Get Updates
Get notified of breaking news, exclusive insights, and must-see stories!

Breaking: ದಾವೋಸ್ ಪ್ರವಾಸ ಮುಗಿಸಿ ಬೆಂಗಳೂರಿಗೆ ಬಂದ ಸಿಎಂ ಬೊಮ್ಮಾಯಿ

ಬೆಂಗಳೂರು, ಮೇ 27: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರು ದಿನಗಳ ದಾವೋಸ್ ಪ್ರವಾಸ ಮುಗಿಸಿ ಶುಕ್ರವಾರ ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಸವರಾಜ ಬೊಮ್ಮಾಯಿ ಅವರನ್ನು ಇಂಧನ ಸಚಿವ ವಿ. ಸುನೀಲ್ ಕುಮಾರ್ ಹಾಗೂ ಗುಪ್ತಚರ ಇಲಾಖೆ ಎಡಿಜಿಪಿ ದಯಾನಂದ ಅವರು ಸ್ವಾಗತ ಮಾಡಿದರು.

ಮೇ 22ರಂದು ಸಿಎಂ ಬೊಮ್ಮಾಯಿ ಸ್ವಿಟ್ಜರ್‌ಲೆಂಡ್‌ಗೆ ಪ್ರಯಾಣ ಬೆಳೆಸಿದ್ದರು. ಕಳೆದ ಐದು ದಿನಗಳ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಹೂಡಿಕೆದಾರರನ್ನು ಸೆಳೆದಿದ್ದರು. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿಬಿಟಿ ಸಚಿವ ಡಾ. ಸಿಎನ್. ಅಶ್ವತ್ಥ ನಾರಾಯಣ ಹಾಗೂ ಅಧಿಕಾರಿಗಳು ಮುಖ್ಯಮಂತ್ರಿ ಜೊತೆಗಿದ್ದರು.

CM Bommai arrives in Bangalore after completing the Davos tour

Recommended Video

      IPL ನಲ್ಲಿ ಯಶಸ್ವಿ ನಾಯಕನಾಗಿದ್ದಕ್ಕೆ ಹಾರ್ದಿಕ್ ಪಾಂಡ್ಯಾಗೆ ಸಿಕ್ಕೇಬಿಡ್ತು ಟೀಮ್ ಇಂಡಿಯಾ ನಾಯಕತ್ವ | OneIndia

      ದಾವೋಸ್ ಆರ್ಥಿಕ ಶೃಂಗಸಭೆಯ ಫಲಶೃತಿ ಹಾಗೂ ರಾಜ್ಯಕ್ಕೆ ನಿಶ್ಚಯವಾದ ಬಂಡವಾಳದ ಹರಿವು ಕುರಿತು ಸಿಎಂ ಬೊಮ್ಮಾಯಿ ಮಧ್ಯಾಹ್ನ 12.30ಕ್ಕೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+