ಸಾಲುಮರದ ತಿಮ್ಮಕ್ಕನಿಗೆ ಬಿಡಿಎ ಸೈಟ್ ದಾಖಲೆ ಹಸ್ತಾಂತರ
ಬೆಂಗಳೂರು ಜೂ. 25: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮಂಜೂರು ಮಾಡಿದ ನಿವೇಶನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಶತಾಯುಷಿ ಸಾಲು ಮರದ ತಿಮ್ಮಕ್ಕಗೆ ಹಸ್ತಾಂತರಿಸಿದರು.
ಶನಿವಾರ ಮುಖ್ಯಮಂತ್ರಿಗಳ ಗೃಹ ಕಚೇರಿಗೆ ಸಾಲುಮರದ ತಿಮ್ಮಕ್ಕ ಸಾಕು ಪುತ್ರನ ಜೊತೆ ಆಗಮಿಸಿದ್ದರು. ಕೆಲವು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವೇಶನ ನೀಡುವ ಭರವಸೆ ನೀಡಿದ್ದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ದೇಶನ ಮೇರೆಗೆ ಬಿಡಿಎ 50x80 ಅಡಿಯ ನಿವೇಶನ ಮಂಜೂರು ಮಾಡಿತ್ತು. ಶನಿವಾರ ಸೈಟ್ಗಳ ಪತ್ರವನ್ನು ಹಂಚಿಕೆ ಮಾಡಲಾಗಿದೆ.

ನಿವೇಶನ ಹಂಚಿಕೆ ; ಮೂರು ದಿನಗಳ ಹಿಂದೆ ಮುಖ್ಯಮಂತ್ರಿಗಳ ನಿವಾಸದಲ್ಲಿ ಬಸವಾಜ ಬೊಮ್ಮಾಯಿಯನ್ನು ಸಾಲುಮರದ ತಿಮ್ಮಕ್ಕ ಭೇಟಿ ಮಾಡಿದ್ದರು. ಯೋಗಕ್ಷೇಮ ವಿಚಾರಿಸಿ ಕೆಲ ಹೊತ್ತು ಮಾತುಕತೆ ನಡೆಸಿದ ನಂತರ ಬೊಮ್ಮಾಯಿ ಕಾಲು ಮುಟ್ಟಿ ಆಶೀರ್ವಾದ ಪಡೆದಿದ್ದರು.
ಇದೇ ವೇಳೆ ಮುಖ್ಯಮಂತ್ರಿಗಳು ತಿಮ್ಮಕ್ಕಗೆ ಒಂದು ಬಿಡಿಎ ನಿವೇಶನ ಮತ್ತು ಮರಗಳನ್ನು ಬೆಳೆಸಲು ಸೂಕ್ತ ಜಮೀನು ಕೊಡಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಭರವಸೆ ನೀಡಿದ್ದರು.

ಭರವಸೆಯಂತೆ ಮೂರೇ ದಿನಕ್ಕೆ ನಾಡಪ್ರಭು ಕೆಂಪೇಗೌಡ ಬಡಾವಣೆಯ 7 ನೇ ಬ್ಲಾಕ್ ಜೆ-ಸೆಕ್ಟರ್ನಲ್ಲಿರುವ 50x80 ಚದರ ಅಡಿ ನಿವೇಶನದ ಕ್ರಯಪತ್ರವನ್ನು ಹಸ್ತಾಂತರ ಮಾಡಲಾಗಿದೆ. ಇನ್ನು ಮರಗಳನ್ನು ನೆಡಲು ತಿಮ್ಮಕ್ಕ ಅವರಿಗೆ ಜಮೀನು ನೀಡುವಂತೆಯೂ ಅಧಿಕಾರಿಗಳಿಗೆ ಬೊಮ್ಮಾಯಿ ಸೂಚಿಸಿದ್ದಾರೆ.
-
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications