ಜೂನ್ 15ರಿಂದ ರಾಜ್ಯದಲ್ಲಿ ಮೋಡ ಬಿತ್ತನೆ ಆರಂಭ: ಕೃಷಿ ಸಚಿವ
ಚಿಕ್ಕಬಳ್ಳಾಪುರ, ಮೇ 21: ಜೂನ್ 15ನೇ ತಾರೀಖಿನಿಂದ ರಾಜ್ಯದ ಆಯ್ದ ಪ್ರದೇಶಗಳಲ್ಲಿ ಮಳೆಗಾಗಿ ಮೋಡ ಬಿತ್ತನೆ ಕಾರ್ಯ ಆರಂಭವಾಗಲಿದೆ ಎಂದು ರಾಜ್ಯ ಕೃಷಿ ಸಚಿವ ಎನ್.ಎಚ್.ಶಿವಶಂಕರ ರೆಡ್ಡಿ ಅವರು ಹೇಳಿದ್ದಾರೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಈ ಬಾರಿ ವಾಡಿಕೆಗಿಂತಲೂ ಕಡಿಮೆ ಮಳೆ ಆಗಲಿದೆ, ಹಾಗಾಗಿ ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆ ಕಾರ್ಯ ಮಾಡಲಾಗುತ್ತಿದೆ ಎಂದಿದ್ದಾರೆ. ಇದೇ ವಿಷಯವನ್ನು ಇತ್ತೀಚೆಗಷ್ಟೆ ಸಚಿವ ಕೃಷ್ಣಬೈರೇಗೌಡ ಅವರೂ ಹೇಳಿದ್ದರು.
ಕಳೆದ ವರ್ಷ ವಿಧಾನಸಭೆ ಚುನಾವಣೆ ಇದ್ದ ಕಾರಣ ಮೋಡ ಬಿತ್ತನೆ ಸಾಧ್ಯವಾಗಲಿಲ್ಲ, ಆದರೆ ಈ ಬಾರಿ ಹಾಗಾಗದು, ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣವಾಗಿದ್ದು, ಹುಬ್ಬಳ್ಳಿ ಮತ್ತು ಬೆಂಗಳೂರು ಕೇಂದ್ರಗಳ ಮೂಲಕ ಜೂನ್ 15 ರಿಂದ ಮೋಡ ಬಿತ್ತನೆ ಆರಂಭವಾಗಲಿದೆ ಎಂದರು.

ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿದ್ದ ಸಚಿವರು, ಜಿಲ್ಲೆಯ ಬರ ಪರಿಸ್ಥಿತಿಯ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಇತರರೊಂದಿಗೆ ಸಭೆ ನಡೆಸಿದರು.
88 ಕೋಟಿ ರೂಪಾಯಿ ವೆಚ್ಚದಲ್ಲಿ ಮೋಡ ಬಿತ್ತನೆ ಕಾರ್ಯ ನಡೆಸಲು ಸರ್ಕಾರ ತಯಾರಾಗಿದೆ. ಈ ಬಾರಿ ಮುಂಗಾರು ಕ್ಷೀಣಿಸುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಕಾರಣ ಮಳೆ ಕೊರತೆ ಆಗದಂತೆ ಮಾಡಲು ಮೋಡ ಬಿತ್ತನೆ ಮಾಡಲಾಗುತ್ತಿದೆ.
ಜೂನ್ 06ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ, ಜೂನ್ 8 ಅಥವಾ 9 ರಂದು ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶ ಮಾಡಲಿದೆ. ಆದರೆ ಈ ಬಾರಿ ವಾಡಿಕೆಗಿಂತಲೂ ಅತ್ಯಂತ ಕಡಿಮೆ ಮಳೆ ಆಗಲಿದೆ ಎನ್ನಲಾಗಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications