ಆಸರೆ ಕಳೆದುಕೊಂಡ ಮಹಿಳೆಗೆ ಸಿಎಂ ಎಚ್ಡಿಕೆ ತೋರಿದ ಮಾನವೀಯತೆ
ಬೆಂಗಳೂರು, ಅ1: ಪತಿ ಕಳೆದುಕೊಂಡು ನಿರಾಶ್ರಿತಳಾದ ಮಹಿಳೆಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೆರವು ನೀಡಿ ಸ್ಥೈರ್ಯ ತುಂಬಿದ ಮಾನವೀಯ ಘಟನೆಗೆ ಸೋಮವಾರ ಗೃಹ ಕಚೇರಿ ಕೃಷ್ಣಾ ಸಾಕ್ಷಿಯಾಯಿತು.
ಹಿರಿಯ ನಾಗರಿಕರು, ಗರ್ಭಿಣಿಯರಿಗೆ 5000 ಮಾಸಾಶನ: ಸಿಎಂ ಭರವಸೆ
ಕೊಲೆಯಾದ ಗಂಡನ ಆಸರೆ ಕಳೆದುಕೊಂಡು ಎರಡು ಮಕ್ಕಳ ಹೊಣೆ ನಿಭಾಯಿಸುವುದು ಹೇಗೆಂದು ದಿಕ್ಕು ತೋಚದಂತಾಗಿದ್ದ, ಚನ್ನಪಟ್ಟಣ ತಾಲ್ಲೂಕಿನ ಗೃಹಿಣಿ ಶಿಲ್ಪಶ್ರೀಗೆ ಮುಖ್ಯಮಂತ್ರಿ ನೆರವಿನ ಹಸ್ತ ಚಾಚಿದ್ದಾರೆ.
ರಾಹು, ಕೇತು, ಶನಿ... ಸಿದ್ದು ಹೇಳಿಕೆಗೆ ಮೌನವೇ ಉತ್ತರ ಎಂದ ಸಿಎಂ!
ಇಂದು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಶಿಲ್ಪಶ್ರೀ, ತಾವು ಗೃಹಿಣಿಯಾಗಿದ್ದು, ಮನೆನಡೆಸಲು, ಮಕ್ಕಳ ವಿದ್ಯಾಭ್ಯಾಸಕ್ಕೆ ಏನು ಮಾಡಬೇಕೆಂದೇ ತೋಚುತ್ತಿಲ್ಲವೆಂದು ಅಳಲು ತೋಡಿಕೊಂಡರು. ಶಿಲ್ಪಶ್ರೀಗೆ ಸಾಂತ್ವನ ಹೇಳಿದ ಮುಖ್ಯಮಂತ್ರಿಗಳು ಎರಡು ಲಕ್ಷ ರೂ. ಆರ್ಥಿಕ ನೆರವು ನೀಡಿದರು.
ಸಾಲಮನ್ನಾ ಯೋಜನೆಗಾಗಿ ಅಭಿವೃದ್ಧಿ ಬಲಿ ಕೊಡಲ್ಲ: ಎಚ್ಡಿಕೆ ಅಭಯ
ಅಲ್ಲದೆ, ಕೂಡಲೇ ರಾಮನಗರ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ, ಮಕ್ಕಳಿಗೆ ಸರ್ಕಾರದ ವಸತಿ ಶಾಲೆಯಲ್ಲಿ ಪ್ರವೇಶ ದೊರಕಿಸುವಂತೆ ಸೂಚಿಸಿದರು. ಕಾರು ಚಾಲಕರಾಗಿದ್ದ ಪತಿ ನಾಗರಾಜು ಅವರು ಆಗಸ್ಟ್ 27 ರಂದು ಶಿವಮೊಗ್ಗಕ್ಕೆ ಬಾಡಿಗೆಗೆಂದು ಹೋದವರು ನಾಪತ್ತೆಯಾಗಿದ್ದರು.
ಪರಿಶಿಷ್ಟರಿಗೆ ಮೀಸಲಿಟ್ಟ 29 ಸಾವಿರ ಕೋಟಿ ಖರ್ಚು ಮಾಡಿ: ಸಿಎಂ
ಪತಿ ಕಾಣೆಯಾಗಿರುವ ಬಗ್ಗೆ ಶಿಲ್ಪಶ್ರೀ ದೂರು ನೀಡಿದ್ದರು. ಸೆಪ್ಟೆಂಬರ್ 6 ರಂದು ಅವರು ಕೊಲೆಯಾಗಿರುವುದು ತಿಳಿದುಬಂದಿತ್ತು. ಇದೇ ಸಂದರ್ಭದಲ್ಲಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಬಾಲಕ ರೋಹಿತ್ಗೆ ಚಿಕಿತ್ಸೆಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂ. ಚೆಕ್ ಅನ್ನು ಮುಖ್ಯಮಂತ್ರಿಗಳು ಹಸ್ತಾಂತರಿಸಿದರು.
ಏಷ್ಯನ್ ಪವರ್ ಲಿಫ್ಟಿಂಗ್ ಫೆಡರೇಷನ್ ವತಿಯಿಂದ ದುಬೈನಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ನಡೆದ ಏಷ್ಯನ್ ಬೆಂಚ್ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ ಜ್ಯೂನಿಯರ್ 50 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಬೆಂಗಳೂರಿನ ನೀಮಾ ಕುಮಾರಿ ಅವರನ್ನು ಮುಖ್ಯಮಂತ್ರಿಗಳು ಇಂದು (ಅ 1) ಗೃಹ ಕಚೇರಿ ಕೃಷ್ಣಾದಲ್ಲಿ ಅಭಿನಂದಿಸಿದರು.