ಮಾಜಿ ಸಿಎಂ, ಮಾಜಿ ಜಲಸಂಪನ್ಮೂಲ ಸಚಿವರ ಜೊತೆ ಸಿಎಂ ಸಭೆ
ಬೆಂಗಳೂರು, ಡಿಸೆಂಬರ್ 05: ಸಿಎಂ ಕುಮಾರಸ್ವಾಮಿ ಅವರು ನಾಳೆ (ಡಿಸೆಂಬರ್ 06) ರಂದು ಮಾಜಿ ಮುಖ್ಯಮಂತ್ರಿಗಳು, ಮಾಜಿ ಜಲಸಂಪನ್ಮೂಲ ಸಚಿವರುಗಳ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ.
15ದಿನದ ನಂತರ ರಾಜ್ಯ, ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸ್ಥಿತ್ಯಂತರ: ರಾಜಗುರುಗಳ ಭವಿಷ್ಯ
ವೀಧಾನಸೌಧದಲ್ಲಿ ಈ ಸಭೆ ನಡೆಯಲಿದ್ದು, ಜಲವಿವಾದಗಳು ಮತ್ತು ನೀರಾವರಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಸಲಹೆಗಳನ್ನು ಪಡೆಯಲು ಈ ಸಭೆಯನ್ನು ಆಯೋಜಿಸಲಾಗಿದೆ. ಪ್ರಸ್ತುತ ಹಲವು ಸಚಿವರುಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಜಾವಡೇಕರ್ 'ಧಮಾಕಾ' ಹೇಳಿಕೆಗೆ ಎಚ್ಡಿಕೆ ರಿವರ್ಸ್ ಶಾಟ್!
ಕೃಷ್ಣಾ, ಕಾವೇರಿ, ಮಹದಾಯಿ ಸೇರಿದಂತೆ ಇತರೆ ಜಲಾನಯನ ಭಾಗದಲ್ಲಿ ನೀರಿನ ಸಮಪರ್ಕ ಬಳಕೆ ಹಾಗೂ ಅಂತಾರಾಜ್ಯ ಜಲ ವಿವಾದಗಳ ಬಗ್ಗೆ ಈ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗುತ್ತದೆ.
ಯಡಿಯೂರಪ್ಪ, ಸಿದ್ದರಾಮಯ್ಯ, ಎಸ್.ಎಂ.ಕೃಷ್ಣ, ವೀರಪ್ಪ ಮೊಯ್ಲಿ ಇನ್ನೂ ಹಲವು ಪ್ರಮುಖ ರಾಜಕೀಯ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಎಂಬಿ.ಪಾಟೀಲ್, ಡಿ.ಕೆ.ಶಿವಕುಮಾರ್ ಹಾಗೂ ಇನ್ನೂ ಹಲವು ತಜ್ಞರು ಸಭೆಯಲ್ಲಿರಲಿದ್ದಾರೆ.