ಸಿಎಂ ಕಳೆದ ತಿಂಗಳೇ ಮೇಟಿ ಸಿಡಿ ನೋಡಿದ್ರು: ಶೆಟ್ಟರ್ ಆರೋಪ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಸಚಿವರು ತಿಂಗಳ ಹಿಂದೆಯೇ ಮಾಜಿ ಸಚಿವ ಮೇಟಿ ರಾಸಲೀಲೆ ಸಿಡಿ ನೋಡಿದ್ದರು ಎಂದು ವಿರೋಧ ಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನೆಡೆಸಿದರು.
ಕೊಪ್ಪಳ, ಡಿಸೆಂಬರ್ 16: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಸಚಿವ ಜಿ.ಪರಮೇಶ್ವರ ತಿಂಗಳ ಹಿಂದೆಯೇ ಮೇಟಿ ರಾಸಲೀಲೆ ಸಿಡಿ ನೋಡಿದ್ದರು ಎಂದು ವಿರೋಧ ಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಹತ್ವದ ಆರೋಪ ಮಾಡಿದ್ದಾರೆ.
ಕೊಪ್ಪಳದ ಗಂಗಾವತಿಯಲ್ಲಿ ಮಾತನಾಡಿದ ಶೆಟ್ಟರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾಗೂ ಗೃಹ ಸಚಿವ ಜಿ. ಪರಮೇಶ್ವರ್ ಅವರು ತಿಂಗಳ ಹಿಂದೆಯೇ ಮಾಜಿ ಸಚಿವ ಮೇಟಿಯವರ ಕಮ್ಮಕಾಂಡದ ಸಿಡಿ ನೋಡಿದ್ದರು ಆದರೆ ಎಲ್ಲರಿಗೂ ನೋಡಿಲ್ಲ ಎಂದು ಹೇಳುತ್ತಿದ್ದರು ಎಂದು ತಿಳಿಸಿದರು.
ಅಲ್ಲದೆ ಈ ಆರೋಪವನ್ನು ಬೇಗ ಮುಚ್ಚಿಹಾಕುವಂತೆ ಮೇಟಿಯವರನ್ನು ಸಂಪರ್ಕಿಸಿ ತಿಳಿಸಿದ್ದರು, ಅಲ್ಲದೆ ಆರೋಪಕ್ಕೆ ಸಂಬಂಧಿಸಿದವರ ಬಾಯಿ ಮುಚ್ಚಿಸಲು ಮೇಟಿಯವರಿಗೆ ಹೇಳಿದ್ದರು ಎಂದು ಶೆಟ್ಟರ್ ತಿಳಿಸಿದರು.[ಮೇಟಿ ವಿಡಿಯೋ ಬೆಂಗ್ಳೂರು ದಾಟಿ ದೆಹಲಿಗೆ: ರಾಹುಲ್ ಗೆ ರಾಸಲೀಲೆ ದೂರು]

ರಾಜ್ಯದ ರಾಜಕೀಯದಲ್ಲಿ ಇಂತಹ ಭ್ರಷ್ಟ ಸಂಪುಟವನ್ನು ನಾವು ಎಲ್ಲೂ ನೋಡಿಲ್ಲ. ಇವರ ಬೆನ್ನಿಗೆ ಸ್ವತಃ ಮುಖ್ಯಮಂತ್ರಿಗಳೇ ನೀಲುತ್ತಾರೆ. ಜಯಚಂದ್ರ, ಚಿಕ್ಕರಾಯಪ್ಪ ಅವರಿಗೆ ಸಾಥ್ ನೀಡಿದ್ದಾರೆ. ತನ್ವೀರ್ ಸೇಟ್ ಅವರ ಪ್ರಕರಣದಲ್ಲಿ ಮೃದುವಾದ ಸಿಎಂ, ಮಾಜಿ ಸಚಿವ ಮೇಟಿ ಆರೋಪವನ್ನು ಮುಚ್ಚಿಹಾಕಲು ಹವಣಿಸುತ್ತಿದ್ದಾರೆ. ಹೀಗಾಗಿ ಮೊದಲು ಮುಖ್ಯಮಂತ್ರಿಗಳು ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು.[ಮೇಟಿ ರಾಸಲೀಲೆ ಬಯಲಿಗೆಳೆದ ಮುಲಾಲಿಗೆ ಪೊಲೀಸರ 6 ಪ್ರಶ್ನೆ]
ರಾಜ್ಯದ ವ್ಯವಸ್ಥೆಯನ್ನು ಈ ಸರ್ಕಾರ ಮಣ್ಣು ಪಾಲು ಮಾಡಿದೆ. ಜನತೆ ನೀಡಿದ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಸಾರ್ವಜನಿಕರಿಗೆ ದುರಾಡಳಿತವನ್ನು ಪ್ರದರ್ಶಿಸಿದ್ದಾರೆ ಎಂದು ಜಗದೀಶ್ ಶೆಟ್ಟರ್ ಹರಿಹಾಯ್ದರು.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications