ಗೆಳೆಯ ಅಂಬರೀಶ್ ಕುರಿತು ಕುಮಾರಸ್ವಾಮಿ ಆತ್ಮೀಯ ಟ್ವೀಟ್
Recommended Video
ಬೆಂಗಳೂರು, ಮೇ 29: ಸುಮಲತಾ ಅಂಬರೀಶ್ ಅವರ ಎದುರು ಸೋಲು ಕಂಡಿದ್ದರೂ ಸಹ ಅಂಬರೀಶ್ ಹುಟ್ಟುಹಬ್ಬದಂದು ಅವರನ್ನು ನೆನಪಿಸಿಕೊಳ್ಳುವ ಮೂಲಕ ಕುಮಾರಸ್ವಾಮಿ ಸೌಜನ್ಯ ಮೆರೆದಿದ್ದಾರೆ.
ಅಂಬರೀಶ್ ಹುಟ್ಟುಹಬ್ಬದಂದು ಸಿಎಂ ಕುಮಾರಸ್ವಾಮಿ ಅವರು ಅಂಬರೀಶ್ ಅವರೊಂದಿಗೆ ಇದ್ದ ಆತ್ಮೀಯತೆಯನ್ನು ನೆನಪಿಸಿಕೊಂಡಿದ್ದಾರೆ.
ಬದಲಾದ ಸನ್ನಿವೇಶದಲ್ಲಿ ಅಂಬಿ ಪತ್ನಿ ಸುಮಲತಾ ಅವರು ಕುಮಾರಸ್ವಾಮಿ ಅವರ ರಾಜಕೀಯ ಎದುರಾಳಿಯಾಗಿ ಬದಲಾಗಿದ್ದಾರೆ. ಆದರೆ ಕುಮಾರಸ್ವಾಮಿ ಅವರು ಅಂಬರೀಶ್ ಅವರನ್ನು ನೆನಪಿಸಿಕೊಳ್ಳಲು ಇದು ಅಡ್ಡಿಯಾಗಿಲ್ಲ.
ಟ್ವಿಟ್ಟರ್ನಲ್ಲಿ ಅಂಬರೀಶ್ ಅವರನ್ನು ಹುಟ್ಟುಹಬ್ಬದ ವಿಶೇಷ ಸಂದರ್ಭದಲ್ಲಿ ನೆನಪಿಸಿಕೊಂಡಿರುವ ಕುಮಾರಸ್ವಾಮಿ, 'ಅಂಬರೀಷ್ ಹಾಗೂ ನನ್ನ ಸ್ನೇಹ ಮರೆಯಲಾಗದಂತಹದ್ದು. ಸದಾ ಜನರ ಜೊತೆ ಬೆರೆತ, ಸಮುದಾಯದ ಏಳಿಗೆಯ ಬಗ್ಗೆ ಚಿಂತಿಸಿದ ಗೆಳೆಯನ ಜನ್ಮ ದಿನ ಇಂದು' ಎಂದು ಹೇಳಿದ್ದಾರೆ.
ಮುಂದುವರೆದು, 'ಅಂಬರೀಷ್ ಅವರ ಉದಾತ್ತ ಮನಸ್ಸು ಎಲ್ಲರಿಗೂ ದಕ್ಕಲಿ ಎಂದು ಹಾರೈಸುತ್ತೇನೆ' ಎಂದು ಸಹ ಕುಮಾರಸ್ವಾಮಿ ಹೇಳಿದ್ದಾರೆ.
|
ಸುಮಲತಾ ಅವರನ್ನುದ್ದೇಶಿಸಿಯೇ ಬರೆದಿದ್ದಾರಾ?
ಕುಮಾರಸ್ವಾಮಿ ಅವರು ಟ್ವಿಟ್ಟರ್ನಲ್ಲಿ ಬರೆದಿರುವ ಕೊನೆಯ ಮಾತುಗಳು ಸುಮಲತಾ ಅವರನ್ನು ಉದ್ದೇಶಿಸಿಯೇ ಬರೆಯಲಾಗಿರುವುದಾ ಎಂಬ ಅನುಮಾನವೂ ಮೂಡುವಂತಿದೆ. ಏಕೆಂದರೆ ಈ ಹಿಂದೆಯೂ ಕುಮಾರಸ್ವಾಮಿಯವರು ಅಂಬರೀಶ್ ಅವರನ್ನು ಸುಮಲತಾ ಅವರೊಂದಿಗೆ ಹೋಲಿಸುವಂತಿಲ್ಲ ಎಂದಿದ್ದರು.

ಎಚ್ಡಿಕೆ-ಅಂಬಿ ಬಹು ಕಾಲದ ಗೆಳೆಯರು
ಕುಮಾರಸ್ವಾಮಿ ಮತ್ತು ಅಂಬರೀಶ್ ಅವರು ಬಹಳ ಕಾಲದ ಸ್ನೇಹಿತರು. ಕುಮಾರಸ್ವಾಮಿ ಅವರು ರಾಜಕೀಯ ಪ್ರವೇಶಕ್ಕೆ ಮುನ್ನವೇ ಇಬ್ಬರೂ ಗೆಳೆಯರಾಗಿದ್ದರು. ಅಲ್ಲದೆ ಅಂಬರೀಶ್ ಅವರು ರಾಜಕೀಯ ಪ್ರವೇಶಿಸಿದ್ದು ಜೆಡಿಎಸ್ ಪಕ್ಷದ ಮೂಲಕವೇ.

ಅಂಬರೀಶ್ ನಿಧನದ ಸಮಯ ಸಿಎಂ ಸಹಾಯ
ಅಂಬರೀಶ್ ಅವರು ನಿಧನರಾದಾಗ ಕುಮಾರಸ್ವಾಮಿ ಅವರು ಎರಡು ದಿನಗಳ ಕಾಲ ಹತ್ತಿರವೇ ಇದ್ದು, ಎಲ್ಲ ಕಾರ್ಯಗಳನ್ನು ಸ್ವತಃ ಮುತುವರ್ಜಿ ವಹಿಸಿ ನಡೆಸಿಕೊಟ್ಟಿದ್ದನ್ನು ನೆನಪಿಸಿಕೊಳ್ಳಬಹುದು. ಅಂಬಿ ನಿಧನದ ಸಮಯದಲ್ಲೂ ಸಹ ಕುಮಾರಸ್ವಾಮಿ ಅವರು ಅಂಬರೀಶ್ ಮತ್ತು ತಮ್ಮ ನಡುವಿನ ಸ್ನೇಹದ ಬಗ್ಗೆ ಮಾತನಾಡಿದ್ದರು.

ಬದಲಾದ ರಾಜಕೀಯ ಸನ್ನಿವೇಶ
ಬದಲಾದ ಸನ್ನಿವೇಶದಲ್ಲಿ ಮಂಡ್ಯದಲ್ಲಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ಎದುರು ಸುಮಲತಾ ಅಂಬರೀಶ್ ಅವರು ಚುನಾವಣೆಗೆ ಸ್ಪರ್ಧಿಸಿದರು. ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ವಿರೋಧದ ನಡುವೆಯೂ ಸುಮಲತಾ ಅವರು ಚುನಾವಣೆಗೆ ನಿಂತಿದ್ದು ಎಚ್ಡಿಕೆ ಅವರನ್ನು ಕೆರಳಿಸಿತ್ತು. ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋತು ಸುಮಲತಾ ಗೆಲ್ಲುವ ಮೂಲಕ ಕುಮಾರಸ್ವಾಮಿ ಅವರಿಗೆ ಸುಮಲತಾ ಅವರು ಭಾರಿ ಮುಖಭಂಗವನ್ನೇ ಉಂಟು ಮಾಡಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications