ಮೀಸಲಾತಿ ಹೇಳಿಕೆಯು ರಣದೀಪ್ ಸುರ್ಜೆವಾಲರ ನ್ಯಾಯಾಂಗ ಅಪ್ರಬುದ್ಧತೆ ತೋರಿಸುತ್ತದೆ: ಸಿಎಂ ಬೊಮ್ಮಾಯಿ
ಬೆಂಗಳೂರು, ಏಪ್ರಿಲ್ 26: ಕರ್ನಾಟಕ ರಾಜ್ಯ ಬಿಜೆಪಿ ಸರ್ಕಾರ ಮೀಸಲಾತಿ ವಿಚಾರದಲ್ಲಿ ವಿವಿಧ ಸಮುದಾಯಗಳಿಗೆ ಮೋಸ ಮಾಡಿದ್ದಾರೆ ಎಂದೆಲ್ಲ ನೀಡಿದ ಆರೋಪಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಈ ಕುರಿತು ಬುಧವಾರ ಟ್ವೀಟ್ ಮೂಲಕ ದಾಖಲೆ ಒದಗಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಮೀಸಲಾತಿ ವಿಚಾರ ಕುರಿತು ಕಾಂಗ್ರೆಸ್ ಪಕ್ಷದ ರಂದೀಪ್ ಸುರ್ಜೆವಾಲ ಅವರ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಈ ಮೀಸಲಾತಿ ಪ್ರಕರಣ 'ಮೊಟ್ಟ ಮೊದಲಿಗೆ, ಪ್ರಕರಣ ಸರ್ವೋಚ್ಚ ನ್ಯಾಯಾಲಯದಲ್ಲಿದ್ದು, ಕಾಂಗ್ರೆಸ್ ಪಕ್ಷದ ಶ್ರೀ ಸುರ್ಜೆವಾಲಾ ಅಥವಾ ಕಾಂಗ್ರೆಸ್ ಪಕ್ಷ ನೀಡಿರುವ ಹೇಳಿಕೆ ನ್ಯಾಯಾಂಗ ನಿಂದನೆ ಮತ್ತು ಆ ಮೂಲಕ ನ್ಯಾಯ ಒದಗಿಸಲು ತಡೆಒಡ್ಡಲು ಮಾಡಿರುವ ಪ್ರಯತ್ನ ವಾಗಿದೆ. ಸಂವಿಧಾನವು ಮೀಸಲಾತಿಯನ್ನು ಧರ್ಮದ ಆಧಾರದ ಮೇಲೆ ನೀಡುವುದರ ಬಗ್ಗೆ ಆಲೋಚಿಸಿಲ್ಲ. ಭಾರತದ ಸಂವಿಧಾನಶಿಲ್ಪಿ, ಬಾಬಾ ಸಾಹೇಬ್ ಡಾ: ಬಿ.ಆರ್. ಅಂಬೇಡ್ಕರ್ ಅವರು ಪ್ರಥಮ ತಿದ್ದುಪಡಿಯನ್ನು ಪರಿಚಯಿಸುವ ಸಂದರ್ಭದಲ್ಲಿ ಈ ಕುರಿತು ಭಾಷಣ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
'ನ್ಯಾಯಾಲಯದಲ್ಲಿ ಮುಚ್ಚಳಿಕೆ ನೀಡಿದ್ದು ಏಕೆ ಎಂಬ ಹೇಳಿಕೆ ಹಾಸ್ಯಾಸ್ಪದವಾಗಿದೆ. ಇದು ನ್ಯಾಯಾಂಗ ಪ್ರಕ್ರಿಯೆಗಳ ಕುರಿತಂತೆ ನಿಮಗಿರುವ ಅಪ್ರಬುದ್ಧತೆಯನ್ನು ತೋರಿಸುತ್ತದೆ. ಭಾರತೀಯ ಕಾಂಗ್ರೆಸ್ ಪಕ್ಷವು (ಐಎನ್ಸಿ) ಕರ್ನಾಟಕ ರಾಜ್ಯದಲ್ಲಿ ಯಾವಾಗಲೂ ಓಲೈಕೆ ರಾಜಕಾರಣದಲ್ಲಿ ತೊಡಗಿದೆ. ತುಷ್ಟೀಕರಣ ರಾಜಕಾರಣ ಮಾಡುತ್ತದೆ. ಸಾಮಾಜಿಕ ನ್ಯಾಯ ಒದಗಿಸುವುದನ್ನು ಅರ್ಥ ಮಾಡಿಕೊಂಡಿಲ್ಲ ಎಂದು ಅವರು ದೂರಿದರು.
ನ್ಯಾಯಾಂಗ ನಿಂದನೆಯ ಎಚ್ಚರಿಕೆ
ಸರ್ಕಾರವು, ಹಿರಿಯ ನ್ಯಾಯವಾದಿಗಳನ್ನು ನೇಮಿಸಿಕೊಂಡು ತನ್ನ ನಿಲುವನ್ನು ಸಮರ್ಪಕವಾಗಿ ಸಮರ್ಥಿಸಿಕೊಳ್ಳುತ್ತಿದೆ. ಸರ್ವೋಚ್ಚ ನ್ಯಾಯಾಲಯದಲ್ಲಿ ನ್ಯಾಯ ದೊರೆಯುವ ವಿಶ್ವಾಸ ನಮಗಿದೆ. ಈ ರೀತಿಯ ಹೇಳಿಕೆಗಳ ಮೂಲಕ ನ್ಯಾಯ ವ್ಯವಸ್ಥೆಯನ್ನು ಕಲುಷಿತಗೊಳಿಸಲು ಪ್ರಯತ್ನಿಸಿದರೆ, ಅದು ನ್ಯಾಯಾಂಗ ನಿಂದನೆಯಾಗುತ್ತದೆ ಎಂದು ಅವರು ಟ್ವೀಟ್ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಸುರ್ಜೆವಾಲ ಮಾಡಿದ ಆರೋಪವೇನು?
ಕೆಪಿಸಿಸಿ ಅಧ್ಯಕ್ಷರ ಜೊತೆಗೆ ಬುಧವಾರ ಜಂಟಿ ಸುದ್ದಿಗೋಷ್ಠಿ ನಡೆಸಿದ್ದ ರಣದೀಪ್ ಸುರ್ಜೆವಾಲಾ ಅವರು ಬಿಜೆಪಿ ಸರ್ಕಾರದ ಮೇಲೆ ಸಾಲು ಸಾಲು ಆರೋಪ ಮಾಡಿದರು.
ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ತನ್ನ ಮೀಸಲಾತಿ ಹೆಚ್ಚಳ ಆದೇಶ ಸಮರ್ಥಿಸಿಕೊಳ್ಳಲು ಸುಪ್ರೀಂ ಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಸಲು ವಿಫಲವಾಗಿದೆ. ಆ ಮೂಲಕ ಮೀಸಲಾತಿ ವಿಚಾರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತ, ಲಿಂಗಾಯತ, ಒಕ್ಕಲಿಗ ಸಮುದಾಯಗಳಿಗೆ ದ್ರೋಹ ಮಾಡಿದೆ. ಆ ಸಮುದಾಯದ ಜನರಿಗೆ ಅಪಮಾನ ಮಾಡಿದೆ ಎಂದು ಆಪಾದಿಸಿದರು.
ಕರ್ನಾಟಕ ಬಿಜೆಪಿ ಸರ್ಕಾರ 2002 ರಲ್ಲಿ ಜಾರಿಗೊಳಿಸಿದ್ದ ಮೀಸಲಾತಿಯನ್ನು ಮರುಜಾರಿ ಮಾಡುವ ಬಗ್ಗೆ ಸುಪ್ರೀಂಕೋರ್ಟ್ಗೆ ಮಾಹಿತಿ ನೀಡಿದೆ. ಆ ಮೂಲಕ ಒಕ್ಕಲಿಗರು 3ಎ, ಲಿಂಗಾಯತರು 3ಬಿ ವರ್ಗೀಕರಣದಲ್ಲಿ ಮುಂದುವರಿಯುತ್ತಾರೆ. ಆದರೆ ಬೊಮ್ಮಾಯಿ ಸರ್ಕಾರದ ಆದೇಶದಂತೆ ಹೆಚ್ಚುವರಿ ಶೇಕಡಾ 2ರಷ್ಟು ಮೀಸಲಾತಿ ಕೆಗೆಟಕುವುದಿಲ್ಲ. ಮೊನ್ನೆ ಏಪ್ರಿಲ್ 25 ಸುಪ್ರೀಂ ಕೋರ್ಟ್ನಲ್ಲಿ ಸಾಲಿಸಿಟರ್ ಜನರಲ್ ಮೂಲಕ, ಮಾರ್ಚ್ 27, 2023ರಂದು ತಾನು ಹೊರಡಿಸಿದ್ದ ಮೀಸಲಾತಿ ಹೆಚ್ಚಳ ಆದೇಶಕ್ಕೆ ತಾನೇ ತಡೆ ಹಿಡಿದಿದೆ. ಇದು ಬಿಜೆಪಿಯಿಂದಾಗಿರುವ ಪಾಪ ಎಂದು ಅವರು ಕಿಡಿ ಕಾರಿದ್ದರು.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications