ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೆಳೆಯ ಅಂಬರೀಶ್ ಕುರಿತು ಕುಮಾರಸ್ವಾಮಿ ಆತ್ಮೀಯ ಟ್ವೀಟ್

|
Google Oneindia Kannada News

Recommended Video

ಸೌಜನ್ಯ ಮೆರೆದ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಮೇ 29: ಸುಮಲತಾ ಅಂಬರೀಶ್ ಅವರ ಎದುರು ಸೋಲು ಕಂಡಿದ್ದರೂ ಸಹ ಅಂಬರೀಶ್ ಹುಟ್ಟುಹಬ್ಬದಂದು ಅವರನ್ನು ನೆನಪಿಸಿಕೊಳ್ಳುವ ಮೂಲಕ ಕುಮಾರಸ್ವಾಮಿ ಸೌಜನ್ಯ ಮೆರೆದಿದ್ದಾರೆ.

ಅಂಬರೀಶ್ ಹುಟ್ಟುಹಬ್ಬದಂದು ಸಿಎಂ ಕುಮಾರಸ್ವಾಮಿ ಅವರು ಅಂಬರೀಶ್ ಅವರೊಂದಿಗೆ ಇದ್ದ ಆತ್ಮೀಯತೆಯನ್ನು ನೆನಪಿಸಿಕೊಂಡಿದ್ದಾರೆ.

ಸುಮಲತಾ ಸೇರಿ, 2019ರ ಪಕ್ಷೇತರ ಸಂಸದರು ಯಾರು ಯಾರು? ಸುಮಲತಾ ಸೇರಿ, 2019ರ ಪಕ್ಷೇತರ ಸಂಸದರು ಯಾರು ಯಾರು?

ಬದಲಾದ ಸನ್ನಿವೇಶದಲ್ಲಿ ಅಂಬಿ ಪತ್ನಿ ಸುಮಲತಾ ಅವರು ಕುಮಾರಸ್ವಾಮಿ ಅವರ ರಾಜಕೀಯ ಎದುರಾಳಿಯಾಗಿ ಬದಲಾಗಿದ್ದಾರೆ. ಆದರೆ ಕುಮಾರಸ್ವಾಮಿ ಅವರು ಅಂಬರೀಶ್ ಅವರನ್ನು ನೆನಪಿಸಿಕೊಳ್ಳಲು ಇದು ಅಡ್ಡಿಯಾಗಿಲ್ಲ.

ಟ್ವಿಟ್ಟರ್‌ನಲ್ಲಿ ಅಂಬರೀಶ್ ಅವರನ್ನು ಹುಟ್ಟುಹಬ್ಬದ ವಿಶೇಷ ಸಂದರ್ಭದಲ್ಲಿ ನೆನಪಿಸಿಕೊಂಡಿರುವ ಕುಮಾರಸ್ವಾಮಿ, 'ಅಂಬರೀಷ್ ಹಾಗೂ ನನ್ನ ಸ್ನೇಹ ಮರೆಯಲಾಗದಂತಹದ್ದು. ಸದಾ ಜನರ ಜೊತೆ ಬೆರೆತ, ಸಮುದಾಯದ ಏಳಿಗೆಯ ಬಗ್ಗೆ ಚಿಂತಿಸಿದ ಗೆಳೆಯನ ಜನ್ಮ ದಿನ ಇಂದು' ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳ ಉಸ್ತುವಾರಿಯಲ್ಲಿ ಅಂಬರೀಶ್ ಅಂತ್ಯಕ್ರಿಯೆಮುಖ್ಯಮಂತ್ರಿಗಳ ಉಸ್ತುವಾರಿಯಲ್ಲಿ ಅಂಬರೀಶ್ ಅಂತ್ಯಕ್ರಿಯೆ

ಮುಂದುವರೆದು, 'ಅಂಬರೀಷ್ ಅವರ ಉದಾತ್ತ ಮನಸ್ಸು ಎಲ್ಲರಿಗೂ ದಕ್ಕಲಿ ಎಂದು ಹಾರೈಸುತ್ತೇನೆ' ಎಂದು ಸಹ ಕುಮಾರಸ್ವಾಮಿ ಹೇಳಿದ್ದಾರೆ.

ಸುಮಲತಾ ಅವರನ್ನುದ್ದೇಶಿಸಿಯೇ ಬರೆದಿದ್ದಾರಾ?

ಕುಮಾರಸ್ವಾಮಿ ಅವರು ಟ್ವಿಟ್ಟರ್‌ನಲ್ಲಿ ಬರೆದಿರುವ ಕೊನೆಯ ಮಾತುಗಳು ಸುಮಲತಾ ಅವರನ್ನು ಉದ್ದೇಶಿಸಿಯೇ ಬರೆಯಲಾಗಿರುವುದಾ ಎಂಬ ಅನುಮಾನವೂ ಮೂಡುವಂತಿದೆ. ಏಕೆಂದರೆ ಈ ಹಿಂದೆಯೂ ಕುಮಾರಸ್ವಾಮಿಯವರು ಅಂಬರೀಶ್ ಅವರನ್ನು ಸುಮಲತಾ ಅವರೊಂದಿಗೆ ಹೋಲಿಸುವಂತಿಲ್ಲ ಎಂದಿದ್ದರು.

ಎಚ್‌ಡಿಕೆ-ಅಂಬಿ ಬಹು ಕಾಲದ ಗೆಳೆಯರು

ಎಚ್‌ಡಿಕೆ-ಅಂಬಿ ಬಹು ಕಾಲದ ಗೆಳೆಯರು

ಕುಮಾರಸ್ವಾಮಿ ಮತ್ತು ಅಂಬರೀಶ್ ಅವರು ಬಹಳ ಕಾಲದ ಸ್ನೇಹಿತರು. ಕುಮಾರಸ್ವಾಮಿ ಅವರು ರಾಜಕೀಯ ಪ್ರವೇಶಕ್ಕೆ ಮುನ್ನವೇ ಇಬ್ಬರೂ ಗೆಳೆಯರಾಗಿದ್ದರು. ಅಲ್ಲದೆ ಅಂಬರೀಶ್ ಅವರು ರಾಜಕೀಯ ಪ್ರವೇಶಿಸಿದ್ದು ಜೆಡಿಎಸ್ ಪಕ್ಷದ ಮೂಲಕವೇ.

ಮೋದಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಕುಮಾರಸ್ವಾಮಿ ಮೋದಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಕುಮಾರಸ್ವಾಮಿ

ಅಂಬರೀಶ್ ನಿಧನದ ಸಮಯ ಸಿಎಂ ಸಹಾಯ

ಅಂಬರೀಶ್ ನಿಧನದ ಸಮಯ ಸಿಎಂ ಸಹಾಯ

ಅಂಬರೀಶ್ ಅವರು ನಿಧನರಾದಾಗ ಕುಮಾರಸ್ವಾಮಿ ಅವರು ಎರಡು ದಿನಗಳ ಕಾಲ ಹತ್ತಿರವೇ ಇದ್ದು, ಎಲ್ಲ ಕಾರ್ಯಗಳನ್ನು ಸ್ವತಃ ಮುತುವರ್ಜಿ ವಹಿಸಿ ನಡೆಸಿಕೊಟ್ಟಿದ್ದನ್ನು ನೆನಪಿಸಿಕೊಳ್ಳಬಹುದು. ಅಂಬಿ ನಿಧನದ ಸಮಯದಲ್ಲೂ ಸಹ ಕುಮಾರಸ್ವಾಮಿ ಅವರು ಅಂಬರೀಶ್ ಮತ್ತು ತಮ್ಮ ನಡುವಿನ ಸ್ನೇಹದ ಬಗ್ಗೆ ಮಾತನಾಡಿದ್ದರು.

ಮೈತ್ರಿ ಸರಕಾರ ಉಳಿಸಿಕೊಳ್ಳುವ ಕಸರತ್ತು, ಸರಣಿ ಸಭೆಗಳು!ಮೈತ್ರಿ ಸರಕಾರ ಉಳಿಸಿಕೊಳ್ಳುವ ಕಸರತ್ತು, ಸರಣಿ ಸಭೆಗಳು!

ಬದಲಾದ ರಾಜಕೀಯ ಸನ್ನಿವೇಶ

ಬದಲಾದ ರಾಜಕೀಯ ಸನ್ನಿವೇಶ

ಬದಲಾದ ಸನ್ನಿವೇಶದಲ್ಲಿ ಮಂಡ್ಯದಲ್ಲಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ಎದುರು ಸುಮಲತಾ ಅಂಬರೀಶ್ ಅವರು ಚುನಾವಣೆಗೆ ಸ್ಪರ್ಧಿಸಿದರು. ಕುಮಾರಸ್ವಾಮಿ ಹಾಗೂ ಕಾಂಗ್ರೆಸ್‌ ವಿರೋಧದ ನಡುವೆಯೂ ಸುಮಲತಾ ಅವರು ಚುನಾವಣೆಗೆ ನಿಂತಿದ್ದು ಎಚ್‌ಡಿಕೆ ಅವರನ್ನು ಕೆರಳಿಸಿತ್ತು. ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋತು ಸುಮಲತಾ ಗೆಲ್ಲುವ ಮೂಲಕ ಕುಮಾರಸ್ವಾಮಿ ಅವರಿಗೆ ಸುಮಲತಾ ಅವರು ಭಾರಿ ಮುಖಭಂಗವನ್ನೇ ಉಂಟು ಮಾಡಿದರು.

English summary
CM Kumaraswamy today tweets about Ambareesh on his berth anniversery. He said me and Ambareesh are very close friends. May all get his Noble mind.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X