ಜೆಡಿಎಸ್ ವಿರುದ್ಧ ಕರ್ನಾಟಕ ಹೈಕೋರ್ಟ್ ಮೊರೆ ಹೋದ ಸಿ. ಎಂ. ಇಬ್ರಾಹಿಂ
ಬೆಂಗಳೂರು, ಮೇ 09: ಪ್ರಜ್ವಲ್ ರೇವಣ್ಣ ಪ್ರಕರಣ, ಎಚ್. ಡಿ. ರೇವಣ್ಣ ಬಂಧನದಿಂದ ತಲೆನೋವು ಎದುರಿಸುತ್ತಿರುವ ಜೆಡಿಎಸ್ ಪಕ್ಷ ಮತ್ತೊಂದು ಕಾನೂನು ಸಮರ ಎದುರಿಸಬೇಕಿದೆ. ಜೆಡಿಎಸ್ನ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಸಿ. ಎಂ. ಇಬ್ರಾಹಿಂ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಜೆಡಿಎಸ್ ಪಕ್ಷದ ಅಧ್ಯಕ್ಷ ಸ್ಥಾನದಿಂದ ತಮ್ಮನ್ನು ಉಚ್ಚಾಟನೆ ಮತ್ತು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಚ್. ಡಿ. ಕುಮಾರಸ್ವಾಮಿ ನೇಮಿಸಿರುವುದನ್ನು ಪ್ರಶ್ನಿಸಿ ಜೆಡಿಎಸ್ ಉಚ್ಚಾಟಿತ ಅಧ್ಯಕ್ಷ ಸಿ. ಎಂ. ಇಬ್ರಾಹಿಂ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೆ, ತಮ್ಮ ಅರ್ಜಿ ವಜಾಗೊಳಿಸಿದ್ದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಅವರು ಪ್ರಶ್ನಿಸಿದ್ದಾರೆ.

ಅಧೀನ ನ್ಯಾಯಾಲಯದ ಆದೇಶ ರದ್ದುಪಡಿಸುವಂತೆ ಕೋರಿ ಸಿ. ಎಂ. ಇಬ್ರಾಹಿಂ ಅವರು ಹೈಕೋರ್ಟ್ಗೆ ಆರ್ಎಫ್ಎ (ರೆಗ್ಯೂಲರ್ ಸೆಕೆಂಡ್ ಅಪೀಲ್) ಸಲ್ಲಿಸಿ ಜೆಡಿಎಸ್ ರಾಜ್ಯ ಕಾರ್ಯಕಾರಿ ಸಮಿತಿ ಮತ್ತು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವುದಕ್ಕೆ ಮಧ್ಯಂತರ ತಡೆ ನೀಡಬೇಕು ಎಂದು ಕೋರಿದ್ದಾರೆ.
ನ್ಯಾಯಮೂರ್ತಿ ಸಿ. ಎಂ. ಪೂಣಚ್ಚ ಅವರ ರಜಾಕಾಲೀನ ಏಕಸದಸ್ಯ ಪೀಠ, ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಿತು. ಅರ್ಜಿ ವಿಚಾರಣೆಗೆ ಬಂದಾಗ ಇಬ್ರಾಹಿಂ ಪರ ವಕೀಲರು, ಜೆಡಿಎಸ್ ರಾಜ್ಯ ಕಾರ್ಯಕಾರಿ ಸಮಿತಿ ಮತ್ತು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವುದಕ್ಕೆ ತಡೆ ನೀಡಿ ಮಧ್ಯಂತರ ಆದೇಶ ಮಾಡಬೇಕು ಎಂದು ಕೋರಿದರು.
ವಿಚಾರಣೆಗೆ ವೇಳೆ ಹಾಜರಿದ್ದ ಜೆಡಿಎಸ್ ಪಕ್ಷದ ಪರ ವಕೀಲರು, ಪಕ್ಷದಿಂದ ಅಗತ್ಯ ಸಲಹೆ/ ಸೂಚನೆಗಳನ್ನು ಪಡೆದು ನ್ಯಾಯಾಲಯಕ್ಕೆ ತಿಳಿಸಲು ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಕೋರಿದರು.
ಪ್ರಕರಣವೇನು?: 2023ರ ವಿಧಾನಸಭೆ ಚುನಾವಣೆಗೂ ಮುನ್ನ ಸಿ. ಎಂ. ಇಬ್ರಾಹಿಂ ಅವರನ್ನು 2022ರ ಆ.3ರಂದು ಜೆಡಿಎಸ್ ಅಧ್ಯಕ್ಷರಾಗಿ ರಾಜ್ಯ ಕಾರ್ಯಕಾರಿಣಿಯಲ್ಲಿ ಘೋಷಿಸಲಾಗಿತ್ತು. ಎಚ್. ಡಿ. ದೇವೇಗೌಡ ಮತ್ತು ಎಚ್. ಡಿ. ಕುಮಾರಸ್ವಾಮಿ ಅವರು 2024 ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರು.
ನಂತರ ಸಕಾರಣವಿಲ್ಲದೇ ತಮ್ಮನ್ನು 2023ರ ನ.16ರಂದು ಪಕ್ಷ ಹಾಗೂ ಅಧ್ಯಕ್ಷ ಹುದ್ದೆಯಿಂದ ಉಚ್ಚಾಟನೆ ಮಾಡಲಾಗಿದೆ. ಇದು ಜೆಡಿಎಸ್ ಸಂವಿಧಾನಕ್ಕೆ ವಿರುದ್ಧವಾಗಿದೆ. ಉಚ್ಚಾಟನೆಗೂ ಮುನ್ನ ತಮ್ಮ ಅಹವಾಲು ಆಲಿಸಿಲ್ಲ. ಆದ್ದರಿಂದ ಉಚ್ಚಾಟನೆ ಆದೇಶ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.
ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸದಂತೆ ನಿರ್ಬಂಧಿಸಬೇಕು ಎಂದು ಕೋರಿ ಸಿ. ಎಂ. ಇಬ್ರಾಹಿಂ ಸಿಟಿ ಸಿವಿಲ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿ ವಜಾಗೊಳಿಸಿ 2024ರ ಮಾ.23ರಂದು ನಗರದ 26ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ಇಬ್ರಾಹಿಂ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications