ಅತ್ತಿದ್ದು ಕಾಂಗ್ರೆಸ್ನಿಂದಲ್ಲ, ಅದು ಮಾಧ್ಯಮಗಳ ಸೃಷ್ಟಿಯಷ್ಟೆ: ಕುಮಾರಸ್ವಾಮಿ
ಬೆಂಗಳೂರು, ಜುಲೈ 17: ಕಾಂಗ್ರೆಸ್ ಪಕ್ಷ ಅಥವಾ ಕಾಂಗ್ರೆಸ್ ಮುಖಂಡರು ನನಗೆ ಕಿರುಕುಳು ಕೊಟ್ಟಿದ್ದಾರೆ ಎಂದು ಹೇಳಿ ಕಣ್ಣೀರು ಹಾಕಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ದೆಹಲಿಯ ಕನ್ನಡ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಭಾವತಃ ಭಾವನಾತ್ಮಕ ಜೀವಿಯಾದ ನಾನು ಕಷ್ಟಪಟ್ಟು ಒಳ್ಳೆಯ ಕಾರ್ಯಗಳನ್ನು ಮಾಡಿಯೂ ಸಹ ಜನರ ಮತ್ತು ಮಾಧ್ಯಮಗಳ ಪ್ರೋತ್ಸಾಹ ಸಿಗುತ್ತಿಲ್ಲವೆಂದು ಕಣ್ಣಿರು ಹಾಕಿದ್ದೇನೆಯೇ ಹೊರತು ಕಾಂಗ್ರೆಸ್ನಿಂದಲ್ಲ ಎಂದು ಅವರು ಹೇಳಿದರು.
ಪಕ್ಷದ ಸಭೆಯಲ್ಲಿ ನಾನು ಮಾತನಾಡಿದ್ದೇನೆ, ಪಕ್ಷದ ಕಾರ್ಯಕರ್ತರು ನನ್ನ ಕುಟುಂಬ ಸದಸ್ಯರಿದ್ದಂತೆ ಅವರ ಜೊತೆ ಭವನಾತ್ಮಕವಾಗಿ ಮಾತನಾಡಿದ್ದೇನೆ ಆದರೆ ಅದು ನನ್ನ ಬಲಹೀನತೆ ಅಲ್ಲ, ಮುಖ್ಯಮಂತ್ರಿಯಾಗಿ ಕಠಿಣವಾಗಿಯೇ ನಾನು ವರ್ತಿಸುತ್ತಿದ್ದೇನೆ ಎಂದು ಅವರು ಹೇಳಿದರು.

ಟಿವಿ ಮಾಧ್ಯಮಗಳ ಮೇಲೆ ಅಸಮಾಧಾನ ವ್ಯಕ್ತಪಡಿಸಿದ ಕುಮಾರಸ್ವಾಮಿ, ನಾನು ಮುಖ್ಯಮಂತ್ರಿ ಆದಾಗಿನಿಂದಲೂ ನೀವು ಸತ್ಯಕ್ಕೆ ಹತ್ತಿರದ ಸುದ್ದಿಯನ್ನೇ ಪ್ರಸಾರ ಮಾಡುತ್ತಿಲ್ಲ, ಎಲ್ಲ ನಿಮಗೆ ಬೇಕಾದ ಹಾಗೆ ಸುದ್ದಿಯನ್ನು ಗ್ರಹಿಸಿ ಅದೇ ಸತ್ಯವೆನ್ನುವಂತೆ ಜನಗಳ ಮುಂದೆ ಇಡುತ್ತಿದ್ದೀರಿ, ಇದರಿಂದ ಯಾರಿಗೂ ಉಪಯೋಗವಿಲ್ಲ ಎಂದು ನೇರವಾಗಿ ಆರೋಪ ಮಾಡಿದರು.
ನಾನು ಅಂದು ಮಾತನಾಡಿದ ಸನ್ನಿವೇಶದ ವಿಡಿಯೋ ರೆಕಾರ್ಡ್ ಅನ್ನು ಮತ್ತೊಮ್ಮೆ ನೋಡಿ ನಿರ್ಣಯಕ್ಕೆ ಬನ್ನಿ ಎಂದ ಕುಮಾರಸ್ವಾಮಿ, ನಾನು, ಕಾಂಗ್ರೆಸ್ ಪಕ್ಷ ನನಗೆ ತೊಂದರೆ ನೀಡಿದೆ ಎಂದಾಗಲಿ ಕಾಂಗ್ರೆಸ್ ಮುಖಂಡರು ಕಿರುಕುಳ ನೀಡಿದ್ದಾರೆ ಎಂದಾಗಲಿ ಹೇಳಿಲ್ಲ ಎಂದು ಪುನರ್ ಉಚ್ಚರಿಸಿದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications