Get Updates
Get notified of breaking news, exclusive insights, and must-see stories!

ಸಮಗ್ರ ದೇವಾಲಯ ನಿರ್ವಹಣಾ ವ್ಯವಸ್ಥೆಗೆ ಸಿಎಂ ಬೊಮ್ಮಾಯಿ ಚಾಲನೆ; ಏನಿದು ಯೋಜನೆ?

ಬೆಂಗಳೂರು, ಫೆಬ್ರವರಿ 23: ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ಸಮಗ್ರ ದೇವಾಲಯ ನಿರ್ವಹಣಾ ವ್ಯವಸ್ಥೆ (Integrated Temple Management System-ITMS) ಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು (ಬುಧವಾರ) ಲೋಕಾರ್ಪಣೆ ಮಾಡಲಿದ್ದಾರೆ.

ಐಟಿಎಂಎಸ್ ಯೋಜನೆಯಿಂದ ಒಂದೇ ವೆಬ್‌ಸೈಟ್‌ನಲ್ಲಿ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಾಲಯಗಳ ಸಮಗ್ರ ಮಾಹಿತಿಗಳು ಜನರ ಬೆರಳ ತುದಿಯಲ್ಲೇ ಲಭ್ಯವಿರಲಿವೆ. ಅಲ್ಲದೇ ದೇವಾಲಯಗಳಲ್ಲಿ ಲಭ್ಯವಿರುವ ಸೇವೆಗಳನ್ನು ಆನ್‌ಲೈನ್ ಮೂಲಕ ಬುಕ್ಕಿಂಗ್ ಮಾಡುವ ವ್ಯವಸ್ಥೆ ಇರಲಿದೆ.

ದೇವಾಲಯಗಳಲ್ಲಿ ನಡೆಯುವ ಉತ್ಸವ, ಜಾತ್ರೆಗಳು, ಹಬ್ಬ ಹರಿದಿನಗಳ ವಿವರಗಳನ್ನು ಸಾರ್ವಜನಿಕರಿಗೆ/ಭಕ್ತಾದಿಗಳಿಗೆ ಪಡೆಯಲು ಅನುಕೂಲವಾಗುವಂತೆ ಐಟಿಎಂಎಸ್ ತಂತ್ರಾಂಶದಲ್ಲಿ ಮಾಹಿತಿಗಳನ್ನು ಅಪ್‌ಲೋಡ್ ಮಾಡುವ ವ್ಯವಸ್ಥೆಯಿದೆ.

CM Basavaraj Bommai Will Be Lauched Integrated Temple Management System on Today

ದೇವಾಲಯಗಳ ಆಸ್ತಿಗಳ ವಿವರ ಮತ್ತು ಅವುಗಳ ವಹಿವಾಟಿನ ಮಾಹಿತಿಗಳೂ ಇರಲಿದ್ದು, ಜಗತ್ತಿನ ಯಾವುದೇ ಭಾಗದಿಂದ ಆನ್‌ಲೈನ್ ಮೂಲಕ ಕಾಣಿಕೆಯನ್ನು ಸಲ್ಲಿಸಬಹುದಾಗಿದೆ. ಸರ್ಕಾರದ ಭೂ ದಾಖಲೆಗಳ ದತ್ತಾಂಶದೊಂದಿಗೆ (Bhoomi etc) ಸಂಯೋಜನೆ ಮಾಡಬಹುದಾದ ತಾಂತ್ರಿಕತೆಯನ್ನು ಅಳವಡಿಸಲಾಗಿದೆ. ವಿವಿಧ ರೀತಿಯ MIS ವರದಿಗಳನ್ನು ಪಡೆಯಲು ಅವಕಾಶವಿರುತ್ತದೆ.

ಪ್ರಥಮ ಹಂತದಲ್ಲಿ ಪ್ರಮುಖ 25 ದೇವಾಲಯಗಳಲ್ಲಿ ಯೋಜನೆ
ಇದೇ ವೇಳೆ ದೈವ ಸಂಕಲ್ಪ ಯೋಜನೆಗೂ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಪ್ರಸ್ತುತ ರಾಜ್ಯದಲ್ಲಿರುವ 205 ಎ ದರ್ಜೆಯ ದೇವಾಲಯಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವುದು ದೈವ ಸಂಕಲ್ಪ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಈ ಯೋಜನೆಯ ಪ್ರಥಮ ಹಂತದಲ್ಲಿ ರಾಜ್ಯದ ಪ್ರಮುಖ 25 ದೇವಾಲಯಗಳನ್ನು 1,140 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗುವುದು.

CM Basavaraj Bommai Will Be Lauched Integrated Temple Management System on Today

ಲಕ್ಷಾಂತರ ಭಕ್ತರು ಆಗಮಿಸುವ ಕುಕ್ಕೆ ಸುಬ್ರಹ್ಮಣ್ಯ, ಮಲೆ ಮಹದೇಶ್ವರ ಸ್ವಾಮಿ ಬೆಟ್ಟ, ಚಾಮುಂಡಿ ದೇವಸ್ಥಾನ, ಕೊಲ್ಲೂರು ಮೂಕಾಂಬಿಕಾ, ಯಡಿಯೂರು ಸಿದ್ಧಲಿಂಗೇಶ್ವರ ದೇವಸ್ಥಾನ, ಸವದತ್ತಿ ಯಲ್ಲಮ್ಮ ಸೇರಿದಂತೆ ಪ್ರಮುಖ ದೇವಸ್ಥಾನಗಳು ಈ ಯೋಜನೆಯ ಅಡಿಯಲ್ಲಿ ಸೇರಿವೆ.

ಭಕ್ತಾದಿಗಳಿಗೆ/ಪ್ರವಾಸಿಗರಿಗೆ ಮೂಲ ಸೌಕರ್ಯ
ಭಕ್ತಾದಿಗಳಿಗೆ ವಸತಿ ಸೌಲಭ್ಯ, ಉತ್ತಮ ರಸ್ತೆ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಪಾರಂಪರಿಕ ಶಿಲಾಮಯ ಕಟ್ಟಡಗಳ ನಿರ್ಮಾಣ, ಮಲ್ಟಿಲೆವೆಲ್ ಪಾರ್ಕಿಂಗ್ ವ್ಯವಸ್ಥೆ, ಸ್ನಾನ ಘಟ್ಟ ಹಾಗೂ ಸುಸಜ್ಜಿತ ಅನ್ನದಾಸೋಹ ಭವನ, ವಾಣಿಜ್ಯ ಸಂಕೀರ್ಣ ಕಟ್ಟಡಗಳು, ಶೌಚಾಲಯಗಳು, ಒಳಚರಂಡಿ ಹಾಗೂ ಘನತ್ಯಾಜ್ಯ ನಿರ್ವಹಣಾ ಘಟಕ, ಹಾಗೂ ಇನ್ನಿತರ ವ್ಯವಸ್ಥೆಗಳನ್ನು ಅಭಿವೃದ್ಧಿಗೊಳಿಸಲಾಗುವುದು. ದೇಶದ ಧಾರ್ಮಿಕ ಕ್ಷೇತ್ರಗಳನ್ನು ಸಮಗ್ರ ವಾಗಿ ಅಭಿವೃದ್ಧಿಗೊಳಿಸುವ ಪ್ರಧಾನಿ ನರೇಂದ್ರ ಮೋದಿಯವರ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆಯು ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ.

CM Basavaraj Bommai Will Be Lauched Integrated Temple Management System on Today

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಜರಾಯಿ, ಹಜ್ ಮತ್ತು ವಕ್ಪ್ ಸಚಿವೆ ಶಶಿಕಲಾ ಜೊಲ್ಲೆ, ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಹಾಗೂ ಆಯುಕ್ತರಾದ ರೋಹಿಣಿ ಸಿಂಧೂರಿ ಭಾಗವಹಿಸಲಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+