Get Updates
Get notified of breaking news, exclusive insights, and must-see stories!

ಜಿ.ಪಂ. ಸಿಇಓಗಳು ತಿಂಗಳಲ್ಲಿ ಮೂರು ದಿನ ಗ್ರಾಮಗಳಿಗೆ ತೆರಳಲು ಮುಖ್ಯಮಂತ್ರಿ ಸೂಚನೆ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಿಇಓಗಳು ಜನಸಂಪರ್ಕ ಹೊಂದಬೇಕು. ಹಳ್ಳಿಗರು ಸಮಸ್ಯೆಯ ಜೊತೆ ಜೀವನ ಮಾಡುತ್ತಾರೆ. ಸಮಸ್ಯೆಯ ಬಗ್ಗೆ ಚರ್ಚೆ ಮಾಡುವುದು ಬೇರೆ. ಸಮಸ್ಯೆಯ ಜೊತೆ ಬದುಕುವುದು ಬೇರೆ. ಅಧಿಕಾರಿಗಳು ತಳಮಟ್ಟಕ್ಕೆ ಹೋಗಿ ಸಮಸ್ಯೆಗಳ ಪರಿಹಾರದ ಬಗ್ಗೆ ಚಿಂತನೆ ಮಾಡಬೇಕು ಎಂದು ತಿಳಿಸಿದರು.

ಜಿ.ಪಂ. ಸಿಇಓಗಳು ದಿನಕ್ಕೆ 10 ತಾಸು ಕೆಲಸ ಮಾಡಬೇಕು, ತಿಂಗಳಲ್ಲಿ 3 ದಿನ ಹಳ್ಳಿಗಳಲ್ಲಿ ಪ್ರವಾಸ ಕೈಗೊಳ್ಳಿ ಎಂದು ಸಲಹೆ ನೀಡಿದರು. ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಗಮನ ಕೇಂದ್ರೀಕರಿಸಿ. ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರ ನೆರವು ಪಡೆದುಕೊಂಡು ಕಾರ್ಯನಿರ್ವಹಿಸಿ, ಜನರ ಸಮಸ್ಯೆ ಬಗೆಹರಿಸಿ ಎಂದು ತಿಳಿಸಿದರು.

ಸಚಿವರಾದ ಕೆ.ಎಸ್. ಈಶ್ವರಪ್ಪ, ಗೋವಿಂದ ಕಾರಜೋಳ, ವಿ. ಸೋಮಣ್ಣ ಸರ್ಕಾರದ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

CM Basavaraj Bommai instructing ZP CEOs to go to villages three days a month

ಜಿ.ಪಂ. ಸಭೆಯ ಮುಖ್ಯಾಂಶಗಳು ಹೀಗಿವೆ:

ಜಲಜೀವ್ ಮಿಷನ್

* ಎಲ್ಲ ಜಿಲ್ಲೆಗಳ ಅಧಿಕಾರಿಗಳಿಂದ ಜಲಜೀವನ್ ಯೋಜನೆಯ ಪ್ರಸಕ್ತ ಸಾಲಿನಲ್ಲಿ ಆಗಿರುವ ಪ್ರಗತಿ,ಮುಂದಿನ 3 ತಿಂಗಳಲ್ಲಿ ಮಾಡುವ ಗುರಿಸಾಧನೆ ಹಾಗೂ ಬ್ಯಾಚ್ -2 ಕಾಮಗಾರಿಗಳ ಪ್ರಗತಿಯ ಮಾಹಿತಿಯನ್ನು ಪಡೆಯಲಾಯಿತು.

* ಕೆಲವು ವಿಶೇಷ ಪ್ರಕರಣಗಳನ್ನು ಹೊರತು ಪಡಿಸಿ, ಎಲ್ಲ ಜಿಲ್ಲೆಗಳಲ್ಲಿ ಜಲಜೀವನ್ ಮಿಷನ್ ಯೋಜನೆಯ ಗುರಿ ಸಾಧನೆ ಮಾಡುವಂತೆ ಸೂಚಿಸಿದರು.

* ಗ್ರಾಮೀಣಾಭಿವೃದ್ಧಿ ಸಚಿವರು ಹಾಗೂ ಅಪರ ಮುಖ್ಯ ಕಾರ್ಯದರ್ಶಿಗಳು ರಾಜ್ಯಾದ್ಯಂತ ಪ್ರವಾಸ ಮಾಡಿ ಯೋಜನೆಯ ಪ್ರಗತಿ, ಕಾಮಗಾರಿ ಗುಣಮಟ್ಟ ಪರಿಶೀಲನೆ ಮಾಡಬೇಕು.

* ಈ ಯೋಜನೆಯ ಯಶಸ್ಸು, ವೈಫಲ್ಯ ಎರಡಕ್ಕೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೇ ಹೊಣೆ. ಯಶಸ್ವಿಯಾದವರಿಗೆ ಮನ್ನಣೆ ನೀಡಲಾಗುವುದು, ವಿಫಲರಾದರೆ ಕ್ರಮ ಕೈಗೊಳ್ಳಲಾಗುವುದು ಎಂದು ಕಟ್ಟುನಿಟ್ಟಿನ ಸೂಚಿಸಲಾಯಿತು.

* ಬರಪೀಡಿತ ಜಿಲ್ಲೆಗಳಾದ ಯಾದಗಿರಿ. ಕಲ್ಬುರ್ಗಿ, ರಾಯಚೂರು ಜಿಲ್ಲೆಗಳಲ್ಲಿ ಪ್ರಾಶಸ್ತ್ಯದ ಮೇಲೆ ಕಾಮಗಾರಿ ಪೂರ್ಣಗೊಳ್ಳಬೇಕು. ತುಮಕೂರು ಜಿಲ್ಲೆಯಲ್ಲಿ ವಿವಿಧ ಮೂಲಗಳಿಂದ ನೀರು ಪಡೆದು ಜಲ ಜೀವನ್ ಮಿಷನ್ ಯೋಜನೆಯನ್ನು ಜಾರಿಗೊಳಿಸಲು ಸಮಗ್ರ ಯೋಜನೆ ರೂಪಿಸುವಂತೆ ಸೂಚಿಸಿದರು.

* ಚಾಮರಾಜನಗರ ಜಿಲ್ಲೆಯ ಗಡಿಯಲ್ಲಿ ಎತ್ತರದಲ್ಲಿರುವ ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲು ವಿಶೇಷ ಯೋಜನೆ ರೂಪಿಸುವಂತೆ ನಿರ್ದೇಶನ ನೀಡಲಾಯಿತು.

* ಬಹುಗ್ರಾಮ ಯೋಜನೆಗಳನ್ನು ಪ್ರತ್ಯೇಕವಾಗಿ ಪ್ರಗತಿ ಪರಿಶೀಲನೆ ನಡೆಸಬೇಕು. ಜಲಜೀವನ್ ಮಿಷನ್ ನೊಂದಿಗೆ ಇವುಗಳನ್ನು ಹೇಗೆ ಸಂಯೋಜನೆಗೊಳಿಸಬಹುದು ಎಂದು ಪರಿಶೀಲಿಸಿ, ಪ್ರತಿ ಮನೆಗೆ ನೀರು ಒದಗಿಸಲು ಆದ್ಯತೆ ನೀಡುವಂತೆ ತಿಳಿಸಲಾಗಿದೆ.

* ಗುತ್ತಿಗೆದಾರರಿಗೆ ನೀಡಲಾಗುವ ಕಾಮಗಾರಿಗಳ ಸಂಖ್ಯೆಯನ್ನು ನಿಗದಿಪಡಿಸುವಂತೆ ಗ್ರಾಮೀಣಾಭಿವೃದ್ಧೀ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಯಿತು. ಒಬ್ಬ ಗುತ್ತಿಗೆದಾರನಿಗೆ ಹೆಚ್ಚಿನ ಕಾಮಗಾರಿಗಳನ್ನು ನೀಡುವುದರಿಂದ ನಿಗದಿತ ಅವಧಿಯಲ್ಲಿ ಯೋಜನೆ ಪೂರ್ಣಗೊಳಿಸಲು ಸಾಧ್ಯವಿಲ್ಲ. ಸರ್ಕಾರದ ಇಚ್ಛೆಯಂತೆ ಯೋಜನೆಗಳು ಕಾರ್ಯಗತವಾಗಬೇಕು ಎಂದು ತಿಳಿಸಿದರು.

* ನಳ ಸಂಪರ್ಕ ನೀಡುವಾಗ ಉತ್ತಮ ಗುಣಮಟ್ಟದ ಮೀಟರ್ ಅಳವಡಿಸಬೇಕು. ಅಧಿಕಾರಿಗಳು ಕಾಮಗಾರಿಗಳ ಖುದ್ದು ಪರಿಶೀಲನೆ ಮಾಡಬೇಕು.

* ಕಾಮಗಾರಿಗಳ ಬಾಹ್ಯ ಸಂಸ್ಥೆಗಳ ಪರಿಶೀಲನೆ (ಥರ್ಡ್ ಪಾರ್ಟಿ ಇನ್ಸ್ಪೆಕ್ಷನ್) ಸಮರ್ಪಕವಾಗಿ ಆಗುತ್ತಿರುವ ಬಗ್ಗೆ ಗಮನ ಹರಿಸಬೇಕು. ಬಾಹ್ಯ ಸಂಸ್ಥೆಗಳ ತಪಾಸಣೆಯ ನಂತರ ಪುನ: ಪರಿಶೀಲನೆಗಾಗಿ ಸ್ಕ್ವಾಡ್ ನ್ನು ನೇಮಿಸಬೇಕು.

* ಕಾಮಗಾರಿ ಪ್ರಗತಿಯ ಬಗ್ಗೆ ಸಿಇಓಗಳು ಪ್ರತಿ ತಿಂಗಳು ಮುಖ್ಯಮಂತ್ರಿಗಳಿಗೆ ಹಾಗೂ ಸಂಬಂಧಪಟ್ಟ ಸಚಿವರಿಗೆ ವರದಿ ನೀಡಬೇಕು.

* ಅಧಿಕಾರ ವಿಕೇಂದ್ರೀಕರಣದ ಉದ್ದೇಶದಿಂದ ಎಕ್ಸಿಕ್ಯುಟಿವ್ ಇಂಜಿನಿಯರ್ ಗೆ 1 ಕೋಟಿ ಮೊತ್ತದ ಕಾಮಗಾರಿ, ಅಧೀಕ್ಷಕ ಇಂಜಿನಿಯರ್ ರವರಿಗೆ 2.5 ಕೋಟಿ ಮೊತ್ತದ ಕಾಮಗಾರಿಗಳನ್ನು ಪರಿಶೀಲನೆ ಮಾಡುವ ಅಧಿಕಾರ ನೀಡಬೇಕು ಎಂದು ಸೂಚಿಸಲಾಯಿತು.

ಉದ್ಯೋಗ ಖಾತರಿ ಹಾಗೂ ಜೆಜೆಎಂ ಆಡಿಟ್

* ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಆಡಿಟ್ ಹಾಗೂ ಜಲಜೀವನ್ ಮಿಷನ್ ಯೋಜನೆಯಡಿ ನೀರಿನ ಆಡಿಟ್ (ಹಂಚಿಕೆ ಮತ್ತು ಬಳಕೆಗೆ ಸಂಬಂಧಿಸಿದಂತೆ) ಆಗಬೇಕು ಎಂದು ಸೂಚಿಸಲಾಗಿದೆ.

* ರಾಜ್ಯದಲ್ಲಿ ಅಪೌಷ್ಟಿಕತೆಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಜಂಟಿಯಾಗಿ ವಿವಿಧ ಆಯಾಮಗಳಿಂದ ಅಪೌಷ್ಟಿಕ ಮಕ್ಕಳ ಸಮೀಕ್ಷೆಯನ್ನು ನಡೆಸಬೇಕು. ಹಾಗೂ ಅಪೌಷ್ಟಿಕತೆ ನಿವಾರಣೆಗೆ ಸಮಗ್ರ ಯೋಜನೆ ರೂಪಿಸಬೇಕು ಎಂದು ಸೂಚಿಸಿದರು.

* ಅಪೌಷ್ಟಿಕತೆ ನಿವಾರಣೆಗೆ ಕಾರ್ಯಕ್ರಮಗಳಿಗೆ ಇರುವ ಮಾನದಂಡಗಳನ್ನು ಪುನರ್ರಚನೆಯಾಗಬೇಕು. ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸಲು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಬೇಕು.

CM Basavaraj Bommai instructing ZP CEOs to go to villages three days a month

ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳ ನಿರ್ಮಾಣ:

* ಕುಡಿಯುವ ನೀರಿನ ಯೋಜನೆಯ ನಂತರ ವಸತಿ ಯೋಜನೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಪ್ರಧಾನಮಂತ್ರಿ ಆವಾಸ್ ಯೋಜನೆ ಆದ್ಯತೆ ಮೇರೆಗೆ ಅನುಷ್ಠಾನಗೊಳಿಸಬೇಕು.

* ಅಮೃತ ವಸತಿ ಯೋಜನೆಯಡಿ 750 ಗ್ರಾಮಪಂಚಾಯ್ತಿಗಳಲ್ಲಿ ಫಲಾನುಭವಿಗಳ ಆಯ್ಕೆಯನ್ನು ಶೀಘ್ರವಾಗಿ ಪೂರ್ಣಗೊಳ್ಳಬೇಕು.

* ಅತ್ಯಂತ ಕಡಿಮೆ ಪ್ರಗತಿ ಇರುವ ಜಿಲ್ಲೆಗಳಲ್ಲಿ ಮಾರ್ಚ್ ಅಂತ್ಯದೊಳಗೆ 75 % ಹಾಗೂ ಜೂನ್ ಒಳಗೆ 100% ಪ್ರಗತಿ ಆಗಬೇಕು.

* ಈ ಸರ್ಕಾರದ ಅವಧಿಯಲ್ಲಿ ಘೋಷಣೆಯಾಗಿರುವ 4 ಲಕ್ಷ ಮನೆಗಳು ನಿಗದಿತ ಅವಧಿಯೊಳಗೆ ಪೂರ್ಣಗೊಳ್ಳಲೇಬೇಕು. ಈ ಸರ್ಕಾರದ ಅವಧಿಯಲ್ಲಿಯೇ ಫಲಾನುಭವಿಗಳಿಗೆ ಮನೆಗಳು ದೊರಕುವಂತಾಗಬೇಕು.

ಎಸ್ ಸಿ ಎಸ್ ಟಿ , ಒಬಿಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ :

* ವಿದ್ಯಾರ್ಥಿ ವೇತನ ತಲುಪಿಸಲು ಆಧಾರ್ ಕಾರ್ಡ್ ಜೋಡಣೆ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸಬೇಕು. ವಿದ್ಯಾರ್ಥಿ ವೇತನ ಡಿಬಿಟಿ ಮೂಲಕ ತಲುಪಿಸಲು ಆಧಾರ್ ಕಾರ್ಡ್ ಬ್ಯಾಂಕುಗಳಿಗೆ ಲಿಂಕ್ ಮಾಡಿಸುವ ಕಾರ್ಯವೂ ತ್ವರಿತವಾಗಿ ಆಗಬೇಕು.

* ಬಡವರಿಗಾಗಿ ರೂಪಿಸಲಾಗಿರುವ ಯೋಜನೆಗಳು ನಿಗದಿತ ಅವಧಿಯಲ್ಲಿ ನಿಗದಿತ ಪರಿಹಾರ ತಲುಪಿದಾಗ ಮಾತ್ರ ಸರ್ಕಾರದ ಯೋಜನೆಗಳು ಫಲಪ್ರದವಾಗುತ್ತವೆ. ಈ ನಿಟ್ಟಿನಲ್ಲಿ ಎಲ್ಲರೂ ಕಾರ್ಯಪ್ರವೃತ್ತರಾಗಬೇಕು.

ಕೋವಿಡ್ ಲಸಿಕೆ ಕಾರ್ಯಕ್ರಮ

* ರಾಜ್ಯದಲ್ಲಿ ಜನವರಿ 14 ರೊಳಗೆ ಶೇ. 100 ರಷ್ಟು ಮೊದಲ ಡೋಸ್ ಲಸಿಕೆ ನೀಡಬೇಕು.

* ರಾಜ್ಯದ ಸರಾಸರಿಗಿಂತ ಕಡಿಮೆ ಪ್ರಗತಿ ಆಗಿರುವ ಜಿಲ್ಲೆಗಳಲ್ಲಿ ಆದ್ಯತೆಯ ಮೇರೆಗೆ ಲಸಿಕೆ ಅಭಿಯಾನವನ್ನು ತೀವ್ರಗೊಳಿಸಬೇಕು.

* ಹಿಂದೇಟು ಹಾಕುತ್ತಿರುವ ಕೆಲವು ಸಮುದಾಯಗಳನ್ನು ಸಿಇಓಗಳೂ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ಮಾಡಿ ಮನವೊಲಿಸುವಂತೆ ನಿರ್ದೇಶನ ನೀಡಿದರು.

ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ

* ರಾಜ್ಯದಲ್ಲಿ ಬಡ ರೋಗಿಗಳಿಗೆ ನಗದು ರಹಿತ ಚಿಕಿತ್ಸೆ ಸೌಲಭ್ಯ ನೀಡಲು ಅನುವಾಗುವಂತೆ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡುಗಳ ವಿತರಣೆಯಲ್ಲಿ ಪ್ರಗತಿ ಕಡಿಮೆ ಇದ್ದು, ಈ ಕಾರ್ಡುಗಳನ್ನು ವಿತರಿಸಲು ಅಭಿಯಾನ ಹಮ್ಮಿಕೊಳ್ಳುವಂತೆ ಸೂಚಿಸಿದರು.

* ಕೋವಿಡ್ ಸಂಭಾವ್ಯ 3ನೇ ಅಲೆಗೆ ಅಗತ್ಯ ಸಿದ್ಧತೆಗಳನ್ನು ನಡೆಸುವಂತೆ ಸೂಚಿಸಲಾಗಿದೆ. ಮಾರ್ಗಸೂಚಿಗಳನ್ನು ಗಂಭೀರವಾಗಿ ಪಾಲನೆ ಮಾಡಬೇಕು. ಆಕ್ಸಿಜನ್ ಲಭ್ಯತೆ, ಆಕ್ಸಿಜನೇಟೆಡ್ ಬೆಡ್ ಗಳು, ಐಸಿಯು ಬೆಡ್ ಗಳು ಹಾಗೂ ಔಷಧಿಗಳ ಲಭ್ಯತೆಗೆ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಲಾಯಿತು.

ಶಿಕ್ಷಣ :

* ಜಿಲ್ಲೆಗಳಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದಾಗಿ ಹಾನಿಗೊಳಗಾದ ಶಾಲಾ ಕೊಠಡಿಗಳ ದುರಸ್ತಿ ಹಾಗೂ ಸಂಪೂರ್ಣ ನಾಶವಾಗಿರುವ ಶಾಲಾಕೊಠಡಿಗಳ ನಿರ್ಮಾಣದ ಪ್ರಗತಿಯ ಬಗ್ಗೆ ಮಾಹಿತಿ ಪಡೆದರು.

* ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ಅನುದಾನ ಬಿಡುಗಡೆ ಮಾಡಲಾಗಿದೆ.

* ಜನವರಿ ಅಂತ್ಯದೊಳಗೆ ಹಾನಿಗೊಳಗಾದ ಶಾಲಾ ಕೊಠಡಿಗಳ ದುರಸ್ತಿ ಕಾರ್ಯ ಪೂರ್ಣಗೊಳ್ಳಬೇಕೆಂದು ಸೂಚಿಸಿದರು.

* ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅಂದಾಜು ಸಿದ್ಧಪಡಿಸಿ ಪ್ರಸ್ತಾವನೆಯನ್ನು ಶೀಘ್ರವಾಗಿ ಸಲ್ಲಿಸಬೇಕು.

* ಮುಂದಿನ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ವೇಳೆಗೆ ಹೊಸ ಶಾಲಾ ಕೊಠಡಿಗಳ ನಿರ್ಮಾಣವೂ ಪೂರ್ಣಗೊಳ್ಳಬೇಕು.

* ಹತ್ತು ಸಾವಿರ ಶಿಕ್ಷಕರ ನೇಮಕಾತಿಗೆ ಆರ್ಥಿಕ ಇಲಾಖೆಯಿಂದ ಅನುಮತಿ ನೀಡಲಾಗಿದೆ. ಜಿಲ್ಲೆಗಳಲ್ಲಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು.

* ಕಲ್ಯಾಣ ಕರ್ನಾಟಕದ ಭಾಗಕ್ಕೆ 16000 ಹುದ್ದೆಗಳನ್ನು ಮಂಜೂರು ಮಾಡಿದ್ದು, ಇದರಲ್ಲಿ 5000 ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದು ಸೂಚಿಸಿದರು.

Recommended Video

      ಸೌತ್ ಆಫ್ರಿಕಾವನ್ನು ಬಗ್ಗುಬಡಿದಿದ್ದು ಹೇಗೆ ಅಂತಾ ಹೇಳಿದ ವಿರಾಟ್ | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+