5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶ ಪ್ರಕಟಕ್ಕೆ ಸುಪ್ರಿಂ ತಡೆಯಾಜ್ಞೆ
ನವದೆಹಲಿ, ಏಪ್ರಿಲ್, 08: 5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಏಪ್ರಿಲ್ 08) ತಡೆಯಾಜ್ಞೆ ನೀಡಿದೆ.
5,8, 9ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಾಂಕನ ಪರೀಕ್ಷೆಗೆ ಅನುಮತಿ ನೀಡಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ರುಪ್ಸಾ, ಅವರ್ ಸ್ಕೂಲ್, ಆರ್ಟಿಇ ವಿದ್ಯಾರ್ಥಿಗಳು ಮತ್ತು ಪೋಷಕರ ಸಂಘಟನೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದವು. ಇದೀಗ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ಪರೀಕ್ಷಾ ಫಲಿತಾಂಶ ಪ್ರಕಟಿಸಿದಂತೆ ತಡೆಯಾಜ್ಞಾ ನೀಡಿದ್ದು, ಅಲ್ಲದೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಅಹ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

ಈಗಾಗಲೇ ರಾಜ್ಯದಲ್ಲಿನ ಶಾಲೆಗಳು 5,8 ಮತ್ತು 9ನೇ ತರಗತಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶವನ್ನು ಬೆಳಗ್ಗೆ 10 ಗಂಟೆಗೆ ಪ್ರಕಟ ಮಾಡಿವೆ. ಎಲ್ಲಾ ಶಾಲೆಗಳಲ್ಲಿ ಆಡಳಿತ ಮಂಡಳಿಗಳು ಫಲಿತಾಂಶ ಪ್ರಕಟ ಮಾಡಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಫಲಿತಾಂಶ ಕಳುಹಿಸಲಾಗಿದೆ. ಆಡಳಿತ ಮಂಡಳಿಗಳು ಶಿಕ್ಷಣ ಇಲಾಖೆಗೆ ಮಾಹಿತಿ ಅಪ್ಲೋಡ್ ಮಾಡಬೇಕಿದೆ.
ಇನ್ನು ರಾಜ್ಯದ 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಾಂಕನ ಪರೀಕ್ಷೆಯ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಇನ್ನಯ ಕರ್ನಾಟಕ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿದ್ದು, ಪೋಷಕರು, ಶಿಕ್ಷಕರು ಮತ್ತು ಶಾಲಾ ಆಡಳಿತ ಮಂಡಳಿಗೆ ಸಂಕಷ್ಟ ತಂದೊಡ್ಡುತ್ತಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ.ತ್ರಿವೇದಿ ಮತ್ತು ಪಂಕಜ್ ಮಿಥಲ್ ಅವರ ಪೀಠವು ಕರ್ನಾಟಕ ಹೈಕೋರ್ಟ್ನ ವಿಭಾಗೀಯ ಪೀಠದ ಮಾರ್ಚ್ 22ರ ಆದೇಶವನ್ನು ಅಮಾನತುಗೊಳಿಸಿತು.
ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ನಿರ್ವಹಣಾ ಸಂಘ ಕರ್ನಾಟಕ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಎರಡು ವಾರಗಳಲ್ಲಿ ಇದಕ್ಕೆ ಪ್ರತಿಕ್ರಿಯಿಸುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್ನ ಆದೇಶವು ಪ್ರಾಥಮಿಕವಾಗಿ ಶಿಕ್ಷಣ ಹಕ್ಕು ಕಾಯ್ದೆಗೆ ಹೊಂದಿಕೆಯಾಗುವುದಿಲ್ಲ ಎಂದು ಪೀಠವು ಹೇಳಿದ್ದು, ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ತಡೆಹಿಡಿಯಬೇಕೇಂದು ಆದೇಶಿಸಿದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications