ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಡಗಿಗೆ ನೆರವು ಕೇಳಲು ಆಗಸ್ಟ್‌ 30ಕ್ಕೆ ದೆಹಲಿಗೆ ಹಾರಲಿದ್ದಾರೆ ಎಚ್‌ಡಿಕೆ

|
Google Oneindia Kannada News

ಬೆಂಗಳೂರು, ಆಗಸ್ಟ್ 28: ಪ್ರವಾಹ ಪೀಡಿತ ಕೊಡಗಿಗೆ ನೆರವು ಕೇಳಲೆಂದು ಸಿಎಂ ಕುಮಾರಸ್ವಾಮಿ ಅವರು ಆಗಸ್ಟ್‌ 30ರಂದು ದೆಹಲಿಗೆ ತೆರಳಿ ಗೃಹ ಸಚಿವರನ್ನು ಹಾಗೂ ಮೋದಿ ಅವರನ್ನು ಭೇಟಿ ಆಗಲಿದ್ದಾರೆ.

ಇಂದು ಮೈಸೂರಿನಲ್ಲಿ ನಡೆದ ದಸರಾ ಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಈಗಾಗಲೇ ಕೊಡಗು ಹಾನಿಯ ಬಗ್ಗೆ ಕೇಂದ್ರ ಗೃಹ ಸಚಿವರಿಗೆ ವರದಿ ಸಲ್ಲಿಸಿದ್ದೇವೆ, ಆಗಸ್ಟ್‌ 30ರಂದು ನಾನೇ ಖುದ್ದಾಗಿ ತೆರಳಿ ಕೇಂದ್ರಕ್ಕೆ ಮನವಿ ಸಲ್ಲಿಸಲಿದ್ದೇನೆ ಎಂದರು.

CM Kumaraswamy flying to Delhi on August 30 to ask help to Kodagu

ಕೇಂದ್ರದಿಂದ ಈ ವರೆಗೂ ನೆರವಿನ ಭರವಸೆ ಇರದಿರುವ ಕಾರಣದಿಂದ ಮುಖ್ಯಮಂತ್ರಿಗಳೇ ಖುದ್ದಾಗಿ ದೆಹಲಿಗೆ ತೆರಳಿ ಗೃಹ ಸಚಿವರನ್ನು ಭೇಟಿ ಮಾಡಲಿದ್ದಾರೆ. ಅಂದೇ ಮೋದಿ ಅವರನ್ನು ಭೇಟಿ ಆಗುವ ಸಾಧ್ಯತೆ ಇದೆ.

ಈ ಬಾರಿ ಸಾಂಪ್ರದಾಯಿಕ ದಸರಾ, ಉದ್ಘಾಟನೆ ಮಾಡಲಿದ್ದಾರೆ ಸುಧಾಮೂರ್ತಿಈ ಬಾರಿ ಸಾಂಪ್ರದಾಯಿಕ ದಸರಾ, ಉದ್ಘಾಟನೆ ಮಾಡಲಿದ್ದಾರೆ ಸುಧಾಮೂರ್ತಿ

ಮೊನ್ನೆಯಷ್ಟೆ ಕೊಡಗಿನ ಪ್ರವಾಹ ಪರಿಸ್ಥಿತಿ ವೀಕ್ಷಿಸಲು ಬಂದಿದ್ದ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸಹ ಕೇಂದ್ರಕ್ಕೆ ಈಗಾಗಲೇ ವರದಿ ಸಲ್ಲಿಸಿದ್ದಾರೆ. ಜೊತೆಗೆ ಆರು ಕೋಟಿ ನೆರವು ಸಹ ನೀಡಿದ್ದರು. ರಾಜ್ಯ ಸರ್ಕಾರ ಕೂಡ ಈಗಾಗಲೇ ಕೊಡಗಿನ ಪರಿಸ್ಥಿತಿ ಬಗ್ಗೆ ಕೇಂದ್ರಕ್ಕೆ ವರದಿ ಸಲ್ಲಿಸಿದೆ.

English summary
CM Kumaraswamy flying to Delhi on August 30 to meet Home minister and prime minister Narendra Modi to ask help to Flood affected Kodagu. Central government yet not extended its help to Kodagu.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X