Get Updates
Get notified of breaking news, exclusive insights, and must-see stories!

ಕುಮಾರಸ್ವಾಮಿ ಅನಾರೋಗ್ಯ: ಜಯದೇವ ವೈದ್ಯರ ರಿಪೋರ್ಟ್‌

Recommended Video

      ಎಚ್ ಡಿ ಕೆ ಅನಾರೋಗ್ಯದ ಹಿನ್ನೆಲೆ ಜಯದೇವ ಆಸ್ಪತ್ರಯಿಂದ ಬಂತು ವರದಿ | Oneindia Kannada

      ಬೆಂಗಳೂರು, ಅಕ್ಟೋಬರ್ 24: ಇಂದು ಬೆಳಿಗ್ಗೆ ಇದ್ದಕ್ಕಿದ್ದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿ ಆಸ್ಪತ್ರೆ ಸೇರಿದ್ದರು.

      ಆರೋಗ್ಯದಲ್ಲಿ ವ್ಯತ್ಯಯ ಆದ ವಾಲ್ಮಿಕಿ ಜಯಂತಿ ಸೇರಿದಂತೆ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಲಾಯಿತು. ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಬಂದಿದ್ದ ಸಮುದಾಯದ ಜನರ ವಿರೋಧಕ್ಕೂ ಇದು ಕಾರಣವಾಯಿತು.

      ಆದರೆ ಇದೀಗ ಕುಮಾರಸ್ವಾಮಿ ಅವರ ಆರೋಗ್ಯದ ಕುರಿತು ವೈದ್ಯರ ವರದಿ ಬಂದಿದ್ದು, ಅವರು ಆರೋಗ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ, ಆಸ್ಪತ್ರೆಯಿಂದ ಅವರು ಡಿಸ್ಚಾರ್ಜ್‌ ಆಗಿದ್ದು ಮನೆಗೆ ತೆರಳಿದ್ದಾರೆ ಎಂದು ಜಯದೇವ ಆಸ್ಪತ್ರೆಯ ನಿರ್ದೇಶಕ ವೈದ್ಯ ಮಂಜುನಾಥ ಅವರು ಹೇಳಿದ್ದಾರೆ.

      ಕುಮಾರಸ್ವಾಮಿ ಅವರಿಗೆ ಬೆಳಿಗ್ಗೆ ಏಕಾ-ಏಕಿ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಅವರನ್ನು ಜಯದೇವ ಆಸ್ಪತ್ರೆಗೆ ಅಡ್ಮಿಟ್‌ ಮಾಡಲಾಗಿತ್ತು. ಅಲ್ಲಿ ಅವರಿಗೆ ಅವರ ಸಂಬಂಧಿಕರೇ ಆಗಿರುವ ವೈದ್ಯ ಮಂಜುನಾಥ ಅವರು ಚಿಕಿತ್ಸೆ ನೀಡಿದ್ದಾರೆ.

      ಇಸಿಜಿ, ಎಂಆರ್‌ಐ ಸ್ಕಾನ್‌ ಮಾಡಿದ ವೈದ್ಯರು

      ಇಸಿಜಿ, ಎಂಆರ್‌ಐ ಸ್ಕಾನ್‌ ಮಾಡಿದ ವೈದ್ಯರು

      ಕುಮಾರಸ್ವಾಮಿ ಅವರಿಗೆ ಜಯದೇವದಲ್ಲಿ ಇಸಿಜಿ, ಎಂಆರ್‌ಐ ಸ್ಕಾನ್‌ಗಳನ್ನು ಮಾಡಲಾಗಿದೆ. ಅವರಿಗೆ ಸಕ್ಕರೆ ಖಾಯಿಲೆ ಸಹ ಇರುವ ಕಾರಣ ರೆಗ್ಯುಲರ್ ಚೆಕಪ್ ಸಹ ಮಾಡಲಾಗಿದೆ. ಎರಡು ಬಾರಿ ಹೃದಯ ಶಸ್ತ್ರ ಚಿಕಿತ್ಸೆ ಕೂಡ ಇರುವ ಕಾರಣ ಇನ್ನೂ ಕೆಲವು ಪರೀಕ್ಷೆಗಳ್ನು ಮಾಡಲಾಗಿದೆ.

      ಕುಮಾರಸ್ವಾಮಿಗೆ 24 ಗಂಟೆ ಬೆಡ್‌ರೆಸ್ಟ್‌

      ಕುಮಾರಸ್ವಾಮಿಗೆ 24 ಗಂಟೆ ಬೆಡ್‌ರೆಸ್ಟ್‌

      ಎಲ್ಲ ಪರೀಕ್ಷೆಗಳ ವರದಿಯ ಪ್ರಕಾರ ಗಂಭೀರವಾದ ಆರೋಗ್ಯ ಸಮಸ್ಯೆ ಕುಮಾರಸ್ವಾಮಿ ಅವರಿಗೆ ಇಲ್ಲ, ಒತ್ತಡದ ಕಾರಣ ಹಾಗೂ ಆಹಾರದಲ್ಲಿ ವ್ಯತ್ಯಾಸದ ಕಾರಣ ಹೊಟ್ಟೆ ನೋವು ಕಾಣಿಸಿಕೊಂಡಿದೆ ಅವರು ಇದೀಗ ಮನೆಗೆ ತೆರಳಿದ್ದು, ಅವರಿಗೆ 24 ಗಂಟೆಗಳ ಬೆಡ್‌ ರೆಸ್ಟ್‌ನ ಅವಶ್ಯಕತೆ ಇದೆ ಎಂದು ವೈದ್ಯ ಮಂಜುನಾಥ ಅವರು ಹೇಳಿದ್ದಾರೆ.

      ಎಚ್‌ಡಿಕೆಗೆ ಒತ್ತಡ ಹೆಚ್ಚಾಗಿದೆ

      ಎಚ್‌ಡಿಕೆಗೆ ಒತ್ತಡ ಹೆಚ್ಚಾಗಿದೆ

      ಕುಮಾರಸ್ವಾಮಿ ಅವರಿಗೆ ಒತ್ತಡ ಹೆಚ್ಚಾಗಿದೆ ಎಂದು ಹಿರಿಯ ವೈದ್ಯ ಮಂಜುನಾಥ ಅವರು ಹೇಳಿದ್ದಾರೆ. ಪ್ರತಿನಿತ್ಯ ಟಿವಿಗಳಲ್ಲಿ ಬರುವ ಎಲ್ಲ ಸುದ್ದಿಗಳನ್ನು ನೋಡಿ ಒತ್ತಡಕ್ಕೆ ಒಳಗಾಗುತ್ತಾರೆ ಅದಕ್ಕೆಲ್ಲಾ ಪ್ರತಿಕ್ರಿಯಿಸುತ್ತಾರೆ ಇದು ಒತ್ತಡ ಹೆಚ್ಚಿಸುತ್ತದೆ. ಅವರಿಗೆ ಇಂತಹಾ ಸುದ್ದಿಗಳನ್ನು ನೋಡಬೇಡಿ, ನೋಡಿದರೂ ಮನಸ್ಸಿಗೆ ತೆಗೆದುಕೊಳ್ಳಬೇಡಿ ಎಂದು ಸಲಹೆ ನೀಡಿದ್ದೇವೆ ಎಂದು ಅವರು ಹೇಳಿದ್ದಾರೆ.

      ಎರಡು ಬಾರಿ ಹೃದಯ ಶಸ್ತ್ರ ಚಿಕಿತ್ಸೆ

      ಎರಡು ಬಾರಿ ಹೃದಯ ಶಸ್ತ್ರ ಚಿಕಿತ್ಸೆ

      ಕುಮಾರಸ್ವಾಮಿ ಅವರಿಗೆ ಎರಡು ಬಾರಿ ಹೃದಯ ಶಸ್ತ್ರ ಚಿಕಿತ್ಸೆ ಆಗಿತ್ತು. ಒಮ್ಮೆ ಬೆಂಗಳೂರಿನಲ್ಲಿ ಆಗಿದ್ದರೆ ಮತ್ತೊಮ್ಮೆ ಸಿಂಗಪುರದಲ್ಲಿ ಚಿಕತ್ಸೆ ಪಡೆದುಕೊಂಡಿದ್ದರು. ಹಾಗಾಗಿ ಇಂದು ಅವರಿಗೆ ಆರೋಗ್ಯದಲ್ಲಿ ವ್ಯತ್ಯವಾದಾಗ ಅವರ ಬೆಂಬಲಿಗರು ಆತಂಕಕ್ಕೆ ಒಳಗಾಗಿದ್ದರು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+