ಬಜೆಟ್ ಮುಗಿಯುವವರೆಗೂ 'ಜನತಾದರ್ಶನ' ಇಲ್ಲ, ಸಾರ್ವಜನಿಕ ಭೇಟಿಯೂ ಇಲ್ಲ
Recommended Video

ಬೆಂಗಳೂರು, ಜೂನ್ 11: ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಹು ಜನಪ್ರಿಯ 'ಜನತಾ ದರ್ಶನ' ಕಾರ್ಯಕ್ರಮವು ನಾಳೆಯಿಂದ (ಜೂನ್ 12)ರಿಂದ ಸುಮಾರು ಒಂದು ತಿಂಗಳ ಕಾಲ ಇರುವುದಿಲ್ಲ.
ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿರುವ ಮುಖ್ಯಮಂತ್ರಿಗಳ ಕಚೇರಿ, ಮುಖ್ಯಮಂತ್ರಿ ಅವರು ಆಯವ್ಯಯ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಬೇಕಾಗಿರುವುದರಿಂದ ಬಜೆಟ್ ಅಧಿವೇಶನ ಮುಕ್ತಾಯಗೊಳ್ಳುವವರೆಗೆ ಜನತಾ ದರ್ಶನ ಮತ್ತು ಸಾರ್ವಜನಿಕರ ಭೇಟಿಯನ್ನು ಮುಂದೂಡಲಾಗಿದೆ' ಎಂದು ತಿಳಿಸಿದ್ದಾರೆ.

ಬಜೆಟ್ ಅಧಿವೇಶನವು ಮುಂದಿನ ತಿಂಗಳು ಮೊದಲ ಅಥವಾ ಎರಡನೇ ವಾರ ನಡೆಯಲಿದ್ದು, ಅಲ್ಲಿಯವರೆಗೆ ಜನತಾದರ್ಶನ ಮತ್ತು ಸಾರ್ವಜನಿಕ ಭೇಟಿ ಇರುವುದಿಲ್ಲ. ಇಂದು ಕೂಡ ಮುಖ್ಯಮಂತ್ರಿ ಅವರು ಜನತಾದರ್ಶನ ಮಾಡಲಿಲ್ಲ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಬಂದಿದ್ದ ಜನರ ಅವಹಾಲುಗಳನ್ನು ಅಧಿಕಾರಿಗಳೇ ಸ್ವೀಕರಿಸಿದರು.
ಈ ಬಾರಿಯ ಬಜೆಟ್ನಲ್ಲಿ ರೈತ ಸಾಲ ಮನ್ನಾ ಘೋಷಣೆ ಮಾಡಲು ಕುಮಾರಸ್ವಾಮಿ ತಯಾರಿ ನಡೆಸಿದ್ದು, ಅದಕ್ಕೆಂದು ಈಗಾಗಲೇ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಮೈತ್ರಿ ಸರ್ಕಾರದ ಮೊದಲ ಬಜೆಟ್ ಸಹ ಇದಾಗಿರುವುದರಿಂದ ಪೂರ್ಣ ಗಮನ ಬಜೆಟ್ ಕಡೆ ನೀಡಬೇಕಾದ ಕಾರಣ ಜನತಾದರ್ಶನ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಜನತಾದರ್ಶನ ಕಾರ್ಯಕ್ರಮವು ಯಶಸ್ವಿ ಕಾರ್ಯಕ್ರಮವಾಗಿ ನಡೆಯುತ್ತಿತ್ತು. ಪ್ರತಿದಿನ ನೂರಾರು ಜನ ನೇರವಾಗಿ ಮುಖ್ಯಮಂತ್ರಿಗಳ ಬಳಿಯೇ ಅವಹಾಲು ಹೇಳಿಕೊಂಡು ಸ್ಥಳದಲ್ಲೇ ಪರಿಹಾರ ಪಡೆದುಕೊಳ್ಳುತ್ತಿದ್ದರು. ಆದರೆ ಇದಕ್ಕೆ ಈಗ ಅಲ್ಪ ವಿರಾಮ ಬಿದ್ದಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications