ವಿಶೇಷ ಪ್ಯಾಕೇಜ್ ಘೋಷಣೆ; ಯಡಿಯೂರಪ್ಪ ಪತ್ರಿಕಾಗೋಷ್ಠಿ ವಿವರ
ಬೆಂಗಳೂರು, ಮೇ 19; ಕೋವಿಡ್ 2ನೇ ಅಲೆಯು ಹರಡುವಿಕೆ ತಡೆಯಲು ಕರ್ನಾಟಕದಲ್ಲಿ ಮೇ 10 ರಿಂದ 24ರ ತನಕ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಈ ಸಮಯದಲ್ಲಿ ಆರ್ಥಿಕ ನಷ್ಟ ಅನುಭವಿಸಿದ ಜನರಿಗಾಗಿ ಕರ್ನಾಟಕ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ.
Recommended Video
ಬುಧವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸುಮಾರು 1,250 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದರು. ಹೂವು ಬೆಳೆಗಾರರು, ಬೀದಿ ಬದಿ ವ್ಯಾಪಾರಿಗಳು, ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ವಿಶೇಷ ಪ್ಯಾಕೇಜ್ ಅಡಿ ಸಹಾಯಧನ ಸಿಗಲಿದೆ.
"ಲಾಕ್ಡೌನ್ ಮೇ 24ರ ತನಕ ಜಾರಿಯಲ್ಲಿದೆ. ಮೇ 23ರಂದು ಸಭೆ ನಡೆಸಿ ವಿಸ್ತರಣೆ ಮಾಡಬೇಕೆ?, ಬೇಡವೇ? ಎಂಬ ಬಗ್ಗೆ ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ" ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.
"ಸರ್ಕಾರ ಘೋಷಣೆ ಮಾಡಿದ ಸುಮಾರು 1,250 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ನಿಂದಾಗಿ ಸುಮಾರು 30 ಲಕ್ಷ ಫಲಾನುಭವಿಗಳಿಗೆ ಸಹಾಯಕವಾಗಲಿದೆ" ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
"ಕಳೆದ ಬಾರಿಯ ತಪ್ಪನ್ನು ಈ ಬಾರಿ ಮಾಡುವುದಿಲ್ಲ. ವಿಶೇಷ ಪ್ಯಾಕೇಜ್ ವ್ಯಾಪ್ಯಿಗೆ ಒಳಪಡುವ ಜನರ ಬ್ಯಾಂಕ್ ಖಾತೆಗೆ ನೇರವಾಗಿ ಪರಿಹಾರವನ್ನು ಜಮೆ ಮಾಡಲಾಗುತ್ತದೆ" ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಪ್ಯಾಕೇಜ್ ಘೋಷಣೆ ಮಾಡಿದ್ದೇವೆ
"ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿ ಇಲ್ಲದಿದ್ದರೂ ಪ್ಯಾಕೇಜ್ ಘೋಷಣೆ ಮಾಡಿದ್ದೇವೆ. ಫಲಾನುಭವಿಗಳಿಗೆ ಸಹಾಯಧನ ನೀಡಲು ಶಕ್ತಿ ಮೀರಿ ಪ್ರಯತ್ನ ನಡೆಸುತ್ತೇವೆ. ಎಲ್ಲಾ ಫಲಾನುಭವಿಗಳಿಗೆ ಸಹಾಯಧನ ಸಿಗಲಿದೆ" ಎಂದು ಯಡಿಯೂರಪ್ಪ ಹೇಳಿದರು.

ಹೂವು ಬೆಳೆಗಾರರು
ಹೂವು ಬೆಳೆಗಾರರಿಗೆ ಪ್ರತಿ ಹೆಕ್ಟೇರ್ಗೆ ಹೂವು ಹಾನಿಗೆ 10 ಸಾವಿರ ರೂ. ಮತ್ತು ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ನಷ್ಟ ಉಂಟಾಗಿದ್ದರೆ ಗರಿಷ್ಠ 1 ಹೆಕ್ಟೇರ್ಗೆ ಮಿತಿಗೊಳಿಸಿ ಪ್ರತಿ ಹೆಕ್ಟೇರ್ಗೆ 10,000 ರೂ.ನಂತೆ ಸಹಾಯ ಒದಗಿಸಲಾಗುತ್ತದೆ.

ಆಟೋ, ಟ್ಯಾಕ್ಸಿ ಚಾಲಕರು
ಆಟೋ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ (ಲೈಸೆನ್ಸ್ ಹೊಂದಿದ ಹಾಗೂ ನೋಂದಣಿ ಮಾಡಿಸಿದ) ರೂ. 3000 ಪ್ರತಿ ಚಾಲಕರಿಗೆ ಪರಿಹಾರ ನೀಡಲಾಗುತ್ತದೆ. ಇದರ ಅಡಿ ಒಟ್ಟು 2.10 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದ್ದು, 63 ಕೋಟಿ ವೆಚ್ಚವಾಗಲಿದೆ.

ಗ್ರಾಮ ಪಂಚಾಯಿತಿಗೆ ಅನುದಾನ
ಗ್ರಾಮಗಳಲ್ಲಿ ಕೋವಿಡ್ ನಿರ್ವಹಣೆಗಾಗಿ ಎಸ್. ಡಿ. ಆರ್. ಎಫ್. ಹಣವನ್ನು ಪ್ರತಿ ಗ್ರಾಮ ಪಂಚಾಯಿತಿಗಳಿಗೆ ರೂ. 50 ಸಾವಿರ ಮುಂಗಡವಾಗಿ ನೀಡಲಾಗುತ್ತದೆ. ಇದರಿಂದಾಗಿ 6 ಸಾವಿರ ಗ್ರಾಮ ಪಂಚಾಯಿತಿಗಳಿಗೆ ಸಹಕಾರಿಯಾಗಲಿದೆ.

ರಸ್ತೆ ಬದಿ ವ್ಯಾಪಾರಿಗಳು
ರಸ್ತೆ ಬದಿ ವ್ಯಾಪಾರಸ್ಥರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಆತ್ಮ ನಿರ್ಭರ್ ನಿಧಿಯಲ್ಲಿ ನೋಂದಣಿ ಹೊಂದಿದ ವ್ಯಾಪಾರಿಗಳಿಗೆ ತಲಾ 2 ಸಾವಿರ ರೂ. ನೀಡಲಾಗುತ್ತದೆ. ಇದರಿಂದಾಗಿ 2.20 ಲಕ್ಷ ಜನರಿಗೆ ಸಹಾಯಕವಾಗಲಿದ್ದು, ಒಟ್ಟು ಮೊತ್ತ 44 ಕೋಟಿ ಆಗಿದೆ.
-
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications