ಕುಮಾರಸ್ವಾಮಿ ಅನಾರೋಗ್ಯ: ಜಯದೇವ ವೈದ್ಯರ ರಿಪೋರ್ಟ್
Recommended Video

ಬೆಂಗಳೂರು, ಅಕ್ಟೋಬರ್ 24: ಇಂದು ಬೆಳಿಗ್ಗೆ ಇದ್ದಕ್ಕಿದ್ದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿ ಆಸ್ಪತ್ರೆ ಸೇರಿದ್ದರು.
ಆರೋಗ್ಯದಲ್ಲಿ ವ್ಯತ್ಯಯ ಆದ ವಾಲ್ಮಿಕಿ ಜಯಂತಿ ಸೇರಿದಂತೆ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಲಾಯಿತು. ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಬಂದಿದ್ದ ಸಮುದಾಯದ ಜನರ ವಿರೋಧಕ್ಕೂ ಇದು ಕಾರಣವಾಯಿತು.
ಆದರೆ ಇದೀಗ ಕುಮಾರಸ್ವಾಮಿ ಅವರ ಆರೋಗ್ಯದ ಕುರಿತು ವೈದ್ಯರ ವರದಿ ಬಂದಿದ್ದು, ಅವರು ಆರೋಗ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ, ಆಸ್ಪತ್ರೆಯಿಂದ ಅವರು ಡಿಸ್ಚಾರ್ಜ್ ಆಗಿದ್ದು ಮನೆಗೆ ತೆರಳಿದ್ದಾರೆ ಎಂದು ಜಯದೇವ ಆಸ್ಪತ್ರೆಯ ನಿರ್ದೇಶಕ ವೈದ್ಯ ಮಂಜುನಾಥ ಅವರು ಹೇಳಿದ್ದಾರೆ.
ಕುಮಾರಸ್ವಾಮಿ ಅವರಿಗೆ ಬೆಳಿಗ್ಗೆ ಏಕಾ-ಏಕಿ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಅವರನ್ನು ಜಯದೇವ ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿತ್ತು. ಅಲ್ಲಿ ಅವರಿಗೆ ಅವರ ಸಂಬಂಧಿಕರೇ ಆಗಿರುವ ವೈದ್ಯ ಮಂಜುನಾಥ ಅವರು ಚಿಕಿತ್ಸೆ ನೀಡಿದ್ದಾರೆ.

ಇಸಿಜಿ, ಎಂಆರ್ಐ ಸ್ಕಾನ್ ಮಾಡಿದ ವೈದ್ಯರು
ಕುಮಾರಸ್ವಾಮಿ ಅವರಿಗೆ ಜಯದೇವದಲ್ಲಿ ಇಸಿಜಿ, ಎಂಆರ್ಐ ಸ್ಕಾನ್ಗಳನ್ನು ಮಾಡಲಾಗಿದೆ. ಅವರಿಗೆ ಸಕ್ಕರೆ ಖಾಯಿಲೆ ಸಹ ಇರುವ ಕಾರಣ ರೆಗ್ಯುಲರ್ ಚೆಕಪ್ ಸಹ ಮಾಡಲಾಗಿದೆ. ಎರಡು ಬಾರಿ ಹೃದಯ ಶಸ್ತ್ರ ಚಿಕಿತ್ಸೆ ಕೂಡ ಇರುವ ಕಾರಣ ಇನ್ನೂ ಕೆಲವು ಪರೀಕ್ಷೆಗಳ್ನು ಮಾಡಲಾಗಿದೆ.

ಕುಮಾರಸ್ವಾಮಿಗೆ 24 ಗಂಟೆ ಬೆಡ್ರೆಸ್ಟ್
ಎಲ್ಲ ಪರೀಕ್ಷೆಗಳ ವರದಿಯ ಪ್ರಕಾರ ಗಂಭೀರವಾದ ಆರೋಗ್ಯ ಸಮಸ್ಯೆ ಕುಮಾರಸ್ವಾಮಿ ಅವರಿಗೆ ಇಲ್ಲ, ಒತ್ತಡದ ಕಾರಣ ಹಾಗೂ ಆಹಾರದಲ್ಲಿ ವ್ಯತ್ಯಾಸದ ಕಾರಣ ಹೊಟ್ಟೆ ನೋವು ಕಾಣಿಸಿಕೊಂಡಿದೆ ಅವರು ಇದೀಗ ಮನೆಗೆ ತೆರಳಿದ್ದು, ಅವರಿಗೆ 24 ಗಂಟೆಗಳ ಬೆಡ್ ರೆಸ್ಟ್ನ ಅವಶ್ಯಕತೆ ಇದೆ ಎಂದು ವೈದ್ಯ ಮಂಜುನಾಥ ಅವರು ಹೇಳಿದ್ದಾರೆ.

ಎಚ್ಡಿಕೆಗೆ ಒತ್ತಡ ಹೆಚ್ಚಾಗಿದೆ
ಕುಮಾರಸ್ವಾಮಿ ಅವರಿಗೆ ಒತ್ತಡ ಹೆಚ್ಚಾಗಿದೆ ಎಂದು ಹಿರಿಯ ವೈದ್ಯ ಮಂಜುನಾಥ ಅವರು ಹೇಳಿದ್ದಾರೆ. ಪ್ರತಿನಿತ್ಯ ಟಿವಿಗಳಲ್ಲಿ ಬರುವ ಎಲ್ಲ ಸುದ್ದಿಗಳನ್ನು ನೋಡಿ ಒತ್ತಡಕ್ಕೆ ಒಳಗಾಗುತ್ತಾರೆ ಅದಕ್ಕೆಲ್ಲಾ ಪ್ರತಿಕ್ರಿಯಿಸುತ್ತಾರೆ ಇದು ಒತ್ತಡ ಹೆಚ್ಚಿಸುತ್ತದೆ. ಅವರಿಗೆ ಇಂತಹಾ ಸುದ್ದಿಗಳನ್ನು ನೋಡಬೇಡಿ, ನೋಡಿದರೂ ಮನಸ್ಸಿಗೆ ತೆಗೆದುಕೊಳ್ಳಬೇಡಿ ಎಂದು ಸಲಹೆ ನೀಡಿದ್ದೇವೆ ಎಂದು ಅವರು ಹೇಳಿದ್ದಾರೆ.

ಎರಡು ಬಾರಿ ಹೃದಯ ಶಸ್ತ್ರ ಚಿಕಿತ್ಸೆ
ಕುಮಾರಸ್ವಾಮಿ ಅವರಿಗೆ ಎರಡು ಬಾರಿ ಹೃದಯ ಶಸ್ತ್ರ ಚಿಕಿತ್ಸೆ ಆಗಿತ್ತು. ಒಮ್ಮೆ ಬೆಂಗಳೂರಿನಲ್ಲಿ ಆಗಿದ್ದರೆ ಮತ್ತೊಮ್ಮೆ ಸಿಂಗಪುರದಲ್ಲಿ ಚಿಕತ್ಸೆ ಪಡೆದುಕೊಂಡಿದ್ದರು. ಹಾಗಾಗಿ ಇಂದು ಅವರಿಗೆ ಆರೋಗ್ಯದಲ್ಲಿ ವ್ಯತ್ಯವಾದಾಗ ಅವರ ಬೆಂಬಲಿಗರು ಆತಂಕಕ್ಕೆ ಒಳಗಾಗಿದ್ದರು.
-
ವಾಸ್ತು ಮಾತ್ರ ಸಾಲದು! ನಿಮ್ಮ ಜಾತಕವೇ ಯಶಸ್ಸನ್ನು ನಿರ್ಧರಿಸುತ್ತದೆ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications