ಎಚ್ಡಿಕೆ ಜನತಾ ದರ್ಶನ ಸಮಯ ಬದಲು: ಎಲ್ಲಿ? ಯಾವಾಗ? ಇಲ್ಲಿದೆ ಮಾಹಿತಿ
Recommended Video

ಬೆಂಗಳೂರು, ಆಗಸ್ಟ್ 27: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜನತಾ ದರ್ಶನ ಮಾಡುವ ಸಮಯ ಬದಲಾಗಿದ್ದು. ಇನ್ನು ಮುಂದೆ ಶನಿವಾರ ಮಾತ್ರವೇ ಸಿಎಂ ಅವರು ಸಾರ್ವಜನಿಕರನ್ನು ಭೇಟಿ ಆಗಲಿದ್ದಾರೆ.
ಅನಿಯಮಿತವಾಗಿ ಸಾರ್ವಜಿಕರು, ಗೃಹ ಕಚೇರಿ ಕೃಷ್ಣಾ, ವಿಧಾನಸೌಧದ ಸಿಎಂ ಕಚೇರಿ, ಜೆ.ಪಿ ನಗರ ನಿವಾಸಗಳಿಗೆ ಭೇಟಿ ನೀಡುತ್ತಿರುವ ಕಾರಣ ಮುಖ್ಯಮಂತ್ರಿಗಳ ನಿಗದಿತ ಕಾರ್ಯಕ್ರಮಗಳಿಗೆ ತೊಂದರೆ ಆಗುತ್ತಿದೆ ಹಾಗಾಗಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ.
ಮುಖ್ಯಮಂತ್ರಿಗಳ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬದಲಾದ ವೇಳಾಪಟ್ಟಿಯ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಮುಖ್ಯಮಂತ್ರಿಗಳು ತಮ್ಮ ಪೂರ್ವ ನಿಗದಿತ ಕಾರ್ಯಕ್ರಮಗಳಿಗೆ ಸರಿಯಾದ ಸಮಯಕ್ಕೆ ಹೋಗಲಾಗುತ್ತಿಲ್ಲವಾದ ಕಾರಣ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಟ್ವಿಟ್ಟರ್ನಲ್ಲಿ ಪ್ರಕಟಿಸಿರುವ ಪತ್ರದಲ್ಲಿ ಹೇಳಿದ್ದಾರೆ.

ಶನಿವಾರ ಬೆಳಿಗ್ಗೆ 11 ರಿಂದ ಸಂಜೆ 4:30
ಇಷ್ಟು ದಿನ ಅನಿಯಮಿತವಾಗಿ ಸಮಯಾವಕಾಶ ಸಿಕ್ಕಾಗಲೆಲ್ಲಾ ಅಥವಾ ಪ್ರತಿದಿನ ಬೆಳಿಗ್ಗೆ ಸಮಯ ಗೃಹ ಕಚೇರಿ ಕೃಷ್ಣಾ ಎದುರು ಕುಮಾರಸ್ವಾಮಿ ಅವರು ಸಾರ್ವಜನಿಕರ ಭೇಟಿ ಆಗುತ್ತಿದ್ದರು. ಆದರೆ ಇನ್ನು ಮುಂದೆ ಶನಿವಾರ ಬೆಳಿಗ್ಗೆ 11 ರಿಂದ ಸಂಜೆ 4:30ರ ವರವರೆಗೆ ಮಾತ್ರ ಸಿಎಂ ಅವರು ಸಾರ್ವಜನಿಕರನ್ನು ಭೇಟಿ ಆಗಲಿದ್ದಾರೆ.

ಗೃಹ ಕಚೇರಿ ಕೃಷ್ಣಾ ಬಳಿ ಸಾರ್ವಜನಿಕ ಭೇಟಿ
ಮುಖ್ಯಮಂತ್ರಿ ಅವರು ಬೆಂಗಳೂರಿನಲ್ಲಿದ್ದಾಗ ಮಾತ್ರವೇ ಶನಿವಾರದಂದು ಸಾರ್ವಜನಿಕರ ದರ್ಶನಕ್ಕೆ ಸಿಗಲಿದ್ದು. ಸಾರ್ವಜನಿಕ ಭೇಟಿಯು ಗೃಹ ಕಚೇರಿ ಕೃಷ್ಣದಲ್ಲಿ ನಡೆಯಲಿದೆ.

ಖಾಸಗಿ ದೂರು ಸ್ವೀಕರಿಸುವುದಿಲ್ಲ
ಮುಖ್ಯಮಂತ್ರಿ ಅವರ ಸಾರ್ವಜನಿಕ ಭೇಟಿ ಸಂದರ್ಭದಲ್ಲಿ ಯಾವುದೇ ಖಾಸಗಿ ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಸಿಎಂ ಅವರ ಕಚೇರಿ ಮಾಹಿತಿ ನೀಡಿದೆ. ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದ ದೂರುಗಳೂ ಸಹ ಸಾರ್ವಜನಿಕ ಭೇಟಿ ಸಂದರ್ಭ ನೀಡುವಂತಿಲ್ಲ. ಸರ್ಕಾರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಮಾತ್ರವೇ ಸಾರ್ವಜನಿಕರು ನೀಡಬೇಕಿರುತ್ತದೆ.

ವೈದ್ಯಕೀಯ ಪರಿಹಾರಕ್ಕೆ ಬೇಡಿಕೆ ಇಡುವವರು ದಾಖಲಾತಿ ತನ್ನಿ
ವೈದ್ಯಕೀಯ ಪರಿಹಾರ ನಿಧಿಗೆ ಬೇಡಿಕೆ ಇಡುವವರು, ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡ್, ವೈದ್ಯಕೀಯ ಬಿಲ್ ವಿವರ, ಚಿಕಿತ್ಸೆಯ ವಿವರದ ಜೊತೆಗೆ ಲಿಖಿತ ಮನವಿ ಸಲ್ಲಿಸಬೇಕಿದೆ. ಸಾರ್ವಜನಿಕ ಭೇಟಿ ಸಮಯದಲ್ಲಿ ಮುಖ್ಯಮಂತ್ರಿಗಳ ಸಲಹೆ ಸೂಚನೆಯಂತೆ ತೆಗೆದುಕೊಳ್ಳಲಾದ ಕ್ರಮಗಳನ್ನು ಎಸ್ಎಂಎಸ್ ಮೂಲಕ ದೂರುದಾರರ ಗಮನಕ್ಕೆ ತರಲಾಗುವುದು.
-
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ












Click it and Unblock the Notifications