ಕೋವಿಡ್: ಈ ಐದು ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಸಿಎಂ ಬೊಮ್ಮಾಯಿ ಸೂಚನೆ!
ಬೆಂಗಳೂರು, ಸೆ. 04: ನೆರೆಯ ಕೇರಳ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಕೋವಿಡ್ 19 ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಿ, ಕಟ್ಟೆಚ್ಚರ ವಹಿಸುವಂತೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.
ಈ ಐದು ಜಿಲ್ಲೆಗಳ ಪಾಸಿಟಿವಿಟಿ ದರ, ಮರಣ ಪ್ರಮಾಣ, ಆಸ್ಪತ್ರೆ ದಾಖಲಾತಿ ವಿವರ, ಲಸಿಕೆ ಕಾರ್ಯಕ್ರಮದ ಪ್ರಗತಿಯ ಮಾಹಿತಿಯನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಡೆದುಕೊಂಡರು. ನಂತರ ಮಾತನಾಡಿದ ಅವರು, "ಒಂದು ತಿಂಗಳಿಂದ ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿ ಕೊರೊನಾ ವೈರಸ್ ಸೋಂಕು ಹರಡುವುದು ಕಡಿಮೆಯಾಗಿದೆ. ಜೊತೆಗೆ ನಾವು ಲಸಿಕೆ ಅಭಿಯಾನಕ್ಕೂ ಒತ್ತು ಕೊಟ್ಟಿದ್ದೇವೆ. ಲಸಿಕೆ ಹಾಕುವುದನ್ನು ಈಗಿರುವುದಕ್ಕಿಂತ ಹೆಚ್ಚು ಮಾಡಲು ಸೂಚಿಸಿದ್ದೇನೆ. ಈ ಸಭೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಕುರಿತು ಚರ್ಚೆ ಮಾಡಿಲ್ಲ. ನಾಳೆ ಆ ಬಗ್ಗೆ ಚರ್ಚೆ ಮಾಡುತ್ತೇವೆ" ಎಂದಿದ್ದಾರೆ.

ಪರೀಕ್ಷೆ ಪ್ರಮಾಣ ಹೆಚ್ಚಿಸುವ ಮೂಲಕ ತಮ್ಮ ಜಿಲ್ಲೆಯ ಪರಿಸ್ಥಿತಿ ಕುರಿತು ತೀವ್ರ ನಿಗಾ ವಹಿಸುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಸಭೆಯಲ್ಲಿ ನಿರ್ದೇಶನ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗ ಮತ್ತು ನಗರ ಪ್ರದೇಶದಲ್ಲಿ ಪರೀಕ್ಷೆ ಪ್ರಮಾಣ ಹಾಗೂ ಲಸಿಕೆಯ ಪ್ರಮಾಣ ಹೆಚ್ಚಿಸಲು ಸೂಚಿಸಿದ್ದಾರೆ.

ಈ ಎಲ್ಲ ಜಿಲ್ಲೆಗಳಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸಬೇಕು. ಶೇ. 35 ರಷ್ಟು ಲಸಿಕೆಯ ಪ್ರಮಾಣ ಹೆಚ್ಚಿಸಬೇಕು ಎಂದು ಸೂಚಿಸಿದ್ದಾರೆ. ಗಡಿಯಿಂದ 20 ಕಿ.ಮೀ. ವ್ಯಾಪ್ತಿಯ ಗ್ರಾಮಗಳಲ್ಲಿ ಕಟ್ಟುನಿಟ್ಟಾಗಿ ಶೇ. 100 ರಷ್ಟು ಲಸಿಕೆ ಹಾಕಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಸಚಿವರಾದ ಆರ್. ಅಶೋಕ್, ಆರಗ ಜ್ಞಾನೇಂದ್ರ, ಕೋಟ ಶ್ರೀನಿವಾಸ ಪೂಜಾರಿ, ವಿ. ಸುನಿಲ್ ಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications