ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟಿಪ್ಪು ಜಯಂತಿ ರದ್ದು: ಹೊಸ ಸರ್ಕಾರದ ಕ್ರಮಕ್ಕೆ ಯಾರು, ಏನಂದ್ರು?

|
Google Oneindia Kannada News

Recommended Video

ಬಿ ಎಸ್ ಯಡಿಯೂರಪ್ಪ ಸರ್ಕಾರ ಟಿಪ್ಪು ಜಯಂತಿ ರದ್ದು ಮಾಡಿದ ಹಿನ್ನೆಲೆ ಯಾರು ಏನು ಹೇಳಿದರು? | Oneindia Kannada

ಬೆಂಗಳೂರು, ಜುಲೈ 30: ವಿವಾದಿತ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರದ ನಡೆಗೆ ಪರ-ವಿರೋಧದ ಚರ್ಚೆ ಆರಂಭವಾಗಿದೆ.

ಬಲಪಂಥೀಯರು ಈ ನಡೆಯನ್ನು ಸ್ವಾಗತಿಸಿದ್ದರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೆಲವು ನಾಯಕರು ಈ ನಡೆಯನ್ನು ಟೀಕಿಸಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆಯೇ ದ್ವೇಷ ರಾಜಕಾರಣಕ್ಕೆ ಮುನ್ನುಡಿ ಬರೆಯುತ್ತಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ತನ್ನ ಆಕ್ರೋಶ ಹೊರಹಾಕಿದೆ.

ಟಿಪ್ಪು ಜಯಂತಿ ರದ್ದು : ಸಿಎಂ ವಚನ ಭ್ರಷ್ಟ ಎಂದು ಕಾಂಗ್ರೆಸ್ ಟ್ವೀಟ್ಟಿಪ್ಪು ಜಯಂತಿ ರದ್ದು : ಸಿಎಂ ವಚನ ಭ್ರಷ್ಟ ಎಂದು ಕಾಂಗ್ರೆಸ್ ಟ್ವೀಟ್

ಪ್ರತಿ ವರ್ಷ ನವೆಂಬರ್ 10 ಅನ್ನು ಟಿಪ್ಪು ಜಯಂತಿಯನ್ನಾಗಿ ಆಚರಿಸಲು 2016 ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದಾಗ ನಿರ್ಧರಿಸಲಾಗಿತ್ತು. ನಂತರ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಾಗಲೂ ಈ ಜಯಂತಿಯನ್ನು ಆಚರಿಸಲಾಗುತ್ತಿತ್ತು.

ತೇಜಸ್ವಿ ಸೂರ್ಯ

ತೇಜಸ್ವಿ ಸೂರ್ಯ

ಸಾವಿರಾರು ಹಿಂದುಗಳ ಮಾರಣಹೋಮಕ್ಕೆ ಕಾರಣನಾದ ಟಿಪ್ಪು ಸುಲ್ತಾನ್ ನ ಜಯಂತಿಯನ್ನು ಆಚರಿಸುವುದನ್ನು ತನ್ನ ಕರ್ತವ್ಯ ಎಂದು ಈ ಹಿಂದಿನ ಸರ್ಕಾರಗಳು ಅಂದುಕೊಂಡಿದ್ದವು. ಆದರೆ ಅದು ತಪ್ಪು ಎಂದು ತೋರಿಸಿ, ಜಯಂತಿಯನ್ನು ರದ್ದು ಮಾಡುವ ಮೂಲಕ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಮಹತ್ವದ ನಿರ್ಣಯ ತೆಗೆದುಕೊಂಡಿದೆ- ತೇಜಸ್ವಿ ಸೂರ್ಯ, ಬಿಜೆಪಿ ಸಂಸದ

ದಿನೇಶ್ ಗುಂಡೂರಾವ್

ದಿನೇಶ್ ಗುಂಡೂರಾವ್

ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಟಿಪ್ಪು ಜಯಂತಿ ರದ್ದುಗೊಳಿಸಿದ್ದು ದ್ವೇಷ ರಾಜಕಾರಣದ ಪರಮಾವಧಿ. ಬಿಜೆಪಿಗೆ ಟಿಪ್ಪು ಕೇವಲ ಓಟ್ ಬ್ಯಾಂಕ್, ಪ್ರಚೋದನೆಯ ಸರಕು. ವಾಸ್ತವದಲ್ಲಿ ಟಿಪ್ಪು ಈ ನೆಲೆದ ಭಾವೈಕ್ಯ ಸಂಸ್ಕೃತಿಯ ಒಬ್ಬ ರಾಯಭಾರಿ'ಸರ್ವಜನಾಂಗದ ಶಾಂತಿಯ ತೋಟ'ವನ್ನು ಹಿಂಬಾಗಿಲ ಸಿಎಂ, ಉತ್ತರಪ್ರದೇಶ ಮಾದರಿ‌ ಮಾಡಲು ಹೊರಟಿದ್ದಾರೆ- ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ

ಟಿಪ್ಪು ಜಯಂತಿ ರದ್ದು: ಬಿಎಸ್ವೈಗೆ ಜಮೀರ್ ಬಹಿರಂಗ ಸವಾಲುಟಿಪ್ಪು ಜಯಂತಿ ರದ್ದು: ಬಿಎಸ್ವೈಗೆ ಜಮೀರ್ ಬಹಿರಂಗ ಸವಾಲು

ಶೋಭಾ ಕರಂದ್ಲಾಜೆ

ಶೋಭಾ ಕರಂದ್ಲಾಜೆ

ಸಾವಿರಾರು ಹಿಂದುಗಳ ಧ್ವನಿಯನ್ನು ಆಲಿಸಿ, ನಿರಂಕುಶ ಟಿಪ್ಪುವಿನ ಜಯಂತಿಯನ್ನು ರದ್ದು ಮಾಡಿದ್ದಕ್ಕೆ ಕರ್ನಾಟಕದ ಮುಖ್ಯಮಂತ್ರಿಗಳಿಗೆ ಧನ್ಯವಾದಗಳು. ಕೋಮುವಾದಿ ಕಾಂಗ್ರೆಸ್ ಈ ಕೊಲೆಗಾರನ ಜಯಂತಿ ಆಚರಿಸುವುದರಲ್ಲಿ ತಲ್ಲೀನವಾಗಿತ್ತು. ಆದರೆ ಬಿ.ಎಸ್.ಯಡಿಯೂರಪ್ಪನವರು ತಾವು ನೀಡಿದ ಮಾತನ್ನು ಉಳಿಸಿಕೊಂಡರು- ಶೋಭಾ ಕರಂದ್ಲಾಜೆ, ಬಿಜೆಪಿ ಸಂಸದೆ

ಕರ್ನಾಟಕ ಕಾಂಗ್ರೆಸ್

ಕರ್ನಾಟಕ ಕಾಂಗ್ರೆಸ್

ದ್ವೇಷ ರಾಜಕಾರಣ ಮಾಡುವುದಿಲ್ಲವೆಂದು ಹೇಳಿ 24 ಗಂಟೆಯೊಳಗೆ ದ್ವೇಷ ರಾಜಕಾರಣ ಮಾಡಿದ ವಚನ ಭ್ರಷ್ಟ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ಸರ್ಕಾರ ಕೇವಲ ಕೋಮುವಾದ ದೃಷ್ಟಿಕೋನದಿಂದಲೇ ಇತಿಹಾಸವನ್ನು ನೋಡುವ ಬಿಜೆಪಿ/ಆರೆಸ್ಸೆಸ್ ಇತಿಹಾಸವನ್ನು, ಟಿಪ್ಪುವಿನ ಕೊಡುಗೆಯನ್ನು ಓದಿ ತಿಳಿದುಕೊಳ್ಳಬೇಕಿದೆ. ಟಿಪ್ಪು ಜಯಂತಿ ರದ್ದತಿಯಿಂದ ಬಿಜೆಪಿಯ ದ್ವಿಮುಖ ನೀತಿ ಬಹಿರಂಗವಾಗಿದೆ. -ಕರ್ನಾಟಕ ಕಾಂಗ್ರೆಸ್

ಸಿಟಿ ರವಿ

ಸಿಟಿ ರವಿ

ಟಿಪ್ಪು ಜಯಂತಿಯನ್ನು ರದ್ದು ಮಾಡುವ ಕನ್ನಡಿಗರ ಬೇಡಿಕೆಯನ್ನು ಈಡೇರಿಸಿದ ಬಿ ಎಸ್ ಯಡಿಯೂರಪ್ಪ ಸರ್ಕಾರಕ್ಕೆ ಧನ್ಯವಾದಗಳು. ಸಾವಿರಾರು ಹಿಂದುಗಳನ್ನು ಕೊಂದ ಕ್ರೂರಿಯ ಜಯಂತಿ ಆಚರಿಸಿ, ಕೋಮು ಸೌಹಾರ್ದ ಕದಡಿ, ಆ ಮೂಲಕ ತನ್ನ ಮತ ಬ್ಯಾಂಕ್ ಗಟ್ಟಿಗೊಳಿಸಲು ಕಾಂಗ್ರೆಸ್ ಪ್ರಯತ್ನ ನಡೆಸಿತ್ತು- ಸಿಟಿ ರವಿ, ಬಿಜೆಪಿ ಶಾಸಕ

English summary
CM BS Yediyurappa cancels Tipu Jayanti: Leaders reactions,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X