Get Updates
Get notified of breaking news, exclusive insights, and must-see stories!

Breaking; ಆಲಮಟ್ಟಿ ಡ್ಯಾಂಗೆ ಬಾಗಿನ ಅರ್ಪಿಸಿದ ಬಸವರಾಜ ಬೊಮ್ಮಾಯಿ

ಬೆಂಗಳೂರು, ಸೆಪ್ಟೆಂಬರ್ 30; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಲಮಟ್ಟಿಯ ಲಾಲ್ ಬಹದ್ದೂರ ಶಾಸ್ತ್ರೀ ಸಾಗರದ ಕೃಷ್ಣಾ ನದಿಗೆ ಶುಕ್ರವಾರ ಗಂಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು.

ಶುಕ್ರವಾರ ಜಲಸಂಪನ್ಮೂಲ ಸಚಿವ ಗೋವಿಂದ‌ ಕಾರಜೋಳ, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಸಿ. ಸಿ. ಪಾಟೀಲ, ಸಂಸದ ರಮೇಶ ಜಿಗಜಿಣಗಿ ಸೇರಿದಂತೆ ಇತರ ನಾಯಕರ ಜೊತೆ ಸಿಎಂ ಗಂಗೆ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಎ. ಎಸ್. ಪಾಟೀಲ ನಡಹಳ್ಳಿ, ಶಿವಾನಂದ ಪಾಟೀಲ, ವಿಧಾನ ಪರಿಷತ್ ಸದಸ್ಯ ಪಿ. ಎಚ್.ಪೂಜಾರ, ಮಾಜಿ ಶಾಸಕರಾದ ಶ್ರಿಕಾಂತ ಕುಲಕರ್ಣಿ, ಎಸ್. ಕೆ. ಬೆಳ್ಳುಬ್ಬಿ, ಅಪ್ಪು ಪಟ್ಟಣಶೆಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

CM Basavaraj Bommai offered bagina to Krishna River at Almatti Dam

ಜಲಸಂಪನ್ಮೂಲ ಸಚಿವ ಗೋವಿಂದ‌ ಕಾರಜೋಳ ಆಲಮಟ್ಟಿಯ ಪ್ರವಾಸಿ ಮಂದಿರದಲ್ಲಿ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡಿಸಿದರು. ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.

CM Basavaraj Bommai offered bagina to Krishna River at Almatti Dam

ಆಲಮಟ್ಟಿಯಲ್ಲಿ ಬಾಗಿನ ಅರ್ಪಿಸಿದ ಬಳಿಕ ಕೃಷ್ಣಾ ಭಾಗ್ಯ ಜಲ ನಿಗಮದ ಕಚೇರಿಯ ಹಿಂಭಾಗದಲ್ಲಿ ನೂತನ ಪ್ರವಾಸಿಮಂದಿರ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಭೂಮಿಪೂಜೆ ಮಾಡಿದರು.

ಬಾಗಿನ ಅರ್ಪಣೆ ಬಳಿಕ ಮಾತನಾಡಿದ ಬಸವರಾಜ ಬೊಮ್ಮಾಯಿ, "ಕೃಷ್ಣಾ ನದಿ ನೀರು ಹಂಚಿಕೆ ತೀರ್ಪು ಕುರಿತು ಕೇಂದ್ರ ಸರ್ಕಾರ ಶೀಘ್ರವೇ ಅಧಿಸೂಚನೆ ಹೊರಡಿಸಲಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

"ತೀರ್ಪಿನ ಆಕ್ಷೇಪಣೆ ವಿಚಾರಣೆಗೆ ಶೀಘ್ರದಲ್ಲೇ ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ಪೀಠ ಸ್ಥಾಪನೆಯಾಗಲಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರ ನ್ಯಾಯಾಧೀಶರು ವಿಚಾರಣೆಯಿಂದ ಹಿಂದೆ ಸರಿದಿದ್ದು, ಹೊಸ ನ್ಯಾಯಾಧೀಶರ ನೇಮಕ್ಕೆ ಅರ್ಜಿ ಸಲ್ಲಿಸಲಾಗಿದೆ. ಮುಂದಿನ ತಿಂಗಳು ವಿಚಾರಣೆ ಆರಂಭವಾಗಲಿದೆ" ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮ ಕಚೇರಿ ಆಲಮಟ್ಟಿಗೆ ಸ್ಥಳಾಂತರ ಮಾಡುವ ಕಾರ್ಯ ಜನವರಿಯೊಳಗೆ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+