Get Updates
Get notified of breaking news, exclusive insights, and must-see stories!

Karnataka CM Change: ಲೋಕಸಭಾ ಚುನಾವಣೆ 2024 ಫಲಿತಾಂಶ: ಕೈ ಪಾಳಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಗುಸು ಗುಸು...

ಬೆಂಗಳೂರು ಜೂನ್ 3: ಲೋಕಸಭಾ ಚುನಾವಣೆ ಫಲಿತಾಂಶ ಹೊರಬೀಳಲು ಇನ್ನೇನು ಕೇವಲ ಒಂದೇ ಒಂದು ದಿನ ಬಾಕಿ ಇದೆ. ಮಂಗಳವಾರ (ಜೂನ್ 4) ರಂದು ಫಲಿತಾಂಶ ಹೊರಬೀಳಲಿದ್ದು ಪ್ರಬಲ ಪಕ್ಷಗಳ ಭವಿಷ್ಯ ನಿರ್ಧಾರವಾಗಲಿದೆ.

ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದೆ. ವಿಧಾನಸಭೆ ಚುನಾವಣೆ ಪೂರ್ವ ಕಾಂಗ್ರೆಸ್ ನೀಡಿದ ಭರವಸೆಗಳು ಜಾರಿಗೆ ಬಂದ ಬೆನ್ನಲ್ಲೇ ಈ ಬಾರಿ ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹಗಾಗಿ ಸೋಲು ಗೆಲುವಿನ ಲೆಕ್ಕಾಚಾರಗಳು ನಡೆಯುತ್ತಿವೆ.

CM change after Lok Sabha election 2024 result

ರಾಜ್ಯ ರಾಜಕಾರಣದಲ್ಲಿ ಈ ಬಾರಿ ಫಲಿತಾಂಶ ಹೇಗಿರಲಿದೆ ಎನ್ನುವ ಚರ್ಚೆಗಳು ಕಾಂಗ್ರೆಸ್ ಪಾಳಯದಲ್ಲಿ ನಡೆದಿವೆ. ಈ ಬಗ್ಗೆ ಭಾನುವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲೂ ಈ ವಿಚಾರವಾಗಿ ಮಾತುಕತೆಗಳು ನಡೆದಿವೆ. ಸಮೀಕ್ಷೆಗಳ ಬ್ಗೆ ಚರ್ಚೆ ಮಾಡಲಾಗಿದೆ.

ಕೆಲವರು ತಮ್ಮ ಕ್ಷೇತ್ರದಲ್ಲಿ ಪರಿಸ್ಥಿತಿ ಹೇಗಿತ್ತು ಎಂಬ ವಿಚಾರವನ್ನೂ ಪ್ರಸ್ತಾಪಿಸಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಸಮೀಕ್ಷೆಗಳ ಭವಿಷ್ಯ ನಿಜವಾಗಲು ಸಾಧ್ಯವಿಲ್ಲ ಬದಲಾಗಿ ಎರಡಂಕಿಯ ದಾಟುತ್ತೇವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ಗೆಲ್ಲುವ ನಿರೀಕ್ಷೆಯಲ್ಲಿ ಹೈಕಮಾಂಡ್

ರಾಜ್ಯದಲ್ಲಿ ಕಾಂಗ್ರೆಸ್ ಜಾರಿಗೆ ತಂದ ಗ್ಯಾರಂಟಿಗಳು ಪಕ್ಷವನ್ನು ಗೆಲ್ಲಿಸಲಿವೆ ಎಂಬ ನಿರೀಕ್ಷೆಯಲ್ಲಿ ಹೈಕಮಾಂಡ್ ದೆ. ಆದರೆ ಸಮೀಕ್ಷೆಗಳು ಬೇರೆಯದ್ದೇ ಭವಿಷ್ಯ ನುಡಿದಿರುವುದರಿಂದ ಕಾಂಗ್ರೆಸ್ ಪಾಳಯದಲ್ಲಿ ಆತಂಕ ಶುರುವಾಗಿದೆ. ಜೂನ್ 1ರಂದು ಬಿಡುಗಡೆಯಾದ ಚುನಾವಣೋತ್ತರ ಸಮೀಕ್ಷಾ ವರದಿ ಪ್ರಕಾರ ರಾಜ್ಯದಲ್ಲಿ ಈ ಬಾರಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಜೊತೆಗೆ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಪಡೆಯುವುದರೊಂದಿಗೆ ಭಾರೀ ಪೈಪೋಟಿ ನೀಡಲಿದೆ.

ಹೀಗಾದಲ್ಲಿ ಕಾಂಗ್ರೆಸ್ ಭಾರಿ ದೊಡ್ಡ ಅಘಾತ ಆಗೋದರಲ್ಲಿ ಅನುಮಾನವೇ ಇಲ್ಲ. ಒಂದು ವೇಳೆ ಕಾಂಗ್ರೆಸ್ ಎರಡಂಕಿಯಷ್ಟೂ ಸ್ಥಾನ ಹೆಚ್ಚಾಗಿ ಪಡೆಯದೇ ಇದ್ದಲ್ಲಿ ಸಿಎಂ ಬದಲಾವಣೆ ಮಾಡುವ ಮಾತುಗಳು ಕೈ ಪಾಳಯದ ಆಂತರಿಕ ವಲಯದಲ್ಲಿ ಕೇಳಿ ಬಂದಿವೆ ಎಂಬ ಮೂಲಗಳು ತಿಳಿಸಿವೆ. ಆದರೆ ಈ ವಿಚಾರ ಬಹಿರಂಗವಾಗಿ ಚರ್ಚೆಯಾಗಿಲ್ಲ.

CM change after Lok Sabha election 2024 result

ಸಿಎಂ ಬದಲಾವಣೆ

ಇನ್ನೂ ಚುನಾವಣೆ ಪ್ರಚಾರದಲ್ಲಿ ಒಂದು ವೇಳೆ ಹೆಚ್ಚಿನ ಸ್ಥಾನಗಳು ಬಾರದೇ ಇದ್ದರೆ ಸಿಎಂ ಬದಲಾವಣೆಯಾಗುತ್ತಾರೆಂದು ಅಭ್ಯರ್ಥಿಗಳೇ ಮತದಾರರ ಮುಂದೆ ಹೇಳಿಕೊಂಡಿರುವುದು. ಇದೀಗ ಇದಕ್ಕೆ ಸಾಥ್ ನೀಡುವಂತೆ ಸಮೀಕ್ಷೆಗಳ ವರದಿ ಬಹಿರಂಗವಾಗಿದೆ.

ಅಲ್ಲದೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಎರಡು ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಮೇಲಿನ ಆರೋಪ ಅವರ ಸೋಲಿಗೆ ದಾರಿಯಾಗಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಸಮೀಕ್ಷೆಗಳಲ್ಲಿ ಹಾಸನದಲ್ಿ ಜೆಡಿಎಸ್ ಪಕ್ಷ ಗೆಲ್ಲಲಿದೆ ಎನ್ನಲಾಗಿದೆ.

ಹೀಗಾಗಿ ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲುತ್ತಾ ಅಥವಾ ಹೆಚ್ಚು ಸ್ಥಾನಗಳೊಂದಿಗೆ ತೀವ್ರ ಪೈಪೋಟಿಯೊಂದಿಗೆ ಸೋಲುತ್ತಾ ಎನ್ನುವ ಕುತೂಹಲ ಮೂಡಿದೆ. ಒಟ್ಟಿನಲ್ಲಿ ಕಾಂಗ್ರೆಸ್ ಎಲ್ಲದಕ್ಕೂ ಸಿದ್ಧತೆ ಮಾಡಿಕೊಂಡಂತೆ ಕಾಣಿಸುತ್ತಿದೆ. ಆದರೆ ಂದು ವೇಳೆ ಎರಡಂಕಿ ಸ್ಥಾನವನ್ನೂ ಕಾಂಗ್ರೆಸ್ ಪಡೆಯದೇ ಹೋದಲ್ಲಿ ಸಿಎಂ ಬದಲಾಗಬಹುದು ಎನ್ನುವ ಮಾತುಗಳು ಮಾತ್ರ ದೃಢವಾಗಿರುವುದು ಸುಳ್ಳಲ್ಲ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+