ಜೂನ್ 18ರಂದು ಗಾರ್ಮೆಂಟ್ ನೌಕರರ ಸಮಸ್ಯೆ ಕುರಿತು ಸಭೆ
ಬೆಂಗಳೂರು, ಜೂನ್ 12: ಗಾರ್ಮೆಂಟ್ಸ್ ನೌಕರರು ಹಾಗೂ ಟೆಕ್ಸ್ಟೈಲ್ಸ್ ನೌಕರರಿಗೆ ಕನಿಷ್ಠ ವೇತನ ನೀಡುವ ಕುರಿತಂತೆ ಜೂನ್ 18ರಂದು ಎಚ್ಡಿ ಕುಮಾರಸ್ವಾಮಿ ಸಭೆ ನಿಗದಿ ಮಾಡಿದ್ದಾರೆ.
ಈ ಸಭೆಯಲ್ಲಿ ಗಾರ್ಮೆಂಟ್ ಹಾಗೂ ಟೆಕ್ಸ್ ಟೈಲ್ ಮಾಲೀಕರ ಸಂಘ ಹಾಗೂ ನೌಕರರ ಸಂಘದ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಗಾರ್ಮೆಂಟ್ಸ್ ಹಾಗೂ ಟೆಕ್ಸ್ ಟೈಲ್ ನೌಕರರ ಸಂಘದ ಪ್ರತಿನಿಧಿಗಳು ಇಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ತಮ್ಮ ಅಹವಾಲುಗಳನ್ನು ಹೇಳಿಕೊಂಡ ನಂತರ ಮುಖ್ಯಮಂತ್ರಿಗಳು ಸಭೆ ಕರೆಯಲು ನಿರ್ದೇಶನ ನೀಡಿದ್ದಾರೆ.
ಗಾರ್ಮೆಂಟ್ ಕ್ಷೇತ್ರದಲ್ಲಿ ಬೆಂಗಳೂರು ಇಡೀ ದೇಶದಲ್ಲಿ ಹೆಸರಾಗಿದೆ. ಇಲ್ಲಿ ತಯಾರಾಗುತ್ತಿರುವ ವಸ್ತ್ರಗಳು ಅತ್ಯುತ್ತಮ ಮಟ್ಟ ಹಾಗೂ ವಿನ್ಯಾಸಗಳಿಂದ ಕೂಡಿದೆ. ಜಗತ್ತಿನ ನಾನಾ ದೇಶಗಳಿಗೆ ಇಲ್ಲಿ ತಯಾರಿಸಲಾದ ಉಡುಪುಗಳು ರಫ್ತಾಗುತ್ತಿವೆ.

ಆದರೆ ಈ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿರುವವರ ಬದುಕಿನ ಗುಣಮಟ್ಟ ಸುಧಾರಿಸಿಲ್ಲ. ಇವರಿಗೆ ಕನಿಷ್ಠ ವೇತನ ಹಾಗೂ ಅಗತ್ಯ ಅನುಕೊಲಗಳನ್ನು ಒದಗಿಸದಿರುವುದೇ ಇದಕ್ಕೆ ಕಾರಣ ಎಂದು ಸಂಘದ ಮುಖ್ಯಸ್ಥರು ಕುಮಾರಸ್ವಾಮಿಯವರಿಗೆ ತಿಳಿಸಿದರು.
ಸಿಎಂ ಎರಡೂ ಕಡೆಯ ಅಭಿಪ್ರಾಯವನ್ನು ಆಲಿಸಿ ಸೂಕ್ತ ನಿರ್ಧಾರವನ್ನು ಕೈಗೊಳ್ಳುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕಾರ್ಮಿಕ ಸಚಿವ ವೆಂಕಟರಮಣಪ್ಪ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ಎನ್ ಲಕ್ಷ್ಮೀನಾರಾಯಣ್, ಕಾರ್ಮಿಕ ಇಲಾಖೆ ಕಾರ್ಯದರ್ಶಿ ಅಮಲನ್ ಆದಿತ್ಯ ಬಿಸ್ವಾಸ್, ಗಾರ್ಮೆಂಟ್ ಹಾಗೂ ಟೆಕ್ಸ್ ಟೈಲ್ ನೌಕರರ ಸಂಘದ ಅಧ್ಯಕ್ಷೆ ಪ್ರತಿಭಾ, ಸಂಘದ ಕಾನೂನು ಸಲಹೆಗಾರ ಜೈರಾಮ್ ಹಾಜರಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications