ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಪಾಲಿಸಲು ಎಲ್ಲರೂ ಸಹಕರಿಸಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಮಾ. 15: ಮಕ್ಕಳಿಗೆ ವಿದ್ಯೆಗಿಂತ ಮುಖ್ಯ ಯಾವುದೂ ಇಲ್ಲ. ಹೈಕೋರ್ಟ್ ತ್ರಿಸದಸ್ಯ ಪೀಠದ ಆದೇಶ ನಾವೆಲ್ಲರೂ ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹೈಕೋರ್ಟ್ ಆದೇಶ ಅನುಷ್ಠಾನಗೊಳಿಸಲು ಎಲ್ಲರೂ ಸಹಕರಿಸಬೇಕು, ಸಮಾಜದಲ್ಲಿ ಶಾಂತಿ ಕಾಪಾಡಬೇಕು. ಎಲ್ಲ ಪಾಲಕರು, ವಿದ್ಯಾರ್ಥಿಗಳು, ಸಮುದಾಯದ ಮುಖಂಡರಿಗೆ ಕಳಕಳಿಯ ವಿನಂತಿ ಮಾಡುತ್ತೇನೆ. ಈ ಆದೇಶ ಒಪ್ಪಿಕೊಂಡು ಶಾಂತಿ ಸುವ್ಯವಸ್ಥೆ ಕಾಪಾಡಿ ಎಂದರು.

ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಲು ಎಲ್ಲರೂ ಸಹಕಾರ ನೀಡಬೇಕು. ವಿದ್ಯಾರ್ಥಿಗಳು ಹೈಕೋರ್ಟ್ ಆದೇಶ ಪಾಲನೆ ಮಾಡಿ, ನಿಮಗೆ ಶಿಕ್ಷಣ ಬಹಳ ಮುಖ್ಯವಾಗಿದೆ. ತರಗತಿ, ಪರೀಕ್ಷೆಗಳಿಂದ ಹೊರಗೆ ಉಳಿಯುವ ನಿರ್ಧಾರ ಬಿಟ್ಟು ಶೈಕ್ಷಣಿಕ ಚಟುವಟಿಕೆಗಳಲ್ಲಿ ಭಾಗಿಯಾಗಬೇಕು ಎಂದು ಮನವಿ ಮಾಡಿದರು.

CM Basavaraj Bommai Reaction to Karnataka High Court Verdict on Hijab Row

ಹೈಕೋರ್ಟ್ ತೀರ್ಪು ಎಲ್ಲರೂ ಪಾಲಿಸಬೇಕು. ಒಂದು ವೇಳೆ ಎಲ್ಲಿಯಾದರೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದರೆ ಗೃಹ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಿದರು.

Recommended Video

      ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಭಾಗ ಅಲ್ಲ: ಹೈಕೋರ್ಟ್ ಮಹತ್ವದ ತೀರ್ಪು | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+