ಹುಬ್ಬಳ್ಳಿ ಕಿಮ್ಸ್ ರೀತಿ ಬೆಳಗಾವಿ ಬಿಮ್ಸ್ ಹಳ್ಳಿ ಜನರ ಸೇವೆ ಮಾಡಬೇಕು: ಸಿಎಂ ಬೊಮ್ಮಾಯಿ
ಬೆಳಗಾವಿ, ಡಿಸೆಂಬರ್ 23: ಹುಬ್ಬಳ್ಳಿ ಕಿಮ್ಸ್ ಮಾದರಿಯಲ್ಲಿ ಬೆಳಗಾವಿಯ ಬಿಮ್ಸ್ ಬೆಳೆಯಬೇಕು. ಇದೇ ದೂರದೃಷ್ಟಿಯಲ್ಲಿ ನಾವೆಲ್ಲರೂ ಕೆಲಸ ಮಾಡಬೇಕು. ಇದನ್ನು ಸಾಕಾರಗೊಳಿಸುವ ಜವಾಬ್ದಾರಿ ಆಸ್ಪತ್ರೆ ನಿರ್ದೇಶಕರ ಮೇಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 100 ಹಾಸಿಗೆಗಳ ತಾಯಿ - ಮಕ್ಕಳ ಆಸ್ಪತ್ರೆ ಹಾಗೂ 50 ಬೆಡ್ ಗಳ ಐಸಿಯು ಘಟಕ ನಿರ್ಮಾಣ ಕಾಮಗಾರಿಗೆ ಗುರುವಾರ ಸಂಜೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.
ಬೆಳಗಾವಿ ಜಿಲ್ಲೆ ಬೆಳೆಯುತ್ತಿರುವ ನಗರ. ಈ ಭಾಗದಲ್ಲಿ ಸರ್ಕಾರದ ಒಂದು ವೈದ್ಯಕೀಯ ಸಂಸ್ಥೆ ಹಾಗೂ ಕಾಲೇಜು ಇರಬೇಕೆನ್ನುವ ಬೇಡಿಕೆ ಬಹಳ ದಿನಗಳಿಂದಲೂ ಇದ್ದರೂ ಸಾದ್ಯವಾಗಿರಲಿಲ್ಲ. ಬೆಳಗಾವಿ ಜಿಲ್ಲೆ ವ್ಯಾಪ್ತಿಯಲ್ಲಿ ಒಂದು ಸರ್ಕಾರಿ ಮೆಡಿಕಲ್ ಕಾಲೇಜಿನ ಅಗತ್ಯ ಇತ್ತು. ಈ ಸಂಸ್ಥೆಯಲ್ಲಿ ನಿರ್ದೇಶಕರು ಮತ್ತು ಸಿಬ್ಬಂದಿ ನಡುವೆ ಹೊಂದಾಣಿಕೆ ಇರಲಿಲ್ಲ. ಇಂತಹ ಸಂದರ್ಭದಲ್ಲಿ ನೆರವಾದವರು ಕೆಎಲ್ ಇ ಸಂಸ್ಥೆಯವರು ಎಂದು ಬೊಮ್ಮಾಯಿ ಶ್ಲಾಘಿಸಿದರು.

ಪ್ರಾಮಾಣಿಕ ಕೆಲಸಕ್ಕೆ ಉದಾಹರಣೆ ನೀಡಿದ ಸಿಎಂ
ಒಬ್ಬರು ಐಎಎಸ್ ಅಧಿಕಾರಿ ಪ್ರಾಮಾಣಿಕವಾಗಿದ್ದರೆ ಏನೆಲ್ಲ ಸೇವೆ ಮಾಡಬಹುದು ಅನ್ನುವುದಕ್ಕೆ ಆದಿತ್ಯ ಆಮ್ಲಾ ಬಿಸ್ವಾಸ್ ಆಡಳಿತ ಉದಾಹರಣೆ. ಅದಕ್ಕಾಗಿ ಎಲ್ಲ ವಿಭಾಗಗಳನ್ನೂ ಒಳಗೊಂಡು ಇದು ಪ್ರಮುಖ ಆರೋಗ್ಯ ಕೇಂದ್ರ ಆಗಲಿದೆ. ಅವರಿಗೆ ಸಹಾನುಭೂತಿ ನೀಡಬೇಕು. ರೋಗಿಗಳು ದೇವರಿದ್ದಂತೆ. ಸೃಷ್ಟಿಯಲ್ಲಿ ಭಗವಂತನನ್ನು ಹೊರತುಪಡಿಸಿ ಮಾನವನ ನೋವನ್ನು ಕಡಿಮೆ ಮಾಡುವ ಗುಣ ಇರುವುದು ವೈದ್ಯರಿಗೆ ಮಾತ್ರ ಎಂದರು.

ಅಪೌಷ್ಠಿಕತೆ ದೇಶದ ದೊಡ್ಡ ಸಮಸ್ಯೆ
ಗ್ರಾಮೀಣ ಭಾಗದವರು ಹಣ ಇಲ್ಲದೇ ಆಸ್ಪತ್ರೆಗೆ ಹೋಗುವುದಿಲ್ಲ. ಮಹಿಳೆಯರಿಗೆ ಎದೆ ನೋವು ಕಾಣಿಸಿಕೊಂಡರೆ ಎರಡು ದಿನ ಅಮೃತಾಂಜನ ಹಚ್ಚಿಕೊಂಡು ಮಲಗಿಕೊಂಡು ಬಿಡುತ್ತಾರೆ. ಅವರಿಗೆ ಸೂಕ್ತ ಸಮಯದಲ್ಲಿ ಆರೋಗ್ಯ ಸೇವೆ ದೊರೆತರೆ ಅವರ ಆರೋಗ್ಯ ಸುಧಾರಿಸುತ್ತದೆ. ಹೊಲದಲ್ಲಿ ಕೂಲಿ ಮಾಡುವ ತಾಯಿ ತನ್ನ ಮಗುವಿಗೆ ಯಾವುದೇ ಪೌಷ್ಟಿಕ ಆಹಾರ ಕೊಡುವುದಿಲ್ಲ. ತಾಯಿ ಮಕ್ಕಳಿಗೆ ಪೌಷ್ಟಿಕ ಆಹಾರ ದೊರೆತರೆ ಬಹಳಷ್ಟು ರೋಗಗಳು ದೂರವಾಗುತ್ತದೆ. ಅಪೌಷ್ಟಿಕತೆ ದೇಶಕ್ಕೆ ದೊಡ್ಡ ಮಟ್ಟದ ಸಮಸ್ಯೆಗೆ ಕಾರಣಗಲಿದೆ. ಪೌಷ್ಟಿಕತೆಗೆ ನಮ್ಮ ಸರ್ಕಾರ ವಿಶೇಷ ಆಹಾರ ನೀಡಲಾಗುತ್ತಿದೆ. ಆರು ಜಿಲ್ಲೆಗಳಲ್ಲಿ ಅಪೌಷ್ಟಿಕತೆ ಇದೆ. ಅದು ರಾಜ್ಯದ ಸರಾಸರಿ ಬರುವವರೆಗೂ ಪೌಷ್ಟಿಕ ಆಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಐದು ಜಿಲ್ಲೆಗಳಲ್ಲಿ ಸಂಚಾರಿ ಆರೋಗ್ಯ ತಪಾಸಣೆ
ಆರೋಗ್ಯ ಇಲಾಖೆಯಿಂದ ಹಲವಾರು ಯೋಜನೆಯನ್ನು ಪ್ರಥಮ ಬಾರಿ ಮಾಡುತ್ತಿದ್ದೇವೆ. ಸಿಎಂ ಆರೋಗ್ಯ ತಪಾಸಣೆ ಯೋಜನೆಯಡಿ 5 ಜಿಲ್ಲೆಗಳಲ್ಲಿ ಮೊಬೈಲ್ ಆರೋಗ್ಯ ಚೆಕ್ ಅಪ್ ವಾಹನ ಮೂಲಕ ತಪಾಸಣೆ ಮಾಡಲಾಗುತ್ತದೆ. 60 ವರ್ಷ ಮೀರಿದ ಎಲ್ಲರಿಗೂ ಉಚಿತ ಕಣ್ಣಿನ ತಪಾಸಣೆ ಮಾಡಿ ಕನ್ನಡಕ ನೀಡಲಾಗುತ್ತದೆ. ಬಡವರಿಗೆ ಬೆಳಕನ್ನು ಕೊಡಬೇಕೆಂದು ಈ ಕಾರ್ಯಕ್ರಮ ರೂಪಿಸಲಾಗಿದೆ. ಜತೆಗೆ ಹುಟ್ಟು ಕಿವುಡರಿಗೆ ವಿಶೇಷ ಸಾಧನವನ್ನು ಇಂಪ್ಲಾಂಟ್ ಮಾಡುವ 500 ಕೋಟಿ ರೂ ಮೊತ್ತದ ಯೋಜನೆ ರೂಪಿಸಿದ್ದೇವೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ
ಸರ್ಕಾರ ಪ್ರತಿವರ್ಷ ಸಾವಿರಾರು ಕೋಟಿ ರೂಪಾಯಿಯನ್ನು ಮೆಡಿಕಲ್ ಕಾಲೇಜು ನಡೆಸಲು ಹೂಡಿಕೆ ಮಾಡುತ್ತದೆ. ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲಾಗುತ್ತಿದೆ. ಸರ್ಕಾರ ಒಬ್ಬ ವೈದ್ಯಕೀಯ ವಿದ್ಯಾರ್ಥಿಗೆ 5-10 ಹತ್ತು ಲಕ್ಷ ಖರ್ಚು ಮಾಡುತ್ತೇವೆ. ಆದರೆ ವೈದ್ಯಕೀಯ ಶಿಕ್ಷಣ ಮುಗಿದ ಮೇಲೆ ವೈದ್ಯರು ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಬೇಕು.
ಆದರೆ ಜನ ಸಾಮಾನ್ಯರು ಜ್ವರ ಬಂದರೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಹೋಗಬೇಕು ಅನ್ನುವಂತಹ ಪರಿಸ್ಥಿತಿ ಬಂದಿದೆ. ಅಮೆರಿಕಾ ಮಾದರಿ ವೈದ್ಯಕಿಯ ವ್ಯವಸ್ಥೆ ಇಲ್ಲೂ ಜಾರಿಗೆ ಬರುತ್ತಿದೆ. ನಮ್ಮ ದೇಶಕ್ಕೆ ಇದು ಒಳ್ಳೆಯ ಬೆಳವಣಿಗೆಯಲ್ಲ. ನಮ್ಮ ದೇಶದ 130 ಕೋಟಿ ಜನರಲ್ಲಿ ಬಡವರು, ಅನಕ್ಷರಸ್ಥರು ಇದ್ದಾರೆ. ವಿದ್ಯಾವಂತರು ಬಡವರ ಸೇವೆ ಮಾಡುವ ಮೂಲಕ ಒಳ್ಳೆಯ ಕೆಲಸ ಮಾಡಬೇಕು. ಆಗ ಇಡೀ ನಾಡು ಸುಧಾರಿಸುತ್ತದೆ. ಆರೋಗ್ಯ ಕರ್ನಾಟಕವನ್ನು ನೀವು ನಿಜ ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಸಚಿವರಾದ ಗೋವಿಂದ ಕಾರಜೋಳ, ಡಾ. ಸುಧಾಕರ್, ಶಾಸಕ ಅನಿಲ್ ಬೆನಕೆ ಹಾಗೂ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications