ಹೇಳಿಕೆ ತಪ್ಪಾಗಿ ವರದಿ, ಚಾನೆಲ್ ವಿರುದ್ಧ ಕುಮಾರಸ್ವಾಮಿ ಬೇಸರ

ಬೆಂಗಳೂರು, ಫೆಬ್ರವರಿ 19: ಪುಲ್ವಾಮಾದಲ್ಲಿ ಭಯೋತ್ಪಾದಕ ಕೃತ್ಯದ ಬಗ್ಗೆ ನೀಡಿದ್ದ ಹೇಳಿಕೆಯನ್ನು ಖಾಸಗಿ ಸುದ್ದಿ ವಾಹಿನಿಯೊಂದು ತಿದ್ದಿದೆ ಎಂದು ಕುಮಾರಸ್ವಾಮಿ ಟ್ವಿಟ್ಟರ್‌ನಲ್ಲಿ ಆರೋಪ ಮಾಡಿದ್ದಾರೆ.

ಟೈಮ್ಸ್‌ ನೌ ವಾಹಿನಿಯು, ತಾವು ನೀಡಿದ್ದ ಹೇಳಿಕೆಯನ್ನು ತಿದ್ದಿದೆ ಅಲ್ಲದೆ, ತಪ್ಪಾಗಿ ಅರ್ಥ ಮಾಡಿಕೊಂಡು ಋಣಾತ್ಮಕ ಅರ್ಥ ಹೊಮ್ಮುವಂತೆ ವರದಿ ಮಾಡಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಉಗ್ರರ ದಾಳಿಯನ್ನು ಖಂಡಿಸಿದ್ದ ಸಿಎಂ ಕುಮಾರಸ್ವಾಮಿ, ಪಾಕಿಸ್ತಾನವನ್ನು ಉಗ್ರ ರಾಷ್ಟ್ರ ಎಂದು ಘೋಷಿಸುವ ಜೊತೆಗೆ, ದೇಶದ ಒಳಗಿನ ಉಗ್ರರನ್ನು ನಿಯಂತ್ರಿಸಬೇಕಿದೆ ಎಂದು ಹೇಳಿದ್ದರು. ಆದರೆ ಇದನ್ನು ತಪ್ಪಾಗಿ ವರದಿ ಮಾಡಿದ ಚಾನೆಲ್, ಭಯೋತ್ಪಾದನೆಗೆ ಭಾರತವೇ ಕಾರಣ ಎಂದು ಕುಮಾರಸ್ವಾಮಿ ಹೇಳಿದ್ದಾರೆ ಎಂದು ವರದಿ ಪ್ರಕಟಿಸಿತ್ತು.

CM Kumaraswamy condemn false report on a news channel about his statement

ಪಾಕಿಸ್ತಾನವನ್ನು ಉಗ್ರ ರಾಷ್ಟ್ರ ಎಂದು ಘೋಷಿಸುವುದು ಸರಿ ಅಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ ಎಂದು ಸಹ ಟೈಮ್ಸ್‌ ನೌ ವರದಿಯಲ್ಲಿ ಹೇಳಿತ್ತು. ವರದಿಯು ತಪ್ಪಿನಿಂದ ಕೂಡಿದೆ ಎಂದು ಸಿಎಂ ಟ್ವಿಟ್ಟರ್‌ನಲ್ಲಿ ಹೇಳಿದ್ದಾರೆ.

ಈ ತಪ್ಪು ವರದಿಯನ್ನು ಖಂಡಿಸುತ್ತೇನೆ, ನೀವು ತಪ್ಪು ವರದಿ ಮಾಡಿದ್ದು ಮಾತ್ರವಲ್ಲ ನಾನು ಹೇಳಿದ್ದನ್ನು ತಪ್ಪಾಗಿ ಅರ್ಥ ಮಾಡಿಕೊಂಡಿದ್ದೀರಿ, ಇಂತಹಾ ಗಂಭೀರ ವಿಷಯದಲ್ಲಿ ಹೀಗೆ ಮಾಡಿರುವುದು ಸರಿ ಅಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+