ದಿವ್ಯಾಂಗರಿಗೆ ಅನುಕಂಪವಲ್ಲ; ಅವಕಾಶ ನೀಡಬೇಕು: ಸಿಎಂ ಬೊಮ್ಮಾಯಿ
ಬೆಂಗಳೂರು, ಆ. 31: ದಿವ್ಯಾಂಗರಿಗೆ ಅನುಕಂಪವಲ್ಲ; ಅವಕಾಶ ನೀಡಬೇಕು. ಮುಂದಿನ ದಿನಗಳಲ್ಲಿ ದಿವ್ಯಾಂಗರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸೆನ್ಸ್ ಎಸೆನ್ಸ್ ಸಂಸ್ಥೆಯು ಪ್ರಕಟಿಸಿದ ಮ್ಯಾಜಿಕ್ ಡಾಟ್ಸ್ ಎಂಬ ಬ್ರೈಲ್ ಪತ್ರಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದ್ದಾರೆ.
"ಮುಖ್ಯಮಂತ್ರಿಯಾಗಿ ಮೊದಲ ಸಂಪುಟ ಸಭೆಯಲ್ಲಿ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ಹಾಗೂ ಸಾಮಾಜಿಕ ಭದ್ರತಾ ಯೋಜನೆಗಳಡಿ ಮಾಸಾಶನ ಹೆಚ್ಚಿಸಲು ತೀರ್ಮಾನಿಸಿದೆ. ಮುಂದಿನ ದಿನಗಳಲ್ಲಿ ದಿವ್ಯಾಂಗರಿಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು" ಎಂದು ಇದೇ ವೇಳೆ ಸಿಎಂ ಬೊಮ್ಮಾಯಿ ತಿಳಿಸಿದರು.

ದಿವ್ಯಾಂಗರು ದೇವರ ಮಕ್ಕಳು
"ದಿವ್ಯಾಂಗರು ದೇವರ ಮಕ್ಕಳು. ನಮ್ಮ ಒಬ್ಬ ಸಂಪೂರ್ಣ ಸಶಕ್ತ ಮನುಷ್ಯನಿಗೆ ತನ್ನ ದೇಹದ ಅಂಗಾಂಗಳ ಮಹತ್ವದ ಇರುವುದಿಲ್ಲ. ದೇವರ ಮಕ್ಕಳು ಎದುರಾದಾಗ ಅವರೊಂದಿಗೆ ನಾವು ಹೇಗೆ ನಡೆದುಕೊಳ್ಳಬೇಕು ಎಂದು ಪರೀಕ್ಷೆ ಮಾಡುತ್ತಾನೆ.ಇವರ ಸೇವೆ ಮಾಡುವ ಮುಖಾಂತರ ಬದುಕಿನ ಬ್ಯಾಲೆನ್ಸ್ ಶೀಟ್ ಅನ್ನು ಸರಿ ಮಾಡಿಕೊಳ್ಳಿ ಎಂದು ಅವಕಾಶ ಕೊಡುತ್ತಾನೆ" ಎಂದರು.

ದಿವ್ಯಾಂಗರ ಬುದ್ಧಿಮತ್ತೆ ನಮ್ಮ ಊಹೆಗೂ ಮೀರಿದ್ದು
ಅಂಗಾಂಗದ ಕೊರತೆ ಬಿಟ್ಟರೆ, ಎಲ್ಲರನ್ನೂ ಮೀರಿಸುವ ಬುದ್ಧಿ ಶಕ್ತಿ ಅವರಿಗಿದೆ. ಸಾಮಾನ್ಯ ಮನುಷ್ಯರು ತಮ್ಮ ಮೆದುಳನ್ನು ಶೇ. 20ಕ್ಕಿಂತ ಹೆಚ್ಚು ಬಳಸುವುದಿಲ್ಲ. ದಿವ್ಯಾಂಗರ ಬುದ್ಧಿಮತ್ತೆ ನಮ್ಮ ಊಹೆಗೂ ಮೀರಿದ್ದು. ಅದಕ್ಕೆ ಅವರಿಗೆ ಸಂಗೀತ, ಕಲೆ ಹೀಗೆ ಹಲವು ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಪ್ರಧಾನಿ ಮೋದಿ ಗಮನಕ್ಕೆ ತರುತ್ತೇನೆ!
ಸೆನ್ಸ್ ಅಂಡ್ ಎಸೆನ್ಸ್ ಸಂಸ್ಥೆಯ ಸಂಸ್ಥಾಪಕರಾದ ಯಶ್ವಿ ಭಂಡಾರಿ ಹಾಗೂ ರುಷಾಲಿ ದೋಷಿ ಅವರು ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಕಾಲಹರಣ ಮಾಡದೆ, ಬ್ರೈಲ್ ಲಿಪಿಯಲ್ಲಿ ಸಮಾಜದ ಆಗುಹೋಗುಗಳನ್ನು ತಿಳಿಸುವ ಸಲುವಾಗಿ ಪತ್ರಿಕೆಯನ್ನು ಹೊರತರುವ ಮೂಲಕ ಮಾನವೀಯ ಕಳಕಳಿಯನ್ನು ತೋರಿರುವುದು ಸಂತಸ ತಂದಿದೆ. ಈ ಪತ್ರಿಕೆಯನ್ನು ಪ್ರಧಾನಿ ಮೋದಿ ಗಮನಕ್ಕೂ ತರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಟೋಕಿಯೋ ಪ್ಯಾರಾ ಒಲಿಂಪಿಕ್ಸ್
ಟೋಕಿಯೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ನಲ್ಲಿ ದೇಶದ ದಿವ್ಯಾಂಗ ಕ್ರೀಡಾಪಟುಗಳ ಸಾಧನೆ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಕಾರ್ಯಕ್ರಮದಲ್ಲಿ ದಿವ್ಯಾಂಗ ಪ್ರತಿಭೆ ಬಸವರಾಜ ಉಮ್ರಾಣಿ ಅವರು ಗಣಿತದಲ್ಲಿನ ತಮ್ಮ ಅಸಾಧಾರಣ ಪ್ರತಿಭೆಯನ್ನು ಪ್ರದರ್ಶಿಸಿ, ಪ್ರಶಂಸೆಗೆ ಪಾತ್ರರಾದರು. ಉಮ್ರಾಣಿ ಅವರನ್ನು ಸಿಎಂ ಬೊಮ್ಮಾಯಿ ಅಭಿನಂದಿಸಿದರು.
ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಗಣಿತದಲ್ಲಿ ತಮ್ಮ ಅಸಾಧಾರಣ ಪ್ರತಿಭೆ ಪ್ರದರ್ಶಿಸಿದ ಬಸವರಾಜ ಉಮರಾಣಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದಿಸಿದ್ದು ವಿಶೇಷವಾಗಿತ್ತು.
Recommended Video
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications