ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಬೆಂಗಳೂರು ಸೇರಿದಂತೆ ರಾಜ್ಯದ ಯಾವ ಜಿಲ್ಲೆಗಳಲ್ಲೂ ಲಾಕ್‌ಡೌನ್ ಇಲ್ಲ

|
Google Oneindia Kannada News

ಬೆಂಗಳೂರು, ಜುಲೈ 21: ಬೆಂಗಳೂರು ಸೇರಿದಂತೆ ರಾಜ್ಯದ ಯಾವ ಜಿಲ್ಲೆಗಳಲ್ಲೂ ಇನ್ನುಮುಂದೆ ಲಾಕ್‌ಡೌನ್ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

Recommended Video

ಕೊರೊನ ನಿಯಂತ್ರಣಕ್ಕೆ 5T ಸೂತ್ರ ಹೇಳಿದ ಯಡಿಯೂರಪ್ಪ | Oneindia Kannada

ರಾಜ್ಯದ ಯಾವ ಜಿಲ್ಲೆಗಳಲ್ಲೂ ಲಾಕ್‌ಡೌನ್ ಮಾಡುವುದಿಲ್ಲ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕೊರೊನಾ ಸೋಂಕಿನಿಂದ ದೂರವಿರುವುದು ಜನರಿಗೆ ಬಿಟ್ಟ ವಿಚಾರ ಎಂದು ಯಡಿಯೂರಪ್ಪ ಹೇಳಿದ್ದಾರೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಖಾಸಗಿ ವಲಯಗಳು ಕೈಜೋಡಿಸಿರುವುದರಿಂದ ತುಂಬಾ ಸಹಾಯವಾಗಿದೆ. ಇಬ್ಬರೂ ಒಟ್ಟಾಗಿ ಹೋರಾಟ ಮಾಡುತ್ತೇವೆ.

ಬಿಜೆಪಿಯಲ್ಲಿ ಏನಾಗ್ತಿದೆ; ಕರ್ನಾಟಕ ಟಾಸ್ಕ್ ಫೋರ್ಸ್ ಸಭೆಯ ಕ್ಲಿಯರ್ ಪಿಕ್ಚರ್!ಬಿಜೆಪಿಯಲ್ಲಿ ಏನಾಗ್ತಿದೆ; ಕರ್ನಾಟಕ ಟಾಸ್ಕ್ ಫೋರ್ಸ್ ಸಭೆಯ ಕ್ಲಿಯರ್ ಪಿಕ್ಚರ್!

ಬೆಂಗಳೂರಿನ ಎಂಟು ವಲಯಗಳಲ್ಲಿ ಸಚಿವರು ಮತ್ತು ಅಧಿಕಾರಿಗಳನ್ನು ನಿಯುಕ್ತಿ ಮಾಡಲಾಗಿದೆ. ಸ್ಥಳೀಯ ನಿರ್ವಹಣೆ ಬಲ ಪಡಿಸಲು 8 ಸಾವಿರಕ್ಕೂ ಹೆಚ್ಚು ಬೂತ್ ಮಟ್ಟದ ಕಾರ್ಯಪಡೆಯನ್ನು ನಿಯೋಜಿಸಲಾಗಿದೆ.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವೈರಸ್ ಹೆಚ್ಚಾಗಿರುವುದು ಗಮನಕ್ಕೆ ಬಂದಿದೆ.

CM Yediyurappa Facebook Live Highlights

ಅನಗತ್ಯ ಟೀಕೆ ಟಿಪ್ಪಣಿ ಬದಲು ರಚನಾತ್ಮಕ ಸಲಹೆ ನೀಡಬೇಕು ಎಂದು ಪ್ರತಿಪಕ್ಷ ಎಲ್ಲಾ ಮುಖಂಡರುಗಳಿಗೆ ಮನವಿ ಮಾಡಿದರು.

ದೇಶಾದ್ಯಂತ ಕೊವಿಡ್​-19 ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಕರ್ನಾಟಕದಲ್ಲಿ ಕೊರೋನಾ ತಹಬದಿಗೆ ತರುವಲ್ಲಿ ಆರಂಭದಲ್ಲಿ ನಾವು ಯಶಸ್ವಿಯಾಗಿದ್ದೆವು. ಆದರೀಗ, ಇತ್ತೀಚೆಗೆ ಬೆಂಗಳೂರಿನಲ್ಲಿ ಮಾತ್ರ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಮೊದಲಿನಷ್ಟು ಕೊರೊನಾ ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

ಕೊರೊನಾ ನಿಯಂತ್ರಣಕ್ಕೆ ಪರಿಹಾರವೊಂದೇ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮಾತ್ರ. ನಾವು ಕಟ್ಟುನಿಟ್ಟಾಗಿ ಈ ನಿಯಮ ಪಾಲಿಸಿದ್ರೆ ಮಾತ್ರ ಕೊರೋನಾ ನಿಯಂತ್ರಿಸಲು ಸಾಧ್ಯವಿಲ್ಲ ಎಂದರು.

ಬೆಂಗಳೂರಿನಲ್ಲಿ ದಕ್ಷಿಣ ಹಾಗೂ ಪೂರ್ವ ಡೇಂಜರ್ ವಲಯ!ಬೆಂಗಳೂರಿನಲ್ಲಿ ದಕ್ಷಿಣ ಹಾಗೂ ಪೂರ್ವ ಡೇಂಜರ್ ವಲಯ!

ಹೀಗೆ ಮುಂದುವರಿದ ಅವರು, ಶಾಸಕರು, ಸಚಿವರು, ವೈದ್ಯರು, ಪೊಲೀಸರು ಸೇರಿದಂತೆ ಆಶಾ ಕಾರ್ಯಕರ್ತರು ಹಗಲು ರಾತ್ರಿಯೆನ್ನದೇ ಕೊರೋನಾ ವಿರುದ್ಧ ಹೋರಾಡುತ್ತಿದ್ದಾರೆ.

ಇವರು ತಮ್ಮ ಪ್ರಾಣದ ಹಂಗು ತೊರೆದು ನಮಗಾಗಿ ಕೆಲಸ ಮಾಡಬೇಕಾದರೇ ನಾವು ಸರ್ಕಾರದ ಕೋವಿಡ್​​-19 ರೂಲ್ಸ್​​ ಮಾಡಲು ಸಾಧ್ಯವಿಲ್ಲ. ನಾವು ಕೊರೊನಾ ನಿಯಂತ್ರಣಕ್ಕೆ ಮಾಸ್ಕ್​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕೆಲಸ ಮಾಡಲೇಬೇಕು ಎಂದರು.

English summary
Karnataka Chief Minister BS Yediyurappa Ruled out extension of lockdown in Bengaluru and other parts of the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X