ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪರಿಷತ್ ಸದಸ್ಯರಾಗಿ ಸಿ.ಎಂ.ಇಬ್ರಾಹಿಂ ಅವಿರೋಧ ಆಯ್ಕೆ

|
Google Oneindia Kannada News

ಬೆಂಗಳೂರು, ಆಗಸ್ಟ್ 24 : ವಿಧಾನ ಪರಿಷತ್ ಸದಸ್ಯರಾಗಿ ಕಾಂಗ್ರೆಸ್‌ನ ಸಿ.ಎಂ.ಇಬ್ರಾಹಿಂ ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ. ಪರಿಷತ್ ಸದ್ಯರಾಗಿದ್ದ ವಿಮಲಾ ಗೌಡ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಆಗಸ್ಟ್ 31ರಂದು ಉಪ ಚುನಾವಣೆ ನಡೆಯಬೇಕಿತ್ತು.

ಗುರುವಾರ ವಿಧಾನಪರಿಷತ್ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿತ್ತು. ಯಾವ ಅಭ್ಯರ್ಥಿಯೂ ನಾಮಪತ್ರ ಸಲ್ಲಿಸಿದ ಹಿನ್ನಲೆಯಲ್ಲಿ ಸಿ.ಎಂ.ಇಬ್ರಾಹಿಂ ಗೆಲವು ಸಾಧಿಸಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ಘೋಷಣೆ ಮಾಡಿದರು.

ಸಚಿವ ಸ್ಥಾನದ ಆಕಾಂಕ್ಷಿ ನಾನಲ್ಲ : ಸಿ.ಎಂ.ಇಬ್ರಾಹಿಂಸಚಿವ ಸ್ಥಾನದ ಆಕಾಂಕ್ಷಿ ನಾನಲ್ಲ : ಸಿ.ಎಂ.ಇಬ್ರಾಹಿಂ

cm ibrahim

ವಿಮಲಾ ಗೌಡ ಅವರ ನಿಧನದಿಂದ ವಿಧಾನಪರಿಷತ್ತಿನಲ್ಲಿ ಒಂದು ಸ್ಥಾನ ಖಾಲಿ ಆಗಿತ್ತು. ವಿಧಾನಸಭೆಯಿಂದ ಅವರು ಪರಿಷತ್ತಿಗೆ ಆಯ್ಕೆಯಾಗಿದ್ದರು. ವಿಧಾನಸಭೆಯಲ್ಲಿ ಕಾಂಗ್ರೆಸ್ ಬಹುಮತ ಹೊಂದಿರುವುದರಿಂದ ಪಕ್ಷದ ಅಭ್ಯರ್ಥಿ ಸುಲಭವಾಗಿ ಗೆಲುವು ಸಾಧಿಸಬಹುದಾಗಿತ್ತು.

ಆದ್ದರಿಂದ, ಬೇರೆ ಯಾವ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿರಲಿಲ್ಲ. ಗುರುವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಯಾರೂ ನಾಮಪತ್ರ ಸಲ್ಲಿಸಿದ ಕಾರಣ ಸಿ.ಎಂ.ಇಬ್ರಾಹಿಂ ಅವಿರೋಧವಾಗಿ ಆಯ್ಕೆಯಾದರು.

ಸಿ.ಎಂ.ಇಬ್ರಾಹಿಂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತರು. ಯೋಜನಾ ಮಂಡಳಿ ಉಪಾಧ್ಯಕ್ಷರಾಗಿದ್ದ ಅವರು ಆ ಸ್ಥಾನಕ್ಕೆ ರಾಜೀನಾಮೆ ನೀಡಿ, ಪರಿಷತ್ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು.

ಸಿದ್ದರಾಮಯ್ಯ ಪರಮಾಪ್ತರು ಎಂಬ ಕಾರಣಕ್ಕಾಗಿಯೇ 2013ರ ಚುನಾವಣೆಯಲ್ಲಿ ಕ್ಷೇತ್ರದ ಹಾಲಿ ಶಾಸಕ ಸಂಗಮೇಶ್ ಅವರನ್ನು ಕಡೆಗಣಿಸಿ ಭದ್ರಾವತಿಯಲ್ಲಿ ಇಬ್ರಾಹಿಂ ಅವರಿಗೆ ಟಿಕೆಟ್ ನೀಡಲಾಗಿತ್ತು. ಆದರೆ, ಇಬ್ರಾಹಿಂ ಸೋಲು ಅನುಭವಿಸಿದ್ದರು.

English summary
Congress candidate C.M.Ibrahim unanimously elected as Legislative council member of Karnataka. There is one casual vacancy in council due to death of following sitting member Vimala Gowda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X