Get Updates
Get notified of breaking news, exclusive insights, and must-see stories!

ಭಜರಂಗದಳ ಬ್ಯಾನ್‌ಗೆ ಆಕ್ರೋಶ: ಭಜರಂಗಿಗಳು ಸಿಡಿದೆದ್ದರೆ ಕಾಂಗ್ರೆಸ್ ದೇಶಬಿಟ್ಟು ಹೋಗುತ್ತೆ: ಸಿಎಂ ಎಚ್ಚರಿಕೆ

ಧಾರವಾಡ, ಮೇ 02: ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ಕುರಿತು ಪ್ರಸ್ತಾಪಿಸಿದೆ. ಈ ಸಂಬಂಧ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ. ಇತ್ತ ಸಿಎಂ ಬಸವರಾಜ ಬೊಮ್ಮಾಯಿ ಅವರು ಹನುಮಂತನ ಭಕ್ತರು ಭಜರಂಗದಳದ ಭಜರಂಗಿಗಳು. ಅವರೇನಾದರು ಸಿಡಿದೆದ್ದರೆ ಕಾಂಗ್ರೆಸ್ ದೇಶ ಬಿಟ್ಟು ಹೋಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ಜಿಲ್ಲೆಯ ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಂಕರ ಪಾಟೀಲ್ ಮುನೇನಕೊಪ್ಪ ಅವರ ಪರ ಬೃಹತ್ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಸಾಮಾಜಿಕ ನ್ಯಾಯ ಎನ್ನುತ್ತಿದ್ದ ಕಾಂಗ್ರೆಸ್ ಅವರು ಮೀಸಲಾತಿ ಹೆಚ್ಚಳದ ನಮ್ಮ ನಿರ್ಧಾರವನ್ನು ಸಂವಿಧಾನ ವಿರೋಧಿಸಿ ಹಿಂಬಾಗಿಲ ಮೂಲಕ ಕೋರ್ಟ್ ಗೆ ಹೋದರು. ಈಗ ಭಜರಂಗ ದಳ ನಿಷೇಧ ಮಾಡುವುದಾಗಿ ಹೇಳುತ್ತಿದ್ದಾರೆ.

CM Basavaraj Bommai Warning To Against Congress Of Bajrang Dal Ban Manifesto

ಕಾಂಗ್ರೆಸ್ ದೇಶದ್ರೋಹ, ಭಯೋತ್ಪಾದನೆ ಮಾಡುವ ಪಿಎಫ್ಐ ಜೊತೆ ಭಜರಂಗದಳವನ್ನು ಸೇರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಪಿಎಫ್ಐ ಬ್ಯಾನ್ ಮಾಡಿದ್ದಾರೆ. ನಮ್ಮ ಪರಂಪರೆ, ನಮ್ಮ ಧರ್ಮ, ನಮ್ಮ ಇತಿಹಾಸವನ್ನು ಗಟ್ಟಿಕೊಳಿಸಿರುವುದು ಭಜರಂಗದಳ. ಹನುಮನ ಭಕ್ತರು ಒಬ್ಬೊಬ್ಬರು ಸಿಡಿದೆದ್ದು ನಿಂತರೆ ಕಾಂಗ್ರೆಸ್ ಪಕ್ಷ ದೇಶದಿಂದಲೇ ಬೇರು ಸಮೇತ ಕಿತ್ತು ಹೋಗಲಿದ್ದಾರೆ ಎಂದು ಅವರು ಗುಡುಗಿದರು.

ಉತ್ತರದ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ದೇವಸ್ಥಾನ ನಿರ್ಮಾಣ ಆಗುತ್ತಿದೆ. ದಕ್ಷಿಣದ ಅಂಜನಾದ್ರಿಯಲ್ಲಿ ಆಂಜನೇಯ ಸ್ವಾಮಿ ಅಭಿವೃದ್ಧಿ ಆಗುತ್ತಿದೆ ಎಂದು ಹಿಂದುತ್ವದ ಕುರಿತು ಅವರು ಹೇಳಿದರು.

CM Basavaraj Bommai Warning To Against Congress Of Bajrang Dal Ban Manifesto

ಇದು ಪಿಎಫ್‌ಐ ಪ್ರಚೋದಿತ ಪ್ರಣಾಳಿಕೆ: ಅಸ್ಸಾಂ ಸಿಎಂ ಬಿಸ್ವಾ

ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯಿಸಿದ ಅಸ್ಸಾಂ ಸಿಎಂ ಹಿಮಂತ್ ಬಿಸ್ವ ಶರ್ಮಾ ಅವರು, ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಮುಸ್ಲಿಮರ ಓಲೈಕೆಗಾಗಿ ಬಜರಂಗದಳ ನಿಷೇಧ ಕುರಿತು ಪ್ರಸ್ತಾಪಿಸಿದೆ. ಇದು ಪಿಎಫ್‌ಐ ಪ್ರಚೋದಿತ ಪ್ರಣಾಳಿಕೆ ಎಂದು ಅವರು ವಾಗ್ದಾಳಿ ನಡೆಸಿದರು. ನಿಷೇಧಗೊಂಡ ಪಿಎಫ್‌ಐ ಮನಸ್ಥಿತಿಯವರು, ಮುಸ್ಲಿಂ ಮೂಲಭೂತವಾದಿ ಮನಸ್ಥಿತಿಯವರು ಕಾಂಗ್ರೆಸ್ ಪ್ರಣಾಳಿಕೆ ತಯಾರಿಸಿದ್ದಾರೆ ಎಂದರು.

ಮತೀಯ ಸಂಘಟನೆ ವಿರುದ್ಧ ಕ್ರಮ ಎಂದ ಪಿ.ಚಿದಂಬರಂ

ಕಾಂಗ್ರೆಸ್ ಮಂಗಳವಾರ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಭಜರಂಗದಳ ಸಂಘಟನೆಯನ್ನು ನಿಷೇಧ ಮಾಡುತ್ತೇವೆ ಎಂದು ಹೇಳಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತೀಯ ಸಂಘಟನೆಗಳ ವಿರುದ್ಧ ಕಾನೂನು ಕ್ರಮ ಜರುಗಿಸಿವುದಾಗಿ ಹೇಳಿದ್ದೇವೆ. ನಿಷೇಧಿಸುತ್ತೇ ಎಂದು ಹೇಳಿಲ್ಲ ಎಂದು ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+