ಕೊಡಬೇಕೆಂದು ವಾಗ್ವಾದಕ್ಕಿಳಿದ ಪ್ರಸಂಗ ನಡೆದಿದೆ.

ಕೂಡ್ಲಿಗಿ ಪಟ್ಟಣದಿಂದ ಭಾನುವಾರ ರಾತ್ರಿ 7-30ರ ಸುಮಾರಿಗೆ ಸಂಬಂಧಿಕರೊಂದಿಗೆ ಜಗಳೂರಿಗೆ ಪ್ರಯಾಣಿಸಲು ಮಹಿಳೆ ಬಸ್ ಹತ್ತಿದ್ದು, ರಟ್ಟಿನ ಬಾಕ್ಸ್ ನಲ್ಲಿದ್ದ ಕೋಳಿಯನ್ನು ಸೀಟಿನ ಮೇಲುಗಡೆ ಲಗೇಜ್ ಇಡುವ ಜಾಗದಲ್ಲಿ ಇಟ್ಟಿದ್ದರು. ಕೋಳಿ ಕೂಗಿನ ಸದ್ದಿಗೆ ಕಂಡಕ್ಟರ್ ಟಿಕೆಟ್ ಕೇಳಿದ್ದಾರೆ. ಆಗ ಮಹಿಳೆ, ಯಾವ್ ಸೀಮೆ ಕಂಡಕ್ಟರ್ ಸ್ವಾಮಿ ನೀನು, ಕೋಳಿಗ್ಯಾರಾದ್ರೂ ಟಿಕೆಟ್ ಕೇಳ್ತಾರಾ ಅಂದಾಗ ಅಮ್ಮೋ..ರೂಲ್ಸ್ ಪ್ರಕಾರ ಕೋಳಿಗೆ ಆಫ್ ಟಿಕೆಟ್ ತಗೋಬೇಕು. ಇಲ್ಲ ಅಂದ್ರೆ ಕೋಳಿ ಹಿಡ್ಕೊಂಡು ಕೆಳಗಿಳಿ ತಾಯಿ ಅನ್ನುತ್ತಿದ್ದಂತೆ, ಮಹಿಳೆಯು ಸರಿ ಕಂಡಕ್ಟರೇ.. ಟಿಕೆಟ್ ತಗಂತೀನಿ ಆದ್ರೆ ಕೋಳಿಗಾಗಿ ಸೀಟು ಕೊಡಲೇಬೇಕು ಎಂದು ಕಂಡಕ್ಟರ್ ಜೊತೆ ವಾಗ್ವಾದಕ್ಕಿಳಿದಿದ್ದಾರೆ.
ಕೋಳಿ ಜಗಳ ಜೋರಾಯಿತು. ಪ್ರಯಾಣಿಕರು ಸೇರಿ ಎಲ್ಲರೂ ಸಾಕಷ್ಟು ತಿಳಿ ಹೇಳಿದ ಬಳಿಕ ಮಹಿಳೆ ಟಿಕೆಟ್ ಪಡೆದರು. ಈ ವೇಳೆ ಕೆಲ ಪ್ರಯಾಣಿಕರು ಮಹಿಳೆಗೆ ರೂಲ್ಸ್ ಬಗ್ಗೆ ಹೇಳಿದರೂ ಕೇಳದ ಮಹಿಳೆ ಬಸ್ಸು ಕೂಡ್ಲಿಗಿಯಿಂದ ಕೊಟ್ಟೂರು ಕಡೆಗೆ ಸಾಗಿದರೂ ಜಗಳ ಮುಂದುವರೆದಿತ್ತು.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion












Click it and Unblock the Notifications